AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಸಿನ್ ಇಲ್ಲ, ಎಕ್ಸ್‌ರೇ ಶೀಟ್ ಕೂಡ ಇಲ್ಲ! ಗ್ಯಾರಂಟಿ ಯೋಜನೆಗೆ ಹಣ ಒದಗಿಸುವ ಭರದಲ್ಲಿ ಔಷಧಿಗಳಿಗೆ ಸರ್ಕಾರದಿಂದ ಕತ್ತರಿ?

ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ. ಆಂಟಿಬಯೋಟಿಕ್ ಮಾತ್ರೆಗಳು ಮತ್ತು ಎಕ್ಸ್‌ರೇ ಶೀಟ್ ಇಲ್ಲದೆ ಬಡ ರೋಗಿಗಳು ಪರದಾಡುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರೆಂಟಿ ಯೋಜನೆಗಳ ಕಾರಣದಿಂದ ಆರೋಗ್ಯ ಇಲಾಖೆಯ ಅನುದಾನಕ್ಕೆ ಕತ್ತರಿ ಬಿದ್ದಿದೆಯೇ ಎಂಬ ಅನುಮಾನ ಮೂಡಿದೆ.

ಮೆಡಿಸಿನ್ ಇಲ್ಲ, ಎಕ್ಸ್‌ರೇ ಶೀಟ್ ಕೂಡ ಇಲ್ಲ! ಗ್ಯಾರಂಟಿ ಯೋಜನೆಗೆ ಹಣ ಒದಗಿಸುವ ಭರದಲ್ಲಿ ಔಷಧಿಗಳಿಗೆ ಸರ್ಕಾರದಿಂದ ಕತ್ತರಿ?
ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ಅಭಾವ
ನವೀನ್ ಕುಮಾರ್ ಟಿ
| Edited By: |

Updated on: May 13, 2026 | 12:55 PM

Share

ದೇವನಹಳ್ಳಿ, ಮೇ 13: ಸರ್ಕಾರದ ಗ್ಯಾರೆಂಟಿ ಯೋಜನೆಗಳಿಗೆ ಹಣ ಒದಗಿಸುವ ಭರಾಟೆಯಲ್ಲಿ ಆರೋಗ್ಯ ಇಲಾಖೆಯ ಮೆಡಿಸಿನ್‌ಗಳಿಗೆ (Medicine) ಕತ್ತರಿ ಹಾಕಲಾಗಿದೆಯೇ ಎಂಬ ಅನುಮಾನ ಈಗ ಸಾರ್ವಜನಿಕರಲ್ಲಿ ಮೂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ ಎದುರಾಗಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ.

ಮುಖ್ಯಾಂಶಗಳು

  • ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆಂಟಿಬಯೋಟಿಕ್ ಮಾತ್ರೆ ಹಾಗೂ ಚುಚ್ಚುಮದ್ದುಗಳ ತೀವ್ರ ಅಭಾವ
  •  ಎಕ್ಸ್‌ರೇ ಶೀಟ್ ಇಲ್ಲದೆ ರೋಗಿಗಳು ಮೊಬೈಲ್‌ನಲ್ಲಿ ಫೋಟೋ ಹಿಡಿಯುವ ದುಸ್ಥಿತಿ
  •  ಗ್ಯಾರೆಂಟಿ ಯೋಜನೆಗಳ ಅಬ್ಬರದಲ್ಲಿ ಬಡವರ ಆರೋಗ್ಯ ಸೇವೆಗೆ ಸರ್ಕಾರದಿಂದ ಕತ್ತರಿ

ಆಂಟಿಬಯೋಟಿಕ್ ಮಾತ್ರೆಗಳಿಲ್ಲ!

ತಾಲೂಕು ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಜ್ವರ, ನೆಗಡಿ ಮತ್ತು ಗ್ಯಾಸ್ಟ್ರಿಕ್ ಮಾತ್ರೆಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ಆಂಟಿಬಯೋಟಿಕ್ ಮಾತ್ರೆಗಳು ಲಭ್ಯವಿಲ್ಲ. ವೈದ್ಯರು ಬರೆದುಕೊಡುವ ಬಹುತೇಕ ಮದ್ದುಗಳು ಆಸ್ಪತ್ರೆಯ ಫಾರ್ಮಸಿಯಲ್ಲಿ ಸಿಗುತ್ತಿಲ್ಲ. ಆಂಟಿಬಯೋಟಿಕ್ ಚುಚ್ಚುಮದ್ದುಗಳ ಕೊರತೆಯೂ ಕಾಡುತ್ತಿದ್ದು, ಲಭ್ಯವಿರುವ ಇಂಜೆಕ್ಷನ್‌ಗಳನ್ನು ಮಾತ್ರ ನೀಡಿ ಸಿಬ್ಬಂದಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ದುರಂತ: ಐದು ವರ್ಷದ ಮಗು ಸಾವು

ತಮ್ಮ ಮೊಬೈಲ್​ನಲ್ಲೇ ಎಕ್ಸ್‌ರೇ ಫೋಟೋ ತಗೊಳ್ಳುತ್ತಿರುವ ರೋಗಿಗಳು

ಆಸ್ಪತ್ರೆಯ ಅವ್ಯವಸ್ಥೆ ಇಲ್ಲಿಗೆ ನಿಂತಿಲ್ಲ. ಎಕ್ಸ್‌ರೇ ಮಾಡಿಸಿದ ರೋಗಿಗಳಿಗೆ ಫಿಲ್ಮ್ ಗ್ರಾಫ್ ಶೀಟ್ ನೀಡಲಾಗುತ್ತಿಲ್ಲ. ರೋಗಿಗಳೇ ತಮ್ಮ ಮೊಬೈಲ್‌ನಲ್ಲಿ ಎಕ್ಸ್‌ರೇ ಫೋಟೋ ಹಿಡಿದುಕೊಂಡು ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಔಷಧಗಳಿಗಾಗಿ ಇಂಡೆಂಟ್ ಸಲ್ಲಿಸಿ ಹಲವು ದಿನಗಳು ಕಳೆದರೂ ಇಲಾಖೆಯಿಂದ ಸರಬರಾಜಾಗಿಲ್ಲ ಎಂದು ಸಿಬ್ಬಂದಿಯೇ ಒಪ್ಪಿಕೊಳ್ಳುತ್ತಿದ್ದಾರೆ. ದೇವನಹಳ್ಳಿ ತಾಲೂಕು ಆಸ್ಪತ್ರೆಯ ಸ್ಥಿತಿಯನ್ನು ಕಂಡು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸರ್ಕಾರ ಕೂಡಲೇ ಬಡವರ ಆರೋಗ್ಯದ ಕಡೆ ಗಮನಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್