AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಬ್ರೇಕ್ ಫೇಲ್‌ ಆದ ಕಂಟೇನರ್ ನಿಂದ ಸರಣಿ ಅಪಘಾತ, ತಪ್ಪಿದ ಭಾರಿ ದುರಂತ

ಬೆಂಗಳೂರಿನ ನೆಲಮಂಗಲ ಸಮೀಪ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿ 48ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ.

ನೆಲಮಂಗಲ: ಬ್ರೇಕ್ ಫೇಲ್‌ ಆದ ಕಂಟೇನರ್ ನಿಂದ ಸರಣಿ ಅಪಘಾತ, ತಪ್ಪಿದ ಭಾರಿ ದುರಂತ
ನೆಲಮಂಗಲದಲ್ಲಿ ಸರಣಿ ಅಪಘಾತ
TV9 Web
| Updated By: ವಿವೇಕ ಬಿರಾದಾರ|

Updated on:Dec 03, 2022 | 5:09 PM

Share

ಬೆಂಗಳೂರು: ನೆಲಮಂಗಲ ಸಮೀಪ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (National Highway 48) ಸರಣಿ ಅಪಘಾತ (Serial accident) ಸಂಭವಿಸಿದೆ. ತಮೀಳುನಾಡು ಪಾಸಿಂಗ್​ನ ಸರಕು ತುಂಬಿದ್ದ ಕಂಟೇನರ್ ಬೆಂಗಳೂರಿಂದ ತುಮಕೂರು ಕಡೆ ತೆರಳುತ್ತಿತ್ತು. ಕಂಟೇನರ್​ ನೆಲಮಂಗಲದ ಟೋಲ್ ಸಮೀಪಿಸುತ್ತಿದ್ದಂತೆ ಬ್ರೇಕ್​ ಫೇಲ್​ ಆಗಿದೆ. ಇದರಿಂದ 3 ಕಂಟೇನರ್, 1ಐಶ್ಚರ್ ವಾಹನ, 3 ಕಾರು, 2 ಬೈಕ್ ಹಾಗೂ ರಸ್ತೆ ಪಕ್ಕದಲ್ಲಿ ಸೌತೆಕಾಯಿ ಮಾರಾಟ ಮಾಡುತ್ತಿದ್ದ ತಳ್ಳುವ ಗಾಡಿಗೆ ಕಂಟೇನರ್​ ಗುದ್ದಿದೆ.

ಚಿಶ್ಚರ್ ವಾಹನಕ್ಕೆ ಕಂಟೇನರ್​ ಡಿಕ್ಕಿ ಹೊಡೆದ ಪರಿಣಾಮ ಕಟ್ಟಿಗೆ ತುಂಡು ತುಂಬಿಕೊಂಡು ಹೋಗುತ್ತಿದ್ದ ಐಶ್ಚರ್ ವಾಹನ ಪಲ್ಟಿಯಾಗಿದೆ. ಪಲ್ಟಿಯಾದ ಐಶ್ಚರ್ ವಾಹನ ಬೈಕ್ ಸವಾರನ ಮೇಲೆ ಬಿದ್ದು ಗಂಭೀರ ಗಾಯಗಳಾಗಿವೆ. ಬೈಕ್​ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಕಳೆದ ಅರ್ಧ ಗಂಟೆಯಿಂದ ಬೆಂಗಳೂರಿನಿಂದ ತುಮಕೂರು ಕಡೆಗಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ

ಪುಣೆ: ಮಹಾರಾಷ್ಟ್ರದ ಪುಣೆ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನವಿಲೆ ಬ್ರಿಡ್ಜ್‌ ಬಳಿ ಸರಣಿ ಅಪಘಾತ ಸಂಭವಿಸಿದ್ದು, 48 ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಚಾಲಕ ಟ್ಯಾಂಕರ್​​ನ್ನು ಅಡ್ಡಾದಿಡ್ಡಿ ಚಾಲಾಯಿಸಿದ್ದಾನೆ. ಇದರಿಂದ ಟ್ಯಾಂಕರ್​ ಐಷಾರಾಮಿ ಕಾರುಗಳು ಸೇರಿ ಬರೋಬ್ಬರಿ 48 ವಾಹನಗಳಿಗೆ ಡಿಕ್ಕಿ ಹೊಡೆದಿತ್ತು.

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ಯಾಂಕರ್‌ ಬ್ರೇಕ್ ಫೈಲ್ ಆಗಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಅಪಘಾತದ ನಂತರ ತೈಲವು ರಸ್ತೆಯ ಮೇಲೆ ಚೆಲ್ಲಿದ ಪರಿಣಾಮ ಹೆಚ್ಚಿದ ಘರ್ಷಣೆಗಳಿಗೆ ಕಾರಣವಾಗಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಘಟನೆ ನಂತರ ಮುಂಬೈ ರಸ್ತೆಗಳಲ್ಲಿ 2 ಕಿ.ಮೀ. ಉದ್ದಕ್ಕೂ ಟ್ರಾಫಿಕ್ ಜಾಮ್ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Sat, 3 December 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ