AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಆಸ್ಪತ್ರೆಯ AMO ಕಚೇರಿಯಲ್ಲಿ ಸಿಕ್ತು 250 ರೂ., ತನಿಖೆಗೆ ಆದೇಶಿಸಿದ ಉಪ ಲೋಕಾಯುಕ್ತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಆಸ್ಪತ್ರೆಗೆ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ಪತ್ತೆಯಾಗಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಹೊಸಕೋಟೆ ಆಸ್ಪತ್ರೆಯ AMO ಕಚೇರಿಯಲ್ಲಿ ಸಿಕ್ತು 250 ರೂ., ತನಿಖೆಗೆ ಆದೇಶಿಸಿದ ಉಪ ಲೋಕಾಯುಕ್ತ
ಹೊಸಕೋಟೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ
ನವೀನ್ ಕುಮಾರ್ ಟಿ
| Edited By: |

Updated on: Aug 06, 2023 | 6:12 PM

Share

ಹೊಸಕೋಟೆ, ಆಗಸ್ಟ್ 6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಆಸ್ಪತ್ರೆಗೆ (Hoskote Taluk Hospital) ಉಪ ಲೋಕಾಯುಕ್ತ (Upa Lokayukta) ನ್ಯಾ.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ಪತ್ತೆಯಾಗಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಆಸ್ಪತ್ರೆಯ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ನಗದು ಪತ್ತೆಯಾದ ಬಗ್ಗೆ ಫಣೀಂದ್ರ ಅವರು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಹಣದ ಬಗ್ಗೆ ಗೊತ್ತಿಲ್ಲ ಎಂದು ಉತ್ತರಿಸಿದಾಗ ಗರಂ ಆದ ಫಣೀಂದ್ರ, ಸಿಬ್ಬಂದಿಗೆ ಗೊತ್ತಿಲ್ಲದೆ ಹಣ ಒಳಗಡೆ ಬಂತಾ ಎಂದು ಖಾರವಾಗಿ ಪ್ರಶ್ನಸಿದರು. ಅಲ್ಲದೆ, ನಗದು ಪತ್ತೆ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಆಸ್ಪತ್ರೆಯಲ್ಲಿನ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲವೂ ಉಚಿತವಾಗಿದ್ದು, ಔಷಧಿ ಇತ್ಯಾದಿಗಳನ್ನು ಇಲ್ಲಿಯೇ ಕೊಡುತ್ತಾರೆಯೇ? ಅಥವಾ ಹೊರಗಿನಿಂದ ತರಿಸುತ್ತಿದ್ದಾರೆಯೇ? ವೈದ್ಯರು, ಸಿಬ್ಬಂದಿ ಯಾವ ರೀತಿ ನೋಡಿಕೊಳ್ಳುತ್ತಿದ್ದಾರೆ? ಊಟ ತಿಂಡಿ ಕೊಡುತ್ತಿದ್ದಾರೆಯೇ? ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಿದ್ದಾರೆಯೇ? ಸಿಬ್ಬಂದಿ ಹಣ ಕೇಳುತ್ತಾರಾ ಇತ್ಯಾದಿ ಬಗ್ಗೆ ರೋಗಿಗಳನ್ನು ಪ್ರಶ್ನಿಸಿದರು.

ಇದನ್ನೂ ಓದಿ: ದೇವನಹಳ್ಳಿ: ಆಸ್ತಿಗಾಗಿ ತಾಯಿಯನ್ನೇ ಕೊಂದ ಮಗ-ಸೊಸೆ ಅರೆಸ್ಟ್

ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತ ಪೊಲೀಸರು ಪಣತೊಟ್ಟಿದ್ದು, ಲಂಚ ಸ್ವೀಕರಿಸುವ ಅಧಿಕಾರಿಗಳನ್ನು ಬಂಧಿಸುತ್ತಿದ್ದಾರೆ. ಅಲ್ಲದೆ, ಸರ್ಕಾರಿ ಆಸ್ಪತ್ರೆ, ಸರ್ಕಾರಿ ಕಚೇರಿ ಇತ್ಯಾದಿ ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಎಲ್ಲಾ ಕಂದಾಯ ಅಧಿಕಾರಿಗಳ ಕಚೇರಿಗಳಿಗೆ ಆಗಸ್ಟ್ 3 ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಇದಕ್ಕೂ ಮುನ್ನ ಕೋಲಾರ ನಗರದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಹಾಗೂ ಪಾಲಿಕ್ಲಿನಿಕ್‌ಗಳಿಗೆ ಲೋಕಾಯುಕ್ತ ಎಸ್.ಪಿ. ಉಮೇಶ್ ಭೇಟಿ ನೀಡಿದ್ದರು. ಅಸ್ಪತ್ರೆಗಳಲ್ಲಿ ವೈದ್ಯರ ಮತ್ತು ಔಷಧಿಗಳ ಕೊರತೆಗೆ ಸಂಬಂಧಿಸಿ ದೂರುಗಳು ಬಂದ ಹಿನ್ನೆಲೆ ಭೇಟಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್