AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಬದಲಾವಣೆ ಮಾಡ್ತೇವೆ ಎನ್ನುವವರು ಶೋಷಿತರು, ಅವಕಾಶ ವಂಚಿತರ ವಿರೋಧಿಗಳು: ಸಿದ್ದರಾಮಯ್ಯ

Siddaramaiah: ಹಿಂದುಳಿದ ವರ್ಗಗಳು ಖಂಡಿತವಾಗಿ ಸಂಘಟಿತರಾಗಬೇಕು. ಶಿಕ್ಷಣ ಪಡೆಯಬೇಕು, ಸಂಘಟನೆ, ಹೋರಾಟ ಮಾಡಬೇಕು. ಇಲ್ಲದಿದ್ದರೆ ನಿಮ್ಮನ್ನು ಯಾರೂ ಕೂಡ ಕೇರ್ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಂವಿಧಾನ ಬದಲಾವಣೆ ಮಾಡ್ತೇವೆ ಎನ್ನುವವರು ಶೋಷಿತರು, ಅವಕಾಶ ವಂಚಿತರ ವಿರೋಧಿಗಳು: ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on:Oct 03, 2021 | 3:34 PM

Share

ದೇವನಹಳ್ಳಿ: ದೇಶದಲ್ಲಿ ಚತುರ್ವರ್ಣ ವ್ಯವಸ್ಥೆ ಇನ್ನೂ ಜೀವಂತವಾಗಿದೆ. ದೇಶದಲ್ಲಿ ಶೇ. 20 ರಷ್ಟು ಜನ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಜಾತಿ ಸಮ್ಮೇಳನ ಮಾಡಬಾರದೆಂದು ವಿರೋಧಿಸುತ್ತಾರೆ. ಆದರೆ, ಜಾತಿ ಸಮ್ಮೇಳನ ತಪ್ಪಲ್ಲವೆಂದು ಲೋಹಿಯಾ ಹೇಳಿದ್ದಾರೆ. ಹಿಂದುಳಿದ ವರ್ಗಗಳು ಖಂಡಿತವಾಗಿ ಸಂಘಟಿತರಾಗಬೇಕು. ಶಿಕ್ಷಣ ಪಡೆಯಬೇಕು, ಸಂಘಟನೆ, ಹೋರಾಟ ಮಾಡಬೇಕು. ಇಲ್ಲದಿದ್ದರೆ ನಿಮ್ಮನ್ನು ಯಾರೂ ಕೂಡ ಕೇರ್ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ದೇವನಹಳ್ಳಿಯಲ್ಲಿ ನಡೆಯುತ್ತಿರುವ ಗಾಣಿಗ ಸಮುದಾಯದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದ್ದಾರೆ.

ಕೆಲವರು ಸಂವಿಧಾನ ಬದಲಾವಣೆ ಮಾಡ್ತೇವೆ ಎನ್ನುತ್ತಿದ್ದಾರೆ. ಇವರು ಶೋಷಿತರು, ಅವಕಾಶ ವಂಚಿತರ ವಿರೋಧಿಗಳು. ಮೀಸಲಾತಿ ಬಗ್ಗೆ ಬಹಳಷ್ಟು ಜನರು ಟೀಕೆ ಮಾಡುತ್ತಿದ್ದರು. ಆದ್ರೆ ಈಗ ಯಾರು ಕೂಡ ಮೀಸಲಾತಿ ಬಗ್ಗೆ ಮಾತಾಡುತ್ತಿಲ್ಲ. ಮೋದಿ ಮೇಲ್ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ಕೊಟ್ಟಿದ್ದಾರೆ. ಈಗ ಯಾರೂ ಕೂಡ ಮೀಸಲಾತಿಯಿಂದ ಹೊರಗುಳಿದಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಮೀಸಲಾತಿ ತಂದಿದ್ದರು. ಅವರು ರಾಜ್ಯದಲ್ಲಿ ಮೊದಲು ಮೀಸಲಾತಿಯನ್ನು ಜಾರಿಗೆ ತಂದರು. ಅರಸು ಕಾಲದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಟ್ರು. ರಾಜೀವ್ ಗಾಂಧಿ ಸಹ ಮೀಸಲಾತಿಯನ್ನು ಕೊಟ್ಟಿದ್ದರು ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದುಳಿದ ಜಾತಿ ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ ಯೋಜನೆ ಮಾಡಲಾಗಿತ್ತು. ನನ್ನ ಅವಧಿಯಲ್ಲೇ ಈ ಯೋಜನೆಯನ್ನು ಜಾರಿ ಮಾಡಿದ್ದೆ. ಆದರೆ ಈಗ ವಿದ್ಯಾಸಿರಿ ಯೋಜನೆಯನ್ನು ತೆಗೆದುಹಾಕಿದ್ದಾರೆ ಎಂದು ಬಿ.ಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಹಿಂದುಳಿದ ವರ್ಗದವರ ಯೋಜನೆ ಎಂದು ತೆಗೆದುಹಾಕಿದ್ದಾರೆ. ಬಿಜೆಪಿ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯವಾಗ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕುಮಾರಸ್ವಾಮಿ, ಈಶ್ವರಪ್ಪಗೆ ಡಿ.ಕೆ. ಶಿವಕುಮಾರ್ ತಿರುಗೇಟು ರಾಜಕಾರಣಕ್ಕಾಗಿ ಕುಮಾರಸ್ವಾಮಿ ಏನೇನೋ ಮಾತಾಡ್ತಿದ್ದಾರೆ. ಕಾಂಗ್ರೆಸ್​ಗೆ ನಡುಕ ಹುಟ್ಟಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ದೇವನಹಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ನಡುಕ ಹುಟ್ಟುತ್ತೋ ಇಲ್ವೋ ಎಂದು ಅವರಿಗೆ ಗೊತ್ತಿದೆ. ನಾನು ನಡುಗುತ್ತೇನೋ, ಹೇಗಿರ್ತೇನೆಂದು ಹೆಚ್​ಡಿಕೆಗೆ ಗೊತ್ತು. ಹುಚ್ಚಾಸ್ಪತ್ರೆಗೆ ಸೇರಿಸಬೇಕೆಂದು ಕೆ.ಎಸ್. ಈಶ್ವರಪ್ಪ ಹೇಳಿಕೆ ವಿಚಾರವಾಗಿಯೂ ಅವರು ಮಾತನಾಡಿದ್ದಾರೆ. ಈಶ್ವರಪ್ಪ ಬೆಡ್​ ರೆಡಿಮಾಡಿಕೊಟ್ಟರೆ ನಾನು ಹೋಗಲು ಸಿದ್ಧ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ನ 20 ಶಾಸಕರು ಸಂಪರ್ಕದಲ್ಲಿದ್ದಾರೆಂದು ಹೇಳುತ್ತಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಹೇಳುತ್ತಾರೆ. ಮತ್ಯಾಕೆ ಬಿಜೆಪಿಯವರಿಗೆ ಭಯ ಶುರುವಾಗಿದೆಯೋ ಗೊತ್ತಿಲ್ಲ. ಯಾವ ಶಾಸಕರು ಸಂಪರ್ಕದಲ್ಲಿದ್ದಾರೆಂದು ನಾವಂತೂ ಹೇಳಿಲ್ಲ ಎಂದು ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ನಿಂದ ಗಾಣಿಗ ಸಮುದಾಯದ ಕಾರ್ಯಾಗಾರ ನಡೆಸಲಾಗಿದೆ. ಕಾರ್ಯಾಗಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

ಇದನ್ನೂ ಓದಿ: ಜೆಡಿಎಸ್​ನದ್ದು ಮಿಷನ್ 123, ಬಿಜೆಪಿಯವರದ್ದು ಮಿಷನ್ 150; ನಮ್ಮದು ಮಿಷನ್ 224: ಡಿಕೆ ಶಿವಕುಮಾರ್

Published On - 3:24 pm, Sun, 3 October 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?