ದೇವನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ನಡುವೆ ಗಲಾಟೆ; ಓರ್ವನ ಕೊಲೆ, ಮೂವರಿಗೆ ಚಾಕು ಇರಿತ

ದೇವನಹಳ್ಳಿ ತಾಲೂಕಿನ ಮಂಡಿಬೆಲೆ ಗ್ರಾಮದಲ್ಲಿ ಕಳೆದ ರಾತ್ರಿ‌ ಗ್ರಾಮದ ಗಜೇಂದ್ರ ಹಾಗೂ ಪಕ್ಕದ ಮನೆಯ ಮೋಹನ್ ವಿಜಿ‌ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಮೋಹನ್ ವಿಜಿ ಹೊರಗಿನವರನ್ನ ಕರೆಸಿದ್ದು ಗಲಾಟೆ ಜೋರಾಗಿದೆ. ಮೊದಲು ಮೋಹನ್ ಹಾಗೂ ಮೂವರ ಮೇಲೆ ಗಜೇಂದ್ರ ಚಾಕು ಇರಿದಿದ್ದು ಚಾಕು ಇರಿಯುತ್ತಿದ್ದಂತೆ ಗಜೇಂದ್ರನ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ದೇವನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ನಡುವೆ ಗಲಾಟೆ; ಓರ್ವನ ಕೊಲೆ, ಮೂವರಿಗೆ ಚಾಕು ಇರಿತ
ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
Edited By: ಆಯೇಷಾ ಬಾನು

Updated on: Sep 15, 2023 | 9:39 AM

ದೇವನಹಳ್ಳಿ, ಸೆ.15: ನಡೆದಾಡುವ ದಾರಿ ವಿಚಾರಕ್ಕೆ ಎರಡು‌ ಗುಂಪುಗಳ ನಡುವೆ ಗಲಾಟೆಯಾಗಿದ್ದು ಘಟನೆ ಕೊಲೆಯಲ್ಲಿ ಅಂತ್ಯವಾಗಿದೆ(Murder). ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಮಂಡಿಬೆಲೆ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ದೊಣ್ಣೆ ಚಾಕುಗಳಿಂದ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಓರ್ವನ ಕೊಲೆಯಾಗಿದ್ದು ಮೂವರಿಗೆ ಚಾಕು ಇರಿಯಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ದೇವನಹಳ್ಳಿ ತಾಲೂಕಿನ ಮಂಡಿಬೆಲೆ ಗ್ರಾಮದಲ್ಲಿ ಕಳೆದ ರಾತ್ರಿ‌ ಗ್ರಾಮದ ಗಜೇಂದ್ರ ಹಾಗೂ ಪಕ್ಕದ ಮನೆಯ ಮೋಹನ್ ವಿಜಿ‌ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಮೋಹನ್ ವಿಜಿ ಹೊರಗಿನವರನ್ನ ಕರೆಸಿದ್ದು ಗಲಾಟೆ ಜೋರಾಗಿದೆ. ಮೊದಲು ಮೋಹನ್ ಹಾಗೂ ಮೂವರ ಮೇಲೆ ಗಜೇಂದ್ರ ಚಾಕು ಇರಿದಿದ್ದು ಚಾಕು ಇರಿಯುತ್ತಿದ್ದಂತೆ ಗಜೇಂದ್ರನ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆಯಾದ ಗಜೇಂದ್ರ ಮೃತದೇಹ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ ಮೋಹನ್, ವಿಜಿ, ಲಿಕಿತ್​ಗೆ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎರಡು ಗುಂಪುಗಳ ನಡುವಿನ ಗಲಾಟೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಗ್ರಾದ ಬಾಲಾಪರಾಧಿಗೃಹದಲ್ಲಿ ಆಘಾತಕಾರಿ ಘಟನೆ, ಮಕ್ಕಳನ್ನು ಮಂಚಕ್ಕೆ ಕಟ್ಟಿ, ಚಪ್ಪಲಿಯಿಂದ ಥಳಿಸುತ್ತಾರೆ ಅಧಿಕಾರಿಗಳು

ವೃದ್ಧೆ ಕಿವಿ ಓಲೆ ಕಿತ್ತುಕೊಂಡು ಪರಾರಿಯಾದ ಖದೀಮರು

ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ನಿನ್ನೆ ರಾತ್ರಿ ವೃದ್ಧೆಯೋರ್ವರಿಗೆ ಬಾಯಿಗೆ ಬಟ್ಟೆ ಇಟ್ಟು ಹಲ್ಲೆ ನಡೆಸಿ ಕಿವಿ ಓಲೆ ಕಿತ್ತುಕೊಂಡು ಹೋದ ಅಮಾನವೀಯ ಘಟನೆ ನಡೆದಿದೆ. ಪಾರ್ವತಮ್ಮ, ಹಲ್ಲೆಗೊಳಗಾದ ವೃದ್ಧೆ. ಪಾರ್ವತಮ್ಮ ಮನೆಯಲ್ಲಿ ಒಬ್ಬರೇ ಇರುತ್ತಿದ್ದದನ್ನು ಗಮನಿಸಿದ್ದ ಇಬ್ಬರು ಖದೀಮರು ನಿನ್ನೆ ರಾತ್ರಿ ಏಕಾಏಕಿ ಪಾರ್ವತಮ್ಮಳ ಮನೆಗೆ ನುಗ್ಗಿ ಬಾಯಿಗೆ ಬಟ್ಟೆ ಇಟ್ಟು, ಬಳಿಕ ಹಲ್ಲೆ ನಡೆಸಿ ನಂತರ ಆಕೆ ಕೊರಳಿದ್ದ ಬೋರಮಾಳ, ಕಿವಿ ಓಲೆ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಪಾರ್ವತಮ್ಮನವರು ಕಿರುಚಾಡಿದ್ದು ಸ್ಥಳೀಯರು ಸಹಾಯಕ್ಕೆ ಧಾವಿಸಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ದಾಖಲಿಸಿಕೊಂಡ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಿವಿ ಓಲೆ ಕಿತ್ತು ಕೊಂಡ ಹಿನ್ನೆಲೆ ವೃದ್ಧೆ ಕಿವಿಗಳಿಗೆ ಗಾಯಗಳಾಗಿದ್ದು ವೃದ್ಧೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಕ್ತಸಿಕ್ತವಾಗಿ ಗಾಯವಾಗಿರೊ ಕಿವಿಗಳಿಗೆ ವೈದ್ಯರು ಸ್ಟಿಚ್ ಹಾಕಿದ್ದಾರೆ. ವೃದ್ಧೆ ಪಾರ್ವತಮ್ಮ ಹೇಳಿಕೆ ಪಡೆದು ಲಿಂಗಸುಗೂರು ಪೊಲೀಸರು ತನಿಖೆಗೆ ಇಳಿದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us