AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಆಸ್ಪತ್ರೆಯ AMO ಕಚೇರಿಯಲ್ಲಿ ಸಿಕ್ತು 250 ರೂ., ತನಿಖೆಗೆ ಆದೇಶಿಸಿದ ಉಪ ಲೋಕಾಯುಕ್ತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಆಸ್ಪತ್ರೆಗೆ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ಪತ್ತೆಯಾಗಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಹೊಸಕೋಟೆ ಆಸ್ಪತ್ರೆಯ AMO ಕಚೇರಿಯಲ್ಲಿ ಸಿಕ್ತು 250 ರೂ., ತನಿಖೆಗೆ ಆದೇಶಿಸಿದ ಉಪ ಲೋಕಾಯುಕ್ತ
ಹೊಸಕೋಟೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ
ನವೀನ್ ಕುಮಾರ್ ಟಿ
| Edited By: |

Updated on: Aug 06, 2023 | 6:12 PM

Share

ಹೊಸಕೋಟೆ, ಆಗಸ್ಟ್ 6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಆಸ್ಪತ್ರೆಗೆ (Hoskote Taluk Hospital) ಉಪ ಲೋಕಾಯುಕ್ತ (Upa Lokayukta) ನ್ಯಾ.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ಪತ್ತೆಯಾಗಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಆಸ್ಪತ್ರೆಯ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ನಗದು ಪತ್ತೆಯಾದ ಬಗ್ಗೆ ಫಣೀಂದ್ರ ಅವರು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಹಣದ ಬಗ್ಗೆ ಗೊತ್ತಿಲ್ಲ ಎಂದು ಉತ್ತರಿಸಿದಾಗ ಗರಂ ಆದ ಫಣೀಂದ್ರ, ಸಿಬ್ಬಂದಿಗೆ ಗೊತ್ತಿಲ್ಲದೆ ಹಣ ಒಳಗಡೆ ಬಂತಾ ಎಂದು ಖಾರವಾಗಿ ಪ್ರಶ್ನಸಿದರು. ಅಲ್ಲದೆ, ನಗದು ಪತ್ತೆ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಆಸ್ಪತ್ರೆಯಲ್ಲಿನ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲವೂ ಉಚಿತವಾಗಿದ್ದು, ಔಷಧಿ ಇತ್ಯಾದಿಗಳನ್ನು ಇಲ್ಲಿಯೇ ಕೊಡುತ್ತಾರೆಯೇ? ಅಥವಾ ಹೊರಗಿನಿಂದ ತರಿಸುತ್ತಿದ್ದಾರೆಯೇ? ವೈದ್ಯರು, ಸಿಬ್ಬಂದಿ ಯಾವ ರೀತಿ ನೋಡಿಕೊಳ್ಳುತ್ತಿದ್ದಾರೆ? ಊಟ ತಿಂಡಿ ಕೊಡುತ್ತಿದ್ದಾರೆಯೇ? ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಿದ್ದಾರೆಯೇ? ಸಿಬ್ಬಂದಿ ಹಣ ಕೇಳುತ್ತಾರಾ ಇತ್ಯಾದಿ ಬಗ್ಗೆ ರೋಗಿಗಳನ್ನು ಪ್ರಶ್ನಿಸಿದರು.

ಇದನ್ನೂ ಓದಿ: ದೇವನಹಳ್ಳಿ: ಆಸ್ತಿಗಾಗಿ ತಾಯಿಯನ್ನೇ ಕೊಂದ ಮಗ-ಸೊಸೆ ಅರೆಸ್ಟ್

ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತ ಪೊಲೀಸರು ಪಣತೊಟ್ಟಿದ್ದು, ಲಂಚ ಸ್ವೀಕರಿಸುವ ಅಧಿಕಾರಿಗಳನ್ನು ಬಂಧಿಸುತ್ತಿದ್ದಾರೆ. ಅಲ್ಲದೆ, ಸರ್ಕಾರಿ ಆಸ್ಪತ್ರೆ, ಸರ್ಕಾರಿ ಕಚೇರಿ ಇತ್ಯಾದಿ ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಎಲ್ಲಾ ಕಂದಾಯ ಅಧಿಕಾರಿಗಳ ಕಚೇರಿಗಳಿಗೆ ಆಗಸ್ಟ್ 3 ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಇದಕ್ಕೂ ಮುನ್ನ ಕೋಲಾರ ನಗರದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಹಾಗೂ ಪಾಲಿಕ್ಲಿನಿಕ್‌ಗಳಿಗೆ ಲೋಕಾಯುಕ್ತ ಎಸ್.ಪಿ. ಉಮೇಶ್ ಭೇಟಿ ನೀಡಿದ್ದರು. ಅಸ್ಪತ್ರೆಗಳಲ್ಲಿ ವೈದ್ಯರ ಮತ್ತು ಔಷಧಿಗಳ ಕೊರತೆಗೆ ಸಂಬಂಧಿಸಿ ದೂರುಗಳು ಬಂದ ಹಿನ್ನೆಲೆ ಭೇಟಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!