AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆ ಬಂದು ದೂರು ನೀಡುವವರೆಗೆ ಯಾರನ್ನೂ ಬಂಧಿಸಲು ಆಗುವುದಿಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಪ್ರಕರಣದಲ್ಲಿ ಯಾರನ್ನು ಬಂಧಿಸಬೇಕು ಯಾರನ್ನು ಬಿಡಬೇಕು ಅದು ಎಸ್ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ಸರ್ಕಾರ ಕೊಟ್ಟಿದೆ. ಗೃಹ ಮಂತ್ರಿಗಳ ಜತೆಯು ಚರ್ಚೆ ಮಾಡಿದ್ದೇನೆ, ಈ ತರಹದ ವಿಷಯಗಳಿಗೆ ಪೊಲೀಸರಿಗೆ ತನಿಖೆಗೆ ಸಹಕಾರ ಕೊಡೋದು ಎಲ್ಲರ ಕರ್ತವ್ಯ. ಸರ್ಕಾರ ಈ ತನಿಖೆಗೆ ಎಸ್ಐಟಿಗೆ ಫುಲ್ ಸ್ವಾತಂತ್ರ್ಯ ನೀಡಿದೆ ಅದರಲ್ಲಿ ಗೊಂದಲ ಬೇಡ.....

ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆ ಬಂದು ದೂರು ನೀಡುವವರೆಗೆ ಯಾರನ್ನೂ ಬಂಧಿಸಲು ಆಗುವುದಿಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಆಯೇಷಾ ಬಾನು
| Edited By: |

Updated on: Mar 29, 2021 | 11:38 AM

Share

ದೇವನಹಳ್ಳಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಕೇಸ್​ಗೆ ಸಂಬಂಧಿಸಿ ಎಸ್‌ಐಟಿಗೆ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯವನ್ನು ಕೊಟ್ಟಿದೆ ಎಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ರೀತಿ ವಿಷಯಗಳಲ್ಲಿ ಪೊಲೀಸರ ತನಿಖೆಗೆ ಸಹಕರಿಸಬೇಕು. ಇದು ಎಲ್ಲರ ಕರ್ತವ್ಯ ಎಂದು ಹೇಳಿದ್ರು.

ಪ್ರಕರಣದಲ್ಲಿ ಯಾರನ್ನು ಬಂಧಿಸಬೇಕು ಯಾರನ್ನು ಬಿಡಬೇಕು ಅದು ಎಸ್ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ಸರ್ಕಾರ ಕೊಟ್ಟಿದೆ. ಗೃಹ ಮಂತ್ರಿಗಳ ಜತೆಯು ಚರ್ಚೆ ಮಾಡಿದ್ದೇನೆ, ಈ ತರಹದ ವಿಷಯಗಳಿಗೆ ಪೊಲೀಸರಿಗೆ ತನಿಖೆಗೆ ಸಹಕಾರ ಕೊಡೋದು ಎಲ್ಲರ ಕರ್ತವ್ಯ. ಸರ್ಕಾರ ಈ ತನಿಖೆಗೆ ಎಸ್ಐಟಿಗೆ ಫುಲ್ ಸ್ವಾತಂತ್ರ್ಯ ನೀಡಿದೆ ಅದರಲ್ಲಿ ಗೊಂದಲ ಬೇಡ. ಆದ್ರೆ ಈ ಪ್ರಕರಣಕ್ಕೆ ಸಂಬಂಧಿಸಿದವರು ಬಂದು ದೂರು ನೀಡುವವರೆಗೆ ಯಾರನ್ನ ಬಂಧಿಸಲು ಆಗುತ್ತೆ? ಪ್ರಕರಣದಲ್ಲಿ ಸಂತ್ರಸ್ಥೆ ಬಂದು ದೂರು ನೀಡುವವರೆಗೆ ಯಾರನ್ನೂ ಬಂಧಿಸಲು ಆಗುವುದಿಲ್ಲ. ಇದರಲ್ಲಿ ಡಿ.ಕೆ.ಶಿವಕುಮಾರ್ ಹೆಸರೂ ತಳುಕು ಹಾಕಿಕೊಂಡಿದೆ. ಆದ್ರೆ ಎಸ್‌ಐಟಿ ಯಾರನ್ನೂ ಬಂಧಿಸಿಲ್ಲ, ವಿಚಾರಣೆ ಮಾಡುತ್ತಿದೆ. ತನಿಖೆಗೂ ಮೊದಲೇ ಬಂಧಿಸಲು ಒತ್ತಾಯಿಸುವುದು ಸರಿಯಲ್ಲ. ಯುವತಿ ದೂರು ನೀಡಿದ್ರೆ ಎಲ್ಲವೂ ಸರಿಯಾಗಿ ತನಿಖೆಯಾಗುತ್ತೆ ಎಂದು ಕೆಐಎಬಿಯಲ್ಲಿ ಪ್ರಹ್ಲಾದ್ ಜೋಶಿ ತಿಳಿಸಿದ್ರು.

ಇನ್ನು ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಮೇಲೆ ದಾಳಿ ನಡೆದಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿಯವರು ಯಾರೇ ಆಗಲಿ ಹಲ್ಲೆ ಮಾಡಲು ಮುಂದಾಗುವುದು ಸರಿಯಲ್ಲ. ಡಿಕೆಶಿಯಾಗಲಿ, ಇನ್ಯಾರ ಮೇಲಾದ್ರೂ ಆಗಲಿ ಈ ರೀತಿಯಾಗಿ ಮಾಡೋದು ಬಿಜೆಪಿ ಹಾಗೂ ಸರ್ಕಾರ ಒಪ್ಪೋದಿಲ್ಲ. ನಿನ್ನೆ ಈ ಘಟನೆ ನಡೆದಿರೋ ಬಗ್ಗೆ ನನಗೆ ಗೊತ್ತಿಲ್ಲ. ಆದ್ರೆ ಎಲ್ಲರಿಗೂ ವಿನಂತಿ ಮಾಡುತ್ತೇನೆ ಬಿಜೆಪಿ ಕಾರ್ಯಕರ್ತರಾಗಲಿ, ಕಾಂಗ್ರೆಸ್ ಕಾರ್ಯಕರ್ತರಾಗಲಿ ಬೈ ಎಲೆಕ್ಷನ್ ಸಂದರ್ಭದಲ್ಲಿ ಈ ರೀತಿ ಮಾಡಬಾರದು. ಸರಿಯಾದ ರೀತಿಯಲ್ಲಿ ತನಿಖೆಗೆ ಸಹಕಾರ ಕೊಟ್ಟು ತಪ್ಪಿತಸ್ಥರು ಯಾರೇ ಇರಲಿ, ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ರು.

ಇದನ್ನೂ ಓದಿ: ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಸಚಿವ ಮುರುಗೇಶ್ ನಿರಾಣಿ: ಮಹತ್ವದ ವಿಚಾರ ಚರ್ಚೆ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!