AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್: ಹಸುಗಳಿಗೆ ಮಾರಕ ಕಾಯಿಲೆ ಬಗ್ಗೆ ವರದಿ, ಆನೇಕಲ್​ಗೆ ವಿಜ್ಞಾನಿಗಳ ತಂಡ ಭೇಟಿ

ಆನೇಕಲ್(Anekal) ತಾಲೂಕಿನ ಹಲವು ಹಳ್ಳಿಗಳಲ್ಲಿ ಹಸುಗಳು ಮಾರಕ ಖಾಯಿಲೆಯಿಂದ ಬಳಲಿ ಸಾವನ್ನಪ್ಪುತ್ತಿದ್ದು, ಈ ಕುರಿತು ನಿನ್ನೆ(ಜು.18) ಟಿವಿ9 ವರದಿ ಮಾಡಿತ್ತು. ಅದರಂತೆ ಇದೀಗ ವರದಿ ಬೆನ್ನಲ್ಲೆ ಎಚ್ಚೆತ್ತ ಪಶು ಇಲಾಖೆಯವರು. ಇಂದು(ಜು.19)​ ತಾಲೂಕಿನ ಹಲವು ಹಳ್ಳಿಗಳಿಗೆ ವಿಜ್ಞಾನಿಗಳ ತಂಡ ಭೇಟಿ ನೀಡಿದೆ.

ಟಿವಿ9 ಇಂಪ್ಯಾಕ್ಟ್: ಹಸುಗಳಿಗೆ ಮಾರಕ ಕಾಯಿಲೆ ಬಗ್ಗೆ ವರದಿ, ಆನೇಕಲ್​ಗೆ ವಿಜ್ಞಾನಿಗಳ ತಂಡ ಭೇಟಿ
ಆನೇಕಲ್​ಗೆ ಭೇಟಿ ನೀಡಿದ ವಿಜ್ಞಾನಿಗಳ ತಂಡ
ರಾಮು, ಆನೇಕಲ್​
| Edited By: |

Updated on:Jul 19, 2023 | 3:03 PM

Share

ಬೆಂಗಳೂರು ಗ್ರಾಮಾಂತರ, ಜು.19: ಆನೇಕಲ್(Anekal) ತಾಲೂಕಿನ ಹಲವು ಹಳ್ಳಿಗಳಲ್ಲಿ ಹಸು(Cow)ಗಳು ಮಾರಕ ಖಾಯಿಲೆಯಿಂದ ಬಳಲಿ ಸಾವನ್ನಪ್ಪುತ್ತಿದ್ದು, ಈ ಕುರಿತು ನಿನ್ನೆ(ಜು.18) ಟಿವಿ9 ವರದಿ ಮಾಡಿತ್ತು. ಅದರಂತೆ ಇದೀಗ ವರದಿ ಬೆನ್ನಲ್ಲೆ ಎಚ್ಚೆತ್ತ ಪಶು ಇಲಾಖೆಯವರು. ಇಂದು(ಜು.19) ಆನೇಕಲ್​ ತಾಲೂಕಿನ ಹಲವು ಹಳ್ಳಿಗಳಿಗೆ ಹೆಬ್ಬಾಳದ ಪಶುಪಾಲನ‌ ಮತ್ತು ವೈದ್ಯಕೀಯ ಸೇವಾ ಇಲಾಖೆ ವಿಜ್ಞಾನಿಗಳು ತಂಡ ಭೇಟಿ ನೀಡಿದೆ. ಬಮೂಲ್, ಪಶುಪಾಲನೆ ಇಲಾಖೆ, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಅಧಿಕಾರಿಗಳು, ಹರ್ಪಿಸ್ ವೈರಸ್, ಸರ್ಪ ಹುಣ್ಣು ಎಂಬ ರೋಗದ ಬಗ್ಗೆಯೂ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ರಕ್ತದ ಮಾದರಿ, ಕಿವಿ ಹಾಗೂ‌ ಮೂಗಿನ ದ್ರವವನ್ನ ಸಂಗ್ರಹ ಮಾಡಿಕೊಂಡಿರುವ ವಿಜ್ಞಾನಿಗಳು ಮೂರು ದಿನದಲ್ಲಿ ವರದಿ ನೀಡಲಿದ್ದಾರೆ.

ರೋಗದ ಲಕ್ಷಣಗಳು ಹೀಗಿವೆ

ಇನ್ನು ಹಸುಗಳಿಗೆ ಮೊದಲು ಕಿವಿ ಸೋರಲು ಪ್ರಾರಂಭವಾಗುತ್ತದೆ. ಬಳಿಕ ಮೂರು ನಾಲ್ಕು ದಿನಗಳಲ್ಲಿ ತಲೆಯಲ್ಲಿ ಒಂದು ರೀತಿಯ ಸೋಂಕು ಕಾಣಿಸಿಕೊಳ್ಳುತ್ತದೆ. ಈ ಹಿನ್ನಲೆ ಹಸುಗಳು ಸೊರಗಲು ಶುರುವಾಗುತ್ತದೆ. ನಂತರ ಮೂಗು, ಬಾಯಿಯಲ್ಲಿ ಜೊಲ್ಲು ಸೋರಿಕೆಯಾಗುತ್ತದೆ. ಈ ಸಮಯದಲ್ಲಿ ಹಸು ವಾಲಿಕೊಂಡು ನಿಲ್ಲುವುದರಿಂದ ತಲೆ, ಬೆನ್ನು ಮೂಳೆ ಸಂಪೂರ್ಣ ನಿಷ್ಕ್ರಿಯಗೊಂಡು ತಿಂದ ಆಹಾರ ಮೂಗು ಹಾಗೂ ಬಾಯಿಯಿಂದ ರೀಟರ್ನ್​ ಬರುತ್ತದೆ. ಬಳಿಕ ಹಸುಗಳು ಆಹಾರ ತಿನ್ನದೆ ನೀರನ್ನೂ ಕುಡಿಯದೇ ಅಸ್ವಸ್ಥಗೊಂಡು ಸಾವನ್ನಪ್ಪುತ್ತವೆ. ಇದರಿಂದ ಹಸುಗಳು ಹೈರಾಣಾಗಿದ್ದು, ಸೂಕ್ತ ಚಿಕಿತ್ಸೆ ಇಲ್ಲದ ಕಾರಣ ರೈತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ:ಬನ್ನೇರುಘಟ್ಟ ಪಾರ್ಕ್​ನಲ್ಲಿ ವಿಚಿತ್ರ ವೈರಸ್​ಗೆ ಬಲಿಯಾಗುತ್ತಿವೆ ಹುಲಿಗಳು

ಈಗಾಗಲೇ 15 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿದೆ

ಇನ್ನು ಆನೇಕಲ್​ಗೆ ಅಂಟಿಕೊಂಡಿರುವ ತಮಿಳುನಾಡಿನ ಹಲವು ಗ್ರಾಮಗಳಲ್ಲಿ ಈ ವಿಚಿತ್ರ ರೋಗವು ಕಾಣಿಸಿಕೊಂಡು ಆದೆಷ್ಟೋ ಹಸುಗಳು ಕೊನೆಯುಸೆರೆಳೆದಿದ್ದವು. ಇದೀಗ ಆನೇಕಲ್​ತಾಲ್ಲೂಕಿನ ಗಡಿ ಗ್ರಾಮಗಳಿಗೆ ಈ ಮಾರಕ ಕಾಯಿಲೆ ಆವರಿಸಿದ್ದು, ರೈತರ ಜೀವನಾಡಿಯಾಗಿದ್ದ ಹಸುಗಳ ಮಾರಣಹೋಮವಾಗುತ್ತಿದೆ. ಈಗಾಗಲೇ 30 ಕ್ಕೂ ಹೆಚ್ಚು ಹಸುಗಳು ರೋಗಕ್ಕೆ ತುತ್ತಾಗಿದ್ದರೆ, ಸುಮಾರು 15 ಹೆಚ್ಚು ಹಸುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಇದೀಗ ಆನೇಕಲ್ ಭಾಗದಲ್ಲಿ ಹಸುಗಳಲ್ಲಿ ಸೋಂಕು ಉಲ್ಬಣಗೊಂಡಿರುವುದರಿಂದ ಪ್ರತ್ಯೇಕ ಲಸಿಕೆ ಇಲ್ಲದೆ ಹಸುಗಳು ಸಾವನ್ನಪ್ಪುತ್ತಿದೆ. ಹೈನುಗಾರಿಕೆಯನ್ನೇ ನಂಬಿಕೊಂಡಿದ್ದ ರೈತರಿಗೆ ಈ ಕಾಯಿಲೆಯಿಂದ ಹೈರಾಣರಾಗಿದ್ದು, ಹಸುಗಳನ್ನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಇದೀಗ ಹಳ್ಳಿಗಳಿಗೆ ವಿಜ್ಞಾನಿಗಳ ತಂಡ ಭೇಟಿ ನೀಡಿದ್ದು, ಆದಷ್ಟು ಬೇಗ ಈ ಮಾರಕ ಖಾಯಿಲೆಗೆ ಚಿಕಿತ್ಸೆ ದೊರಕುವಂತಾಗಲಿ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Wed, 19 July 23

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ