AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಬೆಲೆ ಏರಿಕೆಯ ಪರ್ವಕಾಲ: ಏಕಾಏಕಿ ಮಕ್ಕಳ ಶಾಲಾ ಫೀಸ್​ನಲ್ಲಿ ಶೇ 50 ರಷ್ಟು ಏರಿಕೆ

ಕರ್ನಾಟಕದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆದಿದೆ. ಹೀಗಿರುವಾಗ ಕೆಲ ಖಾಸಗಿ ಶಾಲೆಗಳು ಏಕಾಏಕಿ ಶುಲ್ಕ ಹೆಚ್ಚಳ ಮಾಡಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಪೋಷಕರು ಮುತ್ತಿಗೆ ಹಾಕಿ ಶಾಲಾ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕರ್ನಾಟಕದಲ್ಲಿ ಬೆಲೆ ಏರಿಕೆಯ ಪರ್ವಕಾಲ: ಏಕಾಏಕಿ ಮಕ್ಕಳ ಶಾಲಾ ಫೀಸ್​ನಲ್ಲಿ ಶೇ 50 ರಷ್ಟು ಏರಿಕೆ
ಪ್ರಾತಿನಿಧಿಕ ಚಿತ್ರ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 09, 2025 | 8:07 AM

ದೇವನಹಳ್ಳಿ, ಏಪ್ರಿಲ್​ 09: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ದಿನ ಬಳಕೆಯ ವಸ್ತುಗಳಾದ ಹಾಲು, ಗ್ಯಾಸ್​​, ಪೆಟ್ರೋಲ್​, ಡಿಸೇಲ್​ ಸೇರಿದಂತೆ ವಿವಿಧ ಸರಕು ಮತ್ತು ಸೇವೆಗಳ ದರ ಏರಿಕೆ (price hike) ಮಾಡಲಾಗಿದೆ. ಈ ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ತಮ್ಮ ಮಕ್ಕಳನ್ನ ಖಾಸಗಿ ಶಾಲೆಗೆ (Private schools) ಸೇರಿಸಿರುವ ಪೋಷಕರಿಗೆ ಏಕಾಏಕಿ ಸಾವಿರಾರು ರೂ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಕೆಲ‌ ಖಾಸಗಿ ಶಾಲೆಗಳ ವಿರುದ್ದ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ಏಕಾಏಕಿ ಫೀಸ್​​ ಹೆಚ್ಚಳ: ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು 

ಖಾಸಗಿ ಶಾಲೆಯಲ್ಲಿ ಏಕಾಏಕಿ ಶುಲ್ಕ ಹೆಚ್ಚಳದಿಂದ ಆಕ್ರೋಶಗೊಂಡ ಪೋಷಕರು ಬೆಂಗಳೂರು ಉತ್ತರ ತಾಲೂಕಿನ ಹೊಸಹಳ್ಳಿ ಗ್ರಾಮದ ಎಂವಿಎಂ ಶಾಲೆಗೆ ಮುತ್ತಿಗೆ ಹಾಕಿ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿರುವಂತಹ ಘಟನೆ ನಡೆದಿದೆ. ಅಂದಹಾಗೆ ಎಂವಿಎಂ ಶಾಲೆಯಲ್ಲಿ ಸುಮಾರು 850 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಕಳೆದ ಭಾರಿಗಿಂತ ಈ ಭಾರಿ ಶಾಲೆಯ ಫೀಸ್​​ ಹೆಚ್ಚಳ ಮಾಡಿದ್ದಾರಂತೆ.

ಇದನ್ನೂ ಓದಿ: 2nd PUC Results 2025 Toppers: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಯಾರು ಟಾಪರ್ಸ್? ಇಲ್ಲಿದೆ ವಿವರ

ಇದನ್ನೂ ಓದಿ
Image
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
Image
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
Image
ಕರ್ನಾಟಕ ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ ಇಲ್ಲಿದೆ
Image
ಯಾವೆಲ್ಲ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯ? ರಿಸಲ್ಟ್ ನೋಡುವುದು ಹೇಗೆ?

ಹಳೆಯ ಮಕ್ಕಳ ಶಾಲಾ ಶುಲ್ಕದ ಮೇಲೆ ಶೇ 50 ರಷ್ಟು ಶುಲ್ಕವನ್ನ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ನಮಗೆ ಶಾಲಾ‌ ಆಡಳಿತ ಮಂಡಳಿ ಫೀಸ್ ಹೆಚ್ಚಳ ಮಾಡಿದ್ದಾರೆ ಅಂತ ಶಾಲೆ ವಿರುದ್ದ ಕಿಡಿಕಾರಿದ್ದಾರೆ. ಅಲ್ಲದೆ ಶಾಲೆಯ ಬಳಿ‌ ಜಮಾಯಿಸಿದ್ದ ಪೋಷಕರು ಏಕಾಏಕಿ ಫೀಸ್​ 20 ರಿಂದ 25 ಸಾವಿರ ರೂ ಹೆಚ್ಚಳ ಮಾಡಿರುವುದನ್ನ ಖಂಡಿಸಿ ಆಡಳಿತ ಮಂಡಳಿ ವಿರುದ್ದ ಗರಂ ಆದರು. ಈ ವೇಳೆ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿದೆ: ಪೋಷಕರು ಆಕ್ರೋಶ

ಅಂದಹಾಗೆ ಎಲ್ಕೆಜಿಗೆ ಈ ಹಿಂದೆ 75 ಸಾವಿರ ರೂ ತೆಗೆದುಕೊಂಡಿದ್ದ ಶಾಲಾ ಆಡಳಿತ ಮಂಡಳಿ ಮುಂದಿನ ಭಾರಿ ಶುಲ್ಕ ಹೆಚ್ಚಳವಾಗಲ್ಲ ಅಂತ ಹೇಳಿದ್ರಂತೆ. ಆದರೆ ಈ ಭಾರಿ ಮಕ್ಕಳ ಶಾಲಾ ಶುಲ್ಕವನ್ನ 20 ಸಾವಿರ ರೂ. ಹೆಚ್ಚಳ ಮಾಡಿದ್ದು, ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಮಕ್ಕಳ ವ್ಯಾನ್ ಶುಲ್ಕ ಕೂಡ ಹೆಚ್ಚಳ ಮಾಡಿರುವ ಎಂವಿಎಂ ಶಾಲೆ ಪೋಷಕರ ಜೇಬಿಗೆ ಕತ್ತರಿ ಹಾಕಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿದೆ ಅಂತ ಪೋಷಕರಾದ ಶಂಕರ್ ಎಂಬುವವರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನೂ ಜಾಸ್ತಿ ಏನಾದರೂ ಪ್ರಶ್ನೆ ಮಾಡಿದರೆ ಶಾಲೆ ಆಡಳಿತ ಮಂಡಳಿ ಬೇಕಿದ್ದರೆ ಓದಿಸಿ ಇಲ್ಲಂದರೆ ಸರ್ಕಾರಿ ಶಾಲೆಗಳಿಗೆ ಸೇರಿಸಿ ಅಂತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಜೊತೆಗೆ ಪೋಷಕರಿಗೆ ಶಾಲೆಯ ಶುಲ್ಕದ ಜೊತೆಗೆ ಬುಕ್ಸ್, ಬ್ಯಾಗ್ ಸೇರಿದಂತೆ ಎಲ್ಲದಕ್ಕೂ ಹೆಚ್ಚುವರಿಯಾಗಿ ಹಣ ತೆಗೆದುಕೊಳ್ತಿದ್ದು ಇದೀಗ ಈ ವರ್ಷ ಹೆಚ್ಚುವರಿ ಶುಲ್ಕ ನಿಗದಿ ಮಾಡಲಾಗಿದ್ದು, ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಇಂತಿಷ್ಟು ಅಂತ ಫೀಸ್​ ನಿಗದಿ ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ. ಇನ್ನೂ ಈ ಬಗ್ಗೆ ಶಾಲೆ ಆಡಳಿತ ಮಂಡಳೀಯವರನ್ನ ಕೇಳಲು ಮುಂದಾದರೆ ಅವರು ಪ್ರತಿಕ್ರಿಯೆ ನೀಡದೆ ಪೋಷಕರ ಬಳಿ ಮಾತನಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್

ಜನರು ಒಂದ್ಕಡೆ ಬೆಲೆ ಏರಿಕೆ ಬಿಸಿಯಲ್ಲಿರುವಾಗಲೇ ಇದೀಗ ಕೆಲ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡಿರುವುದು ಪೋಷಕರಿಗೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ. ಇನ್ನೂ ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಎಚ್ಚೆತ್ತು ಪೋಷಕರ ಬಳಿ ಹಗಲು ದರೋಡೆ ಮಾಡಲು ಹೊರಟಿರುವ ಕೆಲ ಖಾಸಗಿ ಶಾಲೆಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ