ಹೊಸಕೋಟೆ ಆಸ್ಪತ್ರೆಯ AMO ಕಚೇರಿಯಲ್ಲಿ ಸಿಕ್ತು 250 ರೂ., ತನಿಖೆಗೆ ಆದೇಶಿಸಿದ ಉಪ ಲೋಕಾಯುಕ್ತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಆಸ್ಪತ್ರೆಗೆ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ಪತ್ತೆಯಾಗಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಹೊಸಕೋಟೆ ಆಸ್ಪತ್ರೆಯ AMO ಕಚೇರಿಯಲ್ಲಿ ಸಿಕ್ತು 250 ರೂ., ತನಿಖೆಗೆ ಆದೇಶಿಸಿದ ಉಪ ಲೋಕಾಯುಕ್ತ
ಹೊಸಕೋಟೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ
Edited By: Rakesh Nayak Manchi

Updated on: Aug 06, 2023 | 6:12 PM

ಹೊಸಕೋಟೆ, ಆಗಸ್ಟ್ 6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಆಸ್ಪತ್ರೆಗೆ (Hoskote Taluk Hospital) ಉಪ ಲೋಕಾಯುಕ್ತ (Upa Lokayukta) ನ್ಯಾ.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ಪತ್ತೆಯಾಗಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಆಸ್ಪತ್ರೆಯ ಎಎಮ್‌ಒ ಕಚೇರಿಯಲ್ಲಿ 250 ರೂಪಾಯಿ ನಗದು ಪತ್ತೆಯಾದ ಬಗ್ಗೆ ಫಣೀಂದ್ರ ಅವರು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಹಣದ ಬಗ್ಗೆ ಗೊತ್ತಿಲ್ಲ ಎಂದು ಉತ್ತರಿಸಿದಾಗ ಗರಂ ಆದ ಫಣೀಂದ್ರ, ಸಿಬ್ಬಂದಿಗೆ ಗೊತ್ತಿಲ್ಲದೆ ಹಣ ಒಳಗಡೆ ಬಂತಾ ಎಂದು ಖಾರವಾಗಿ ಪ್ರಶ್ನಸಿದರು. ಅಲ್ಲದೆ, ನಗದು ಪತ್ತೆ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಆಸ್ಪತ್ರೆಯಲ್ಲಿನ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲವೂ ಉಚಿತವಾಗಿದ್ದು, ಔಷಧಿ ಇತ್ಯಾದಿಗಳನ್ನು ಇಲ್ಲಿಯೇ ಕೊಡುತ್ತಾರೆಯೇ? ಅಥವಾ ಹೊರಗಿನಿಂದ ತರಿಸುತ್ತಿದ್ದಾರೆಯೇ? ವೈದ್ಯರು, ಸಿಬ್ಬಂದಿ ಯಾವ ರೀತಿ ನೋಡಿಕೊಳ್ಳುತ್ತಿದ್ದಾರೆ? ಊಟ ತಿಂಡಿ ಕೊಡುತ್ತಿದ್ದಾರೆಯೇ? ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಿದ್ದಾರೆಯೇ? ಸಿಬ್ಬಂದಿ ಹಣ ಕೇಳುತ್ತಾರಾ ಇತ್ಯಾದಿ ಬಗ್ಗೆ ರೋಗಿಗಳನ್ನು ಪ್ರಶ್ನಿಸಿದರು.

ಇದನ್ನೂ ಓದಿ: ದೇವನಹಳ್ಳಿ: ಆಸ್ತಿಗಾಗಿ ತಾಯಿಯನ್ನೇ ಕೊಂದ ಮಗ-ಸೊಸೆ ಅರೆಸ್ಟ್

ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತ ಪೊಲೀಸರು ಪಣತೊಟ್ಟಿದ್ದು, ಲಂಚ ಸ್ವೀಕರಿಸುವ ಅಧಿಕಾರಿಗಳನ್ನು ಬಂಧಿಸುತ್ತಿದ್ದಾರೆ. ಅಲ್ಲದೆ, ಸರ್ಕಾರಿ ಆಸ್ಪತ್ರೆ, ಸರ್ಕಾರಿ ಕಚೇರಿ ಇತ್ಯಾದಿ ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಎಲ್ಲಾ ಕಂದಾಯ ಅಧಿಕಾರಿಗಳ ಕಚೇರಿಗಳಿಗೆ ಆಗಸ್ಟ್ 3 ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಇದಕ್ಕೂ ಮುನ್ನ ಕೋಲಾರ ನಗರದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಹಾಗೂ ಪಾಲಿಕ್ಲಿನಿಕ್‌ಗಳಿಗೆ ಲೋಕಾಯುಕ್ತ ಎಸ್.ಪಿ. ಉಮೇಶ್ ಭೇಟಿ ನೀಡಿದ್ದರು. ಅಸ್ಪತ್ರೆಗಳಲ್ಲಿ ವೈದ್ಯರ ಮತ್ತು ಔಷಧಿಗಳ ಕೊರತೆಗೆ ಸಂಬಂಧಿಸಿ ದೂರುಗಳು ಬಂದ ಹಿನ್ನೆಲೆ ಭೇಟಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us