AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ಕೈ ತಪ್ಪುತ್ತೆಂದು ಸ್ನೇಹಿತರ ಜೊತೆ ಸೇರಿ ಭಾವಮೈದುನ ನನ್ನೇ ಕೊಲೆ ಮಾಡಿದ ಭಾವ; ಸ್ನೇಹಿತರು ಅರೆಸ್ಟ್, ಮುಖ್ಯ ಆರೋಪಿ ಎಸ್ಕೇಪ್

ಶಿವರಾಜ್ನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಬೆಲ್ಟ್ ಬಿಗಿದು ಕೊಲೆ ಮಾಡಿದ್ದಾರೆ. ಆರೋಪಿಗಳ ಅರೆಸ್ಟ್ ಬಳಿಕ‌ ಕೊಲೆ ವಿಚಾರ ಬೆಳಕಿಗೆ ಬಂದಿದೆ. ಕೊಲೆ ಆರೋಪದ ಮೇಲೆ ಸಿದ್ದು, ಶಿವು, ಭೀಮಣ್ಣ ವಶಕ್ಕೆ ಪಡೆಯಲಾಗಿತ್ತು.

ಆಸ್ತಿ ಕೈ ತಪ್ಪುತ್ತೆಂದು ಸ್ನೇಹಿತರ ಜೊತೆ ಸೇರಿ ಭಾವಮೈದುನ ನನ್ನೇ ಕೊಲೆ ಮಾಡಿದ ಭಾವ; ಸ್ನೇಹಿತರು ಅರೆಸ್ಟ್, ಮುಖ್ಯ ಆರೋಪಿ ಎಸ್ಕೇಪ್
ಆಸ್ತಿ ಕೈ ತಪ್ಪುತ್ತೆಂದು ಭಾವಮೈದುನ ನನ್ನೇ ಕೊಲೆ ಮಾಡಿದ ಭಾವ, ಆರೋಪಿ ಅರೆಸ್ಟ್
TV9 Web
| Edited By: ಆಯೇಷಾ ಬಾನು|

Updated on:Feb 01, 2022 | 3:51 PM

Share

ಆನೇಕಲ್: ಭಾವನಿಂದಲೇ ಭಾವಮೈದುನನ ಕೊಲೆಯಾಗಿರುವ ಘಟನೆ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ನಡೆದಿದೆ. ಶಿವರಾಜ್(22) ಕೊಲೆಯಾದ ಯುವಕ. ಬೆಲ್ಟ್ ಬಿಗಿದು ಯುವಕನ ಕೊಲೆ ಮಾಡಲಾಗಿದೆ. ಸದ್ಯ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ಆಸ್ತಿ ತನಗೆ ಬರದೇ ಭಾವಮೈದುನಿಗೆ ಬರುತ್ತೆ ಎಂದು ಕೊಲೆಗೆ ಸಂಚು ರೂಪಿಸಿದ್ದು ಭಾವ ಶಿವಕುಮಾರ್ ಹಾಗೂ ಸ್ನೇಹಿತರು ಸೇರಿ ಭಾವಮೈದುನನ ಕೊಲೆ ಮಾಡಿದ್ದಾರೆ. ಇದೇ ತಿಂಗಳ 19 ರಂದು ಕೊಲೆ ನಡೆದಿತ್ತು. 23ನೇ ತಾರೀಖು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಯುವಕನ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಮಿಸ್ಸಿಂಗ್ ಕೇಸ್ ದಾಖಲಾಗುವ ಮುನ್ನವೇ ಸೂರ್ಯಸಿಟಿ ಪೊಲೀಸರಿಗೆ ಡೆಡ್ ಬಾಡಿ ಸಿಕ್ಕಿತ್ತು. ಸದ್ಯ ಈಗ ಆರೋಪಿಗಳು ಅರೆಸ್ಟ್ ಆಗಿದ್ದು ಕೊಲೆಯ ಮುಖ್ಯ ಆರೋಪಿ ಎಸ್ಕೇಪ್ ಆಗಿದ್ದಾನೆ.

ಶಿವರಾಜ್ನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಬೆಲ್ಟ್ ಬಿಗಿದು ಕೊಲೆ ಮಾಡಿದ್ದಾರೆ. ಆರೋಪಿಗಳ ಅರೆಸ್ಟ್ ಬಳಿಕ‌ ಕೊಲೆ ವಿಚಾರ ಬೆಳಕಿಗೆ ಬಂದಿದೆ. ಕೊಲೆ ಆರೋಪದ ಮೇಲೆ ಸಿದ್ದು, ಶಿವು, ಭೀಮಣ್ಣ ವಶಕ್ಕೆ ಪಡೆಯಲಾಗಿತ್ತು. A1 ಆರೋಪಿ ಶಿವಕುಮಾರ್ ಕೊಲೆಯ ಪ್ಲ್ಯಾನ್ ಮಾಡಿದ್ದು ಆರೋಪಿ ಪರಾರಿಯಾಗಿದ್ದಾನೆ. ಮೊದಲಿಗೆ ಫೋನ್ ಮಾಡುದ್ರೆ ತಮ್ಮ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ ಅಂತ ಶಿವರಾಜ್ ಪೋಷಕರು ಮತ್ತು ಆರೋಪಿ ಶಿವಕುಮಾರ್ ದೂರು ದಾಖಲಿಸಿದ್ದರು.

ಜನವರಿ 22 ನೇ ತಾರಿಖು ಪರಪ್ಪನ ಅಗ್ರಹಾರದಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ದೂರು ದಾಖಲಾಗುವ 3 ದಿನ ಮುಂಚೆಯೇ ಶಿವರಾಜ್ ಹತ್ಯೆ ಮಾಡಲಾಗಿತ್ತು ಎಂಬುವುದು ತಿಳಿದು ಬಂದಿದೆ. 20 ನೇ ತಾರಿಖಿಗೆ ಸೂರ್ಯನಗರ ಪೊಲೀಸರಿಗೆ ಶಿವರಾಜ್ ಮೃತದೇಹ ಸಿಕ್ಕಿತ್ತು. ಪೋಷಕರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸರು ಕೇಸ್ ಇನ್ವೆಸ್ಟಿಗೇಟ್ಸ್ ಮಾಡಿದ್ದರು. ಶಿವಕುಮಾರ್ ಸ್ನೇಹಿತರನ್ನು ಕರೆದು ವಿಚಾರಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ನೇಹಿತರನ್ನು ಪೊಲೀಸ್ ವಶಕ್ಕೆ ಪಡೆಯುತ್ತಲೇ ಆರೋಪಿ ಬಾವ ಶಿವಕುಮಾರ್ ಪರಾರಿಯಾಗಿದ್ದಾನೆ. ಹೆಬ್ಬಗೋಡಿ ಪೊಲೀಸರಿಗೆ ಕೇಸ್ ಹಸ್ತಾಂತರಿಸಲಾಗಿದ್ದು ಶಿವಕುಮಾರ್ ಅರೆಸ್ಟ್ ಮಾಡಲು ಹೆಬ್ಬಗೋಡಿ ಪೊಲೀಸರು ತಂಡ ರಚಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ 12 ವರ್ಷಗಳ ಹಿಂದೆ ನಡೆದ ಬಳ್ಳಾರಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ

Published On - 3:48 pm, Tue, 1 February 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ