AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ

ಅಂಗಡಿಗಳಲ್ಲಿ ಯಾವುದೇ ವಸ್ತುವನ್ನು ಖರೀದಿಸುವಾಗ ಅದರ ಎಕ್ಸ್​ಪೈರ್ ಡೇಟ್ ಪರಿಶೀಲಸಲಾಗುತ್ತದೆ. ಆದರೆ, ಅವಧಿ ಮೀರಿದ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿದರೆ ಏನು ಮಾಡೋದು? ಇಂತಹದ್ದೊಂದು ಪ್ರಕರಣ ಬೆಂಗಳೂರು ಉತ್ತರ ತಾಲೂಕಿನ ಗೋಪಾಲಪುರ ವೇರ್ ಹೌಸ್​ನಲ್ಲಿ ನಡೆದಿದೆ.

ನೆಲಮಂಗಲ: ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
ಅವಧಿ ಮೀರಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಎಕ್ಸ್​ಪೈರ್ ಡೇಟ್ ಮುದ್ರಿಸುತ್ತಿದ್ದ ಗೋಡೌನ್ ಮೇಲೆ ಪೊಲೀಸರ ದಾಳಿ
ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on: Dec 01, 2023 | 12:24 PM

Share

ನೆಲಮಂಗಲ, ಡಿ.1: ಹಣದಾಸೆಗೆ ಬಿದ್ದ ವ್ಯಕ್ತಿಯೊಬ್ಬ, ಅವಧಿ ಮೀರಿದ ಮಕ್ಕಳ ತಿಂಡಿ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರು (Bengaluru) ಉತ್ತರ ತಾಲೂಕಿನ ಗೋಪಾಲಪುರ ವೇರ್​ಹೌಸ್​ನಲ್ಲಿ ಬೆಳಕಿಗೆ ಬಂದಿದೆ. ಗೋಡೌನ್​ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೋರಮಂಗಲದ ರೋಹಿತ್ ಫರ್ನಾಂಡಿಸ್ ಎಂಬಾತ ಗ್ರಾಮದ ನಾರಯಣಪ್ಪ ಅವರಿಂದ ಆರು ತಿಂಗಳ ಹಿಂದೆ ಗೋಡೌನ್ ಅನ್ನು ಬಾಡಿಗೆಗೆ ಪಡೆದಿದ್ದನು. ಹಣದ ದುರಾಸೆಗೆ ಬಿದ್ದಿದ್ದ ರೋಹಿತ್ ಫರ್ನಾಂಡಿಸ್, ಕಂಪನಿಯ ಯಾವುದೇ ನಾಮಪಾಲಕ ಹಾಕದೆ ಬೆಂಗಳೂರಿನಿಂದ ಅವಧಿ ಮೀರಿದ ಆಹಾರ ಪ್ಯಾಕೇಟ್ ತರಿಸಿಕೊಂಡು ಹೊಸ ಅವಧಿ ದಿನಾಂಕ ಮುದ್ರಿಸುತ್ತಿದ್ದನು.

ಇದನ್ನೂ ಓದಿ: ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR

ಥಿನ್ನರ್ ಹಾಗೂ ಕೆಮಿಕಲ್ ಸಹಾಯದಿಂದ ಹೊಸ ಎಕ್ಸ್​ಪೈರ್ ಡೇಟ್ ಮುದ್ರಣ ಮಾಡಲಾಗುತ್ತಿತ್ತು. ಈ ವಿಚಾರ ಸ್ಥಳೀಯರಿಗೆ ತಿಳಿದು ಮಾಹಿತಿ ಬಹಿರಂಗವಾಗಿದೆ. ತಕ್ಷಣ ದಾಳಿ ನಡೆಸಿದ ಮಾದನಾಯಕನಹಳ್ಳಿ ಠಾಣಾ ಪೊಲೀಸರು, ಮ್ಯಾನೇಜರ್ ವೆಂಕಟೇಶ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಕೋಟ್ಯಂತರ ಮೌಲ್ಯದ ಆಹಾರ ಸಾಮಾಗ್ರಿಗಳು, ಧಿನ್ನರ್ ಹಾಗೂ ಕೆಮಿಕಲ್​ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ 15 ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ