AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸೂತಕದ ಛಾಯೆ: 7 ಚಿರತೆ ಮರಿ ಸಾವು ಬೆನ್ನಲ್ಲೇ 13 ಚಿಂಕೆಗಳು ಬಲಿ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸೂತಕದ ಛಾಯೆ ಆವರಿಸಿದೆ. ಇದುವರೆಗೂ 7 ಚಿರತೆ ಮರಿಗಳು ಹಾಗೂ 13 ಚಿಂಕೆಗಳು ಮೃತಪಟ್ಟಿವೆ. ತಿಂಗಳ ಹಿಂದೆಯಷ್ಟೇ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬೆಂಗಳೂರು ಸೆಂಟ್ ಜಾನ್ಸ್ ಆಸ್ಪತ್ರೆಯ ಉದ್ಯಾನವನದಲ್ಲಿದ್ದ 37 ಜಿಂಕೆಗಳನ್ನು ತರಲಾಗಿತ್ತು. ಆದರೆ ಈಗ ನಾನಾ ಕಾರಣದಿಂದಾಗಿ 13 ಜಿಂಕೆಗಳು ಮೃತಪಟ್ಟಿವೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸೂತಕದ ಛಾಯೆ: 7 ಚಿರತೆ ಮರಿ ಸಾವು ಬೆನ್ನಲ್ಲೇ 13 ಚಿಂಕೆಗಳು ಬಲಿ
ಬನ್ನೇರುಘಟ್ಟ ಜೈವಿಕ ಉದ್ಯಾನವನ
ರಾಮು, ಆನೇಕಲ್​
| Edited By: |

Updated on: Sep 20, 2023 | 9:53 AM

Share

ಆನೇಕಲ್, ಸೆ.20: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ(Bannerghatta Biological Park) ಜಿಂಕೆ(Deer) ಹಾಗೂ ಚಿರತೆ ಮರಿಗಳ(Leopard Cubs) ಸಾವು ಮುಂದುವರೆದಿದೆ. ಈ ವರೆಗೂ ಹದಿಮೂರು ಜಿಂಕೆಗಳ ದಾರುಣ ಸಾವಾಗಿದೆ. ತಿಂಗಳ ಹಿಂದೆಯಷ್ಟೇ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬೆಂಗಳೂರು ಸೆಂಟ್ ಜಾನ್ಸ್ ಆಸ್ಪತ್ರೆಯ ಉದ್ಯಾನವನದಲ್ಲಿದ್ದ 37 ಜಿಂಕೆಗಳನ್ನು ತರಲಾಗಿತ್ತು. ಆದರೆ ಈಗ ನಾನಾ ಕಾರಣದಿಂದಾಗಿ 13 ಜಿಂಕೆಗಳು ಮೃತಪಟ್ಟಿವೆ.

ಸರಿಯಾದ ರೀತಿಯಲ್ಲಿ ಆರೈಕೆ ಮಾಡದೆ ಜಿಂಕೆಗಳು ಸೊರಗಿದ್ದ ಹಿನ್ನೆಲೆ ಇದನ್ನು ಕಂಡ ಡಿಸಿಎಫ್ ಪ್ರಭಾಕರ್ ಅವರು ಜಿಂಕೆಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹಸ್ತಾಂತರಿಸಿದ್ದರು. 37 ಜಿಂಕೆಗಳನ್ನ ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕರೆತರಲಾಗಿತ್ತು. ಹತ್ತು ದಿನಗಳ ಕ್ವಾರೆಂಟೈನ್ ಬಳಿಕ ಸಫಾರಿಗೆ ಬಿಡಲಾಗಿತ್ತು. ಹಿಂಡುಗಳ ಕಾದಾಟ ಹಾಗೂ ಜಂತುಹುಳು ಸಮಸ್ಯೆಯಿಂದ ಜಿಂಕೆಗಳು ಮೃತಪಡುತ್ತಿವೆ. ಕೆಲ ಜಿಂಕೆಗಳು ಹೃದಯಾಘಾತದಿಂದ ಮರಣ ಹೊಂದುತ್ತಿವೆ. ಇದುವರೆಗೂ 13 ಜಿಂಕೆಗಳು ಪ್ರಾಣ ಬಿಟ್ಟಿವೆ.

ಬನ್ನೇರುಘಟ್ಟದಲ್ಲಿ ಚಿರತೆ ಮರಿಗಳ ಸರಣಿ ಸಾವು

ಇನ್ನು ಮತ್ತೊಂದೆಡೆ ಕೆಲವು ದಿನಗಳ ಹಿಂದೆಯಷ್ಟೇ ಮಾರಕ ವೈರಸ್​ನಿಂದಾಗಿ ಚಿರತೆ ಮರಿಗಳು ಮೃತ ಪಟ್ಟಿದ್ದವು. ಆಗಸ್ಟ್ 22 ರಿಂದ ಸೆಪ್ಟೆಂಬರ್ 5ರ ನಡುವೆ ಏಳು ಚಿರತೆ ಮರಿಗಳು ವೈರಸ್​ಗೆ ತುತ್ತಾಗಿ ಬಲಿಯಾಗಿವೆ. ಇದರ ಬೆನ್ನಲ್ಲೇ ಇದೀಗ ಜಿಂಕೆಗಳ ಸರಣಿ ಸಾವಾಗುತ್ತಿದ್ದು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸೂತಕದ ಛಾಯೆ ಆವರಿಸಿದೆ.

ಇದನ್ನೂ ಓದಿ: ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಮರಿಗಳ ಸಾವಿಗೆ ಫೆಲೈನ್ ಪ್ಯಾನ್ ಲ್ಯುಕೋಪೆನಿಯಾ ಕಾರಣ ಎನ್ನಲಾಗಿದೆ. ಈ ವೈರಸ್ ಸಾಮಾನ್ಯವಾಗಿ ಬೆಕ್ಕುಗಳ ಮೂಲಕ ಹರಡುವ ವೈರಲ್ ಕಾಯಿಲೆಯಾಗಿದೆ. ಬನ್ನೇರುಘಟ್ಟ ಉದ್ಯಾನವನದಲ್ಲಿ ಸುಮಾರು 25 ಮರಿಗಳಿದ್ದು ಅವುಗಳಲ್ಲಿ 15 ಚಿರತೆ ಮರಿಗಳಿಗೆ ಸೋಂಕು ಹರಡಿದೆ. ಮತ್ತು ಏಳು ವೈರಸ್‌ಗೆ ಬಲಿಯಾಗಿವೆ. ಅಲ್ಲದೆ ಒಂದು ಸಿಂಹದ ಮರಿಗೂ ಸೋಂಕು ತಗುಲಿದ್ದು, ಇದೀಗ ಅದು ಚೇತರಿಸಿಕೊಳ್ಳುತ್ತಿದೆ ಎಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಎ ವಿ ಸೂರ್ಯ ಸೇನ್ ತಿಳಿಸಿದ್ದಾರೆ.

ಆಗಸ್ಟ್ 22 ರಂದು ಸಫಾರಿ ಪ್ರದೇಶಗಳಲ್ಲಿ ಮೊದಲ ಸೋಂಕಿನ ಪ್ರಕರಣ ವರದಿಯಾಗಿತ್ತು. ಮೃತ ಏಳು ಮರಿಗಳಲ್ಲಿ ನಾಲ್ಕು ಸಫಾರಿ ಪ್ರದೇಶದಲ್ಲಿದ್ದವು ಮತ್ತು ಮೂರನ್ನು ರಕ್ಷಣಾ ಕೇಂದ್ರದಲ್ಲಿ ಇರಿಸಲಾಗಿತ್ತು ಎಂದು ಸೂರ್ಯ ಸೇನ್ ಅವರು ಹೇಳಿದರು. ವೈರಸ್‌ಗೆ ಬಲಿಯಾದ ಮರಿಗಳು ಮೂರು ತಿಂಗಳಿಂದ ಒಂದು ವರ್ಷದೊಳಗಿನವು. ಆಶ್ಚರ್ಯವೆಂದರೆ, ಎಲ್ಲಾ ಮರಿಗಳಿಗೆ ಲಸಿಕೆ ಹಾಕಲಾಗಿತು. ಆದರೂ ವೈರಸ್​ಗೆ ತುತ್ತಾಗಿವೆ. ಅಪರೂಪದ ಸಂದರ್ಭಗಳಲ್ಲಿ, ವ್ಯಾಕ್ಸಿನೇಷನ್ ವೈಫಲ್ಯವಾಗುತ್ತದೆ. ಲಸಿಕೆಯನ್ನು ನಿಷ್ಪರಿಣಾಮಕಾರಿಯನ್ನಾಗಿ ಮಾಡುವ ಮೂಲಕ ವೈರಸ್ ರೂಪಾಂತರಗೊಂಡಿರುವ ಸಾಧ್ಯತೆಯಿದೆ ಎಂದು ಸೂರ್ಯ ಸೇನ್ ಅವರು ತಿಳಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ