Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಾ ಕಡೆಯಿಂದ ಡಕಾಯಿತರು ಬಂದಿದ್ದಾರೆ, ಬೆಂಗಳೂರು ಗ್ರಾಮಾಂತರ ಮಹಿಳೆಯರೇ ಹುಷಾರು! ವಿಡಿಯೋ ನೋಡಿ

ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪೂನಾ ಕಡೆಯಿಂದ ಡಕಾಯಿತರು ಬಂದಿದ್ದಾರೆ, ಬೆಂಗಳೂರು ಗ್ರಾಮಾಂತರ ಮಹಿಳೆಯರೇ ಹುಷಾರು! ವಿಡಿಯೋ ನೋಡಿ
ಪೂನಾ ಕಡೆಯಿಂದ ಡಕಾಯಿತರು ಬಂದಿದ್ದಾರೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 18, 2023 | 5:51 PM

ನೆಲಮಂಗಲ (Nelamangala): ಆ ಗ್ಯಾಂಗ್ ದಾರಿ ಹೋಕರ ಸೋಗಿನಲ್ಲಿ ಸಾಗುತ್ತಾ, ಜೊತೆಗೆ ಅಲ್ಲಲ್ಲಿ ಭಿಕ್ಷೆ ಬೇಡುತ್ತ ಕೆಲ ಏರಿಯಾಗಳಲ್ಲಿ ಅಲೆದಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನ ನೋಡಿ ಮನೆಗೆ ನುಗ್ಗಿ ಹಣ ಎಗರಿಸುತ್ತಿದ್ದ ವೇಳೆ (dacoit) ತಗ್ಲಾಕಿಕೊಂಡು ಗ್ಯಾಂಗ್‌ನ ಓರ್ವ ಮಹಿಳೆ ಧರ್ಮದೇಟು ತಿಂದು ಪೊಲೀಸರ ಅತಿಥಿಯಾಗಿದ್ದಾಳೆ. ಅಷ್ಟಕ್ಕೂ ಈ ಘಟನೆ ನಡೆದಿದ್ದಾದ್ರು ಎಲ್ಲಿ ಅಂತಿರಾ ? ಆ ಕುರಿತಾದ ವರದಿ ಇಲ್ಲಿದೆ. ಈ ದೃಶ್ಯಗಳು ಕಂಡು ಬಂದದ್ದು ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿಯ ಚಿಕ್ಕ ಬಿದರಕಲ್ಲು ಗ್ರಾಮದಲ್ಲಿ. ಚಿಕ್ಕ ಬಿದರಕಲ್ಲು ಗ್ರಾಮದ ಕವಿತಾ (woman) ಎನ್ನುವವರು ನಿನ್ನೆ ಮಧ್ಯಾಹ್ನ ಪಕ್ಕದ ಮನೆಗೆ ಹೋಗಿದ್ದಾಗ ಆರು ಜನರ ಗ್ಯಾಂಗ್ ಏಕಾಏಕಿ ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಇದ್ದ ಪರ್ಸ್‌ನಲ್ಲಿ 1 ಲಕ್ಷದ 90 ಸಾವಿರ ಹಣವಿತ್ತು. ಅದರಲ್ಲಿ 50 ಸಾವಿರ ಹಣಕ್ಕೆ ಕೈಹಾಕಿ ಪರಾರಿಯಾಗ್ತಾ ಇದ್ರು, ಈ ವೇಳೆ ಆರು ಜನರಲ್ಲಿ ಓರ್ವ ಮಹಿಳೆ ಸಿಕ್ಕಿಬಿದ್ದಿದ್ದು ಅವಳಿಗೆ ಧರ್ಮದೇಟು ಕೊಟ್ಟಿದ್ದಾರೆ (localites).

ಇನ್ನು ಈ ಆರು ಜನರ ಗ್ಯಾಂಗ್ ಮಹಾರಾಷ್ಟ್ರದ ಪುಣೆ ಮೂಲದವರು ಎನ್ನಲಾಗಿದ್ದು, ಸಿಕ್ಕಿಬಿದ್ದ ಮಹಿಳೆಯನ್ನ ಸೋನು ಎಂದು ಗುರುತಿಸಲಾಗಿದೆ. ಆರು ಜನರ ಗ್ಯಾಂಗ್‌ ಮಕ್ಕಳನ್ನ ಕಂಕಳಿನಲ್ಲಿ ಎತ್ತಿಕೊಂಡು ಏರಿಯಾಗಳಲ್ಲಿ ತಿರುಗಾಡುತ್ತಾ, ಮನೆಯಲ್ಲಿ ಯಾರೂ ಇರದ ವೇಳೆ ದಾಳಿ ನಡೆಸಿ, ದರೋಡೆ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆರು ಜನರಲ್ಲಿ ಇನ್ನುಳಿದವರು ಪರಾರಿಯಾಗಿ ಓಡಿಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವರದಿ: ವಿನಾಯಕ್ ಗುರವ್, ಟಿವಿ 9, ನೆಲಮಂಗಲ

Published On - 5:50 pm, Wed, 18 January 23

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು