AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಾ ಕಡೆಯಿಂದ ಡಕಾಯಿತರು ಬಂದಿದ್ದಾರೆ, ಬೆಂಗಳೂರು ಗ್ರಾಮಾಂತರ ಮಹಿಳೆಯರೇ ಹುಷಾರು! ವಿಡಿಯೋ ನೋಡಿ

ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪೂನಾ ಕಡೆಯಿಂದ ಡಕಾಯಿತರು ಬಂದಿದ್ದಾರೆ, ಬೆಂಗಳೂರು ಗ್ರಾಮಾಂತರ ಮಹಿಳೆಯರೇ ಹುಷಾರು! ವಿಡಿಯೋ ನೋಡಿ
ಪೂನಾ ಕಡೆಯಿಂದ ಡಕಾಯಿತರು ಬಂದಿದ್ದಾರೆ
TV9 Web
| Updated By: ಸಾಧು ಶ್ರೀನಾಥ್​|

Updated on:Jan 18, 2023 | 5:51 PM

Share

ನೆಲಮಂಗಲ (Nelamangala): ಆ ಗ್ಯಾಂಗ್ ದಾರಿ ಹೋಕರ ಸೋಗಿನಲ್ಲಿ ಸಾಗುತ್ತಾ, ಜೊತೆಗೆ ಅಲ್ಲಲ್ಲಿ ಭಿಕ್ಷೆ ಬೇಡುತ್ತ ಕೆಲ ಏರಿಯಾಗಳಲ್ಲಿ ಅಲೆದಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನ ನೋಡಿ ಮನೆಗೆ ನುಗ್ಗಿ ಹಣ ಎಗರಿಸುತ್ತಿದ್ದ ವೇಳೆ (dacoit) ತಗ್ಲಾಕಿಕೊಂಡು ಗ್ಯಾಂಗ್‌ನ ಓರ್ವ ಮಹಿಳೆ ಧರ್ಮದೇಟು ತಿಂದು ಪೊಲೀಸರ ಅತಿಥಿಯಾಗಿದ್ದಾಳೆ. ಅಷ್ಟಕ್ಕೂ ಈ ಘಟನೆ ನಡೆದಿದ್ದಾದ್ರು ಎಲ್ಲಿ ಅಂತಿರಾ ? ಆ ಕುರಿತಾದ ವರದಿ ಇಲ್ಲಿದೆ. ಈ ದೃಶ್ಯಗಳು ಕಂಡು ಬಂದದ್ದು ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿಯ ಚಿಕ್ಕ ಬಿದರಕಲ್ಲು ಗ್ರಾಮದಲ್ಲಿ. ಚಿಕ್ಕ ಬಿದರಕಲ್ಲು ಗ್ರಾಮದ ಕವಿತಾ (woman) ಎನ್ನುವವರು ನಿನ್ನೆ ಮಧ್ಯಾಹ್ನ ಪಕ್ಕದ ಮನೆಗೆ ಹೋಗಿದ್ದಾಗ ಆರು ಜನರ ಗ್ಯಾಂಗ್ ಏಕಾಏಕಿ ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಇದ್ದ ಪರ್ಸ್‌ನಲ್ಲಿ 1 ಲಕ್ಷದ 90 ಸಾವಿರ ಹಣವಿತ್ತು. ಅದರಲ್ಲಿ 50 ಸಾವಿರ ಹಣಕ್ಕೆ ಕೈಹಾಕಿ ಪರಾರಿಯಾಗ್ತಾ ಇದ್ರು, ಈ ವೇಳೆ ಆರು ಜನರಲ್ಲಿ ಓರ್ವ ಮಹಿಳೆ ಸಿಕ್ಕಿಬಿದ್ದಿದ್ದು ಅವಳಿಗೆ ಧರ್ಮದೇಟು ಕೊಟ್ಟಿದ್ದಾರೆ (localites).

ಇನ್ನು ಈ ಆರು ಜನರ ಗ್ಯಾಂಗ್ ಮಹಾರಾಷ್ಟ್ರದ ಪುಣೆ ಮೂಲದವರು ಎನ್ನಲಾಗಿದ್ದು, ಸಿಕ್ಕಿಬಿದ್ದ ಮಹಿಳೆಯನ್ನ ಸೋನು ಎಂದು ಗುರುತಿಸಲಾಗಿದೆ. ಆರು ಜನರ ಗ್ಯಾಂಗ್‌ ಮಕ್ಕಳನ್ನ ಕಂಕಳಿನಲ್ಲಿ ಎತ್ತಿಕೊಂಡು ಏರಿಯಾಗಳಲ್ಲಿ ತಿರುಗಾಡುತ್ತಾ, ಮನೆಯಲ್ಲಿ ಯಾರೂ ಇರದ ವೇಳೆ ದಾಳಿ ನಡೆಸಿ, ದರೋಡೆ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆರು ಜನರಲ್ಲಿ ಇನ್ನುಳಿದವರು ಪರಾರಿಯಾಗಿ ಓಡಿಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವರದಿ: ವಿನಾಯಕ್ ಗುರವ್, ಟಿವಿ 9, ನೆಲಮಂಗಲ

Published On - 5:50 pm, Wed, 18 January 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!