AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖತರ್ನಾಕ್ ಖದೀಮರಿಂದ ಸರಣಿ ಕಳ್ಳತನ; ಬಾರ್ ಶಟರ್ ಮುರಿದು ಆರು ಲಕ್ಷ ಹಣ ದೋಚಿ ಪರಾರಿ

ಅವರು ಅಂತಿದ್ದ ಅಸಾಮಿಗಳಲ್ಲ, ಮಂಕಿ ಕ್ಯಾಂಪ್ ಧರಿಸಿ ಬೆನ್ನಿಗೆ ಬ್ಯಾಗ್ ಹಾಕಿಕೊಂಡು ಬಂದ್ರು, ಅಂದರೆ ಕ್ಷಣಾರ್ಧದಲ್ಲಿ ಕೆಲಸ‌ ಮುಗಿಸಿ ಹೋಗುತ್ತಾರೆ. ಅದೇ ರೀತಿ ಕಳೆದ ರಾತ್ರಿ ಎಂಟ್ರಿ ಕೊಟ್ಟಿದ್ದ ಗ್ಯಾಂಗ್, ಸರಣಿ ಕಳ್ಳತನ ನಡೆಸಿದ್ದಾರೆ. ಬಟ್ಟೆ ಅಂಗಡಿ, ಬಾರ್​ಗಳ ಶಟರ್ ಬೀಗ ಮುರಿದು ಲಕ್ಷಾಂತರ ರೂಪಾಯಿ ಹಣ ದೋಚಿದ್ದಲ್ಲದೆ, ತಮಗಿಷ್ಟವಾದ ಎಣ್ಣೆಯನ್ನು ಕೈನಲ್ಲಿ ಹಿಡಿದು ಎಸ್ಕೇಪ್ ಆಗಿದ್ದಾರೆ. 

ಖತರ್ನಾಕ್ ಖದೀಮರಿಂದ ಸರಣಿ ಕಳ್ಳತನ; ಬಾರ್ ಶಟರ್ ಮುರಿದು ಆರು ಲಕ್ಷ ಹಣ ದೋಚಿ ಪರಾರಿ
ಬಾರ್​ ಬಾಗಿಲು ಮುರಿದು ಕಳ್ಳತನ
ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 16, 2023 | 10:04 PM

Share

ಬೆಂಗಳೂರು, ನ.16: ನಗರ ಜಿಲ್ಲೆಯ ಹೆಬ್ಬಗೋಡಿ ಪೊಲೀಸ್(Hebbagodi Police) ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಮಂಕಿ ಕ್ಯಾಪ್ ಹಾಗೂ ಬೆನ್ನಿಗೆ ಬ್ಯಾಗ್ ಹಾಕಿಕೊಂಡು ಬಂದಿದ್ದ ಮೂವರು ಖದೀಮರ ಗ್ಯಾಂಗ್ ತಿರುಪಾಳ್ಯದ ಪ್ರಜ್ವಲ್ ಬಾರ್​ನ ಬೀಗ ಮುರಿದು ಇಬ್ಬರು ಹೊರಗೆ ನಿಂತು ವಾಚ್ ಮಾಡುತ್ತಿದ್ರೆ, ಓರ್ವ ಬಾರ್ ಒಳಗಡೆ ಹೋಗಿ ಕ್ಯಾಶ್ ಬಾಕ್ಸ್ ನಲ್ಲಿದ್ದ ಬರೋಬ್ಬರಿ ಆರುವರೇ ಲಕ್ಷ ನಗದನ್ನು ದೋಚಿದ್ದಾನೆ. ಹೇಗೋ ಲಕ್ಷ ಲಕ್ಷ ಹಣ ಸಿಕ್ಕಿತು, ಎಣ್ಣೆ ಪಾರ್ಟಿ ಮಾಡೋಣ ಎಂದು ಅದೇ ಬಾರ್​ನಲ್ಲಿನ ಫ್ರಿಡ್ಜ್ ಬಾಗಿಲು ತೆಗೆದು ಮದ್ಯದ ಬಾಟಲಿಗಳನ್ನು ಕೊಂಡೊಯ್ಯಿದಿದ್ದಾನೆ. ಕಳ್ಳರ ಕೈಚಳಕದ ದೃಶ್ಯ ಬಾರ್​ನ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ಇನ್ನು ತಿರುಪಾಳ್ಯದ ಪ್ರಜ್ವಲ್ ಬಾರ್​ಗೆ ಕನ್ನ ಹಾಕುವುದಕ್ಕೂ ಮುನ್ನ, ಹೆಬ್ಬಗೋಡಿ ಸಮೀಪದ ಗೊಲ್ಲಹಳ್ಳಿಯಲ್ಲಿನ ಅಪೂರ್ವ ವೈನ್ಸ್ ಬಾರ್​ನ ಶಟರ್ ಬೀಗ ಮುರಿಯಲು ಯತ್ನಿಸಿದ್ದಾರೆ. ಆಗದೆ ಇದ್ದಾಗ ಪಕ್ಕದಲ್ಲಿಯೇ ಇದ್ದ ಬಟ್ಟೆ ಅಂಗಡಿಯೊಂದರ ಬೀಗ ಮುರಿದು ಒಳ‌ ನುಗ್ಗಿ ಅಲ್ಲಿದ್ದಂತಹ ಹಣವನ್ನ ದೋಚಿದ್ದಾರೆ. ಹೆಚ್ಚು ಹಣ ಸಿಗಲಿಲ್ಲ ಎಂದು ಕೊನೆಗೆ ಪ್ರಜ್ವಲ್ ಬಾರ್​ಗೆ ಬೀಗ ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ಬಾರ್​ನ ಸಿಬ್ಬಂದಿ ಬಂದು ನೋಡಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಬಾರ್​ಗೆ ಕನ್ನ ಹಾಕಿದ ಖದೀಮರ ಹೆಡೆಮುರಿ ಕಟ್ಟಲು ಬಲೆ ಬೀಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ರಾತ್ರೊ ರಾತ್ರಿ ಶ್ರೀಮಂತರಾಗಬೇಕೆಂಬ ಆಸೆಯಿಂದ ಕಳ್ಳತನಕ್ಕೆ ಇಳಿದಿದ್ದ ಗ್ಯಾಂಗ್​ ಅರೆಸ್ಟ್​

ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಅನುಮಾನಾಸ್ಪದ ಸಾವು

ಬಾಗಲಕೋಟೆ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ನಡೆದಿದೆ. ಹನುಮಂತ ನ್ಯಾಮಗೌಡ(27) ಮೃತ ಯುವಕ. ತಮ್ಮ‌ ಮನೆಯಲ್ಲೇ‌‌ ನೇಣು ಬಿಗಿದ ಸ್ಥಿತಿಯಲ್ಲಿ ‌ಶವ ಪತ್ತೆಯಾಗಿದೆ. ಮುಖದ‌ ಮೇಲೆ ಗಾಯವಿರುವ ಹಿನ್ನೆಲೆ ಅನುಮಾನ ಮೂಡಿಸಿದೆ. ಈ ಕುರಿತು ಸಾವಳಗಿ ಠಾಣೆ ಪೊಲೀಸರು ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 pm, Thu, 16 November 23

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು