AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIAL ಕೆಂಪೇಗೌಡ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಕಳಪೆ ಆಹಾರ ಪೂರೈಕೆ: ಕ್ಯಾಂಟಿನ್ ಗೆ ಬಿಸಿ ಮುಟ್ಟಿಸಿ, ಆಕ್ರೋಶ

ಪ್ರತಿದಿನ ಕಳಪೆ ಆಹಾರ ತಿನ್ನುತ್ತಿದ್ದ ಟ್ಯಾಕ್ಸಿ ಚಾಲಕರು ಈ ಬಗ್ಗೆ ಫುಡ್ ಸೆಫ್ಟಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜ ಆಗಿಲ್ಲವಂತೆ. ಹೀಗಾಗಿ ಇಂದು ಕಳಪೆ ಇಡ್ಲಿ, ಚಟ್ನಿ ತಿಂದ ಚಾಲಕರು ರೊಚ್ಚಿಗೆದ್ದು ಕ್ಯಾಂಟಿನ್ಗೆ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ. ಕ್ಯಾಂಟೀನ್​ ಟೆಂಡರ್ ರದ್ದು ಮಾಡಿ ಉತ್ತಮ ಆಹಾರ ನೀಡೋರಿಗೆ ಟೆಂಡರ್ ನೀಡುವಂತೆ ಏರ್ಪೊಟ್ ಅಧಿಕಾರಿಗಳಿಗೆ ಟ್ಯಾಕ್ಸಿ ಚಾಲಕರು ಆಗ್ರಹಿಸಿದ್ದಾರೆ.

KIAL ಕೆಂಪೇಗೌಡ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಕಳಪೆ ಆಹಾರ ಪೂರೈಕೆ: ಕ್ಯಾಂಟಿನ್ ಗೆ ಬಿಸಿ ಮುಟ್ಟಿಸಿ, ಆಕ್ರೋಶ
ಕೆಂಪೇಗೌಡ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಕಳಪೆ ಆಹಾರ ಪೂರೈಕೆ: ಕ್ಯಾಂಟಿನ್ ಗೆ ಬಿಸಿ ಮುಟ್ಟಿಸಿ, ಆಕ್ರೋಶ
ನವೀನ್ ಕುಮಾರ್ ಟಿ
| Edited By: |

Updated on: Nov 23, 2023 | 11:04 AM

Share

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ ಸಾವಿರಾರು ಟ್ಯಾಕ್ಸಿಗಳು ಸಂಚರಿಸುತ್ತವೆ. ಇದೇ ಟ್ಯಾಕ್ಸಿಗಳು ನಿಲ್ಲಿಸುವ ಪಾರ್ಕಿಂಗ್ ಏರಿಯಾದ ಕ್ಯಾಂಟಿನ್ ನಲ್ಲಿ ಕಳಪೆ ಆಹಾರ ಪೂರೈಕೆ ಮಾಡುತ್ತಿರೋ ಆರೋಪ ಕೇಳಿ ಬಂದಿದೆ. ಕಳಪೆ ಆಹಾರ ನೀಡುತ್ತಿರುವ ಆರೋಪದ ಹಿನ್ನಲೆ ಟ್ಯಾಕ್ಸಿ ಚಾಲಕರು (KIAL taxi Drivers protest) ಕ್ಯಾಂಟಿನ್ (canteen) ಗೆ ನುಗ್ಗಿ ಆಕ್ರೋಶ ಹೊರ ಹಾಕಿದ್ದಾರೆ. ಕಳಪೆ ಆಹಾರ (Food) ನೀಡ್ತಿದ್ದಾರೆ ಅಂತಾ ಕ್ಯಾಂಟಿನ್ ಗೆ ಮುತ್ತಿಗೆ ಹಾಕಿರೋ ನೂರಾರು ಟ್ಯಾಕ್ಸಿ ಚಾಲಕರು…. ಕ್ಯಾಂಟಿನ್ ನಲ್ಲಿ ತಯಾರಾಗಿದ್ದ ತಿಂಡಿಗಳನ್ನ ಹೊರಗಡೆ ತಂದಿಟ್ಟು ಆಕ್ರೋಶ ವ್ಯಕ್ತಪಡಿಸುತ್ತಿರೋ ಡ್ರೈವರ್ ಗಳು.. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ 7 ಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ಆಹಾರ ಇಲಾಖೆ ಅಧಿಕಾರಿಗಳು. ಹೌದು ಅಂದಹಾಗೆ ಈ ದೃಶ್ಯಗಳೆಲ್ಲ ನಿನ್ನೆ ಬುಧವಾರ ಕಂಡು ಬಂದಿದ್ದು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ.

ಅಂದಹಾಗೆ KIAL ಏರ್ಪೊಟ್ ಪಿ 7 ಪಾರ್ಕಿಂಗ್ ನಲ್ಲಿದ್ದ ನೂರಾರು ಚಾಲಕರು ಕ್ಯಾಂಟಿನಲ್ಲಿ ಕಳಪೆ ಆಹಾರ ನೀಡ್ತಿದ್ದಾರೆ ಅಂತಾ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಸಾವಿರಾರು ಟ್ಯಾಕ್ಸಿ ಚಾಲಕರು ಇದೇ ಕ್ಯಾಂಟಿನ್ ನಲ್ಲಿ ಪ್ರತಿನಿತ್ಯ ತಿಂಡಿ ಊಟವನ್ನ ಮಾಡ್ತಿದ್ರು. ಆದರೆ ಇತ್ತಿಚೆಗೆ ಕ್ಯಾಂಟಿನ್ ನಲ್ಲಿ ರಾತ್ರಿ ಉಳಿದ ಅನ್ನವನ್ನೆ ಬಿಸಿ ಮಾಡಿ ಬೆಳಗ್ಗೆ ಕಳಪೆ ಆಹಾರವಾಗಿ ಕೊಡುತ್ತಿದ್ದಾರಂತೆ. ಹೀಗಾಗಿ ನಿನ್ನೆ ಕ್ಯಾಂಟಿನ್ ನ ಒಳಗಡೆ ಕಳಪೆ‌ ಆಹಾರ ಕೊಡ್ತಿದ್ದಾರೆ ಅಂತ ಟ್ಯಾಕ್ಸಿ ಚಾಲಕರು ಕ್ಯಾಂಟಿನ್ ಒಳಗಡೆ ನುಗ್ಗಿ ಕಳಪೆ ಆಹಾರವನ್ನ ಹೊರಗಡೆ ತಂದು ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿದಿನ ಕಳಪೆ ಆಹಾರ ತಿನ್ನುತ್ತಿದ್ದ ಟ್ಯಾಕ್ಸಿ ಚಾಲಕರು ಈ ಬಗ್ಗೆ ಪುಡ್ ಸೆಪ್ಟಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜ ಆಗಿಲ್ಲವಂತೆ. ಹೀಗಾಗಿ ಇಂದು ಕಳಪೆ ಇಡ್ಲಿ, ಚಟ್ನಿ ತಿಂದ ಚಾಲಕರು ರೊಚ್ಚಿಗೆದ್ದು ಕ್ಯಾಂಟಿನ್ಗೆ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ. ಜೊತೆಗೆ ಇಂತಹ ಕಳಪೆ ಆಹಾರ ಕೊಡುವವವರ ಟೆಂಡರ್ ರದ್ದು ಮಾಡಿ ಉತ್ತಮ ಆಹಾರ ನೀಡೋರಿಗೆ ಟೆಂಡರ್ ನೀಡುವಂತೆ ಏರ್ಪೊಟ್ ಅಧಿಕಾರಿಗಳಿಗೆ ಟ್ಯಾಕ್ಸಿ ಚಾಲಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral: 4 ವಾರವಾದರೂ ಬಿಯರ್​​​​ನ ಅಮಲು ಬಿಡಲಿಲ್ಲ, ‘ಲಾಂಗ್ ಹ್ಯಾಂಗೋವರ್’ ದಾಖಲೆ ಮಾಡಿದ ವ್ಯಕ್ತಿ!

ಇನ್ನೂ ಏರ್ಪೋಟ್ ಕ್ಯಾಂಟಿನ್ ನಲ್ಲಿ ಇಷ್ಟೆಲ್ಲ ಹೈಡ್ರಾಮ ಆಗ್ತಿದ್ದಂತೆ ಎಚ್ಚೆತ್ ದೇವನಹಳ್ಳಿ ಪುಡ್ ಸೆಪ್ಟಿ ಇನ್ಸ್ಪೆಕ್ಟರ್ ಪ್ರವೀಣ್ ಕ್ಯಾಂಟಿನ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೊತೆಗೆ ಕ್ಯಾಂಟಿನ್ ನಲ್ಲಿ ಬೆಳಗ್ಗೆಯಿಂದ ತಯಾರಾಗಿದ್ದ ತಿಂಡಿಗಳು ಹಾಗೂ ಆಹಾರ ಪದಾರ್ಥಗಳ ಸ್ಯಾಂಪಲ್ ಕಲೆಕ್ಟ್ ಮಾಡಿ ಬೆಂಗಳೂರಿನ ಲ್ಯಾಬ್ಗೆ ಕಳುಹಿಸಿದ್ರು.

ಒಟ್ಟಾರೆ ಕೆಂಪೇಗೌಡ ಏರ್ಪೊಟ್ ನ ಪಾರ್ಕಿಂಗ್ ನ ಕ್ಯಾಂಟಿನ್ ನಲ್ಲಿ ಚಾಲಕರಿಗೆ ಕಳಪೆ ಆಹಾರ ಪೂರೈಕೆ ಆರೋಪದ ಸಂಬಂಧ ಆಹಾರ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಯಾಂಪಲ್ ಕಲೆಕ್ಟ್ ಮಾಡಿ ಲ್ಯಾಬ್ ಗೆ ಕಳುಹಿಸಿದ್ದಾರೆ. ಮತ್ತೊಂದೆಡೆ ಏರ್ಪೊಟ್ ಆಡಳಿತ ಮಂಡಳಿ ಅಧಿಕಾರಿಗಳು ಕ್ಯಾಂಟಿನ್ ಟೆಂಡರ್ ಪಡೆದಿದ್ದ ಮಾಲೀಕರಿಗೆ ಎಚ್ಚರಿಕೆ ನೀಡಿದ್ದು ಮತ್ತೊಮ್ಮೆ ಇಂತಹ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ