AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, 30 ಜನರಿಗೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್​ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ.

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, 30 ಜನರಿಗೆ ಗಾಯ
ಸರಣಿ ಅಪಘಾತ
ಬಿ ಮೂರ್ತಿ, ನೆಲಮಂಗಲ
| Edited By: ವಿವೇಕ ಬಿರಾದಾರ|

Updated on:Dec 27, 2023 | 7:54 AM

Share

ನೆಲಮಂಗಲ, ಡಿಸೆಂಬರ್​ 27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ (Nelamangala) ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ (Private Bus) ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್​ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ  ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್​ ಬಸ್​ ಹಿಂದೆಯೇ  ದುರ್ಗಾಂಬಾ ಬಸ್ ಬರುತ್ತಿತ್ತು. ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್​ ಚಾಲಕ ಬಸ್​​ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ

ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್​​ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್​ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.

ಕಾರು ಹರಿದು ಮೂರು ವರ್ಷದ ಮಗು ಮೃತ

ಬೀದರ್​​: ಕಾರು ಹರಿದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಬೀದರ್ ನಗರದ ಗುಂಪಾರಸ್ತೆಯಲ್ಲಿ ನಡೆದಿದೆ. ಬಸವಚೇತನ ಮೃತ ಮಗು. ಮೃತ ಬಸವಚೇತನ ಹಾರುಗೇರಿ ನಿವಾಸಿ ಸತೀಶ್ ಪಾಟೀಲ್ ಹಾಗೂ ಸಂಗಿತಾ ದಂಪತಿ ಪುತ್ರ. ಮಗುವಿನ ಮೇಲೆ ಕಾರು ಹರಿದ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:44 am, Wed, 27 December 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ