AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ಕಿಬಿತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ

ಕುವೈತ್, ದುಬೈ, ಅಬುದಾಬಿ, ಬ್ಯಾಂಕಾಕ್​ನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಏಳು ಪ್ರಯಾಣಿಕರನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಪ್ರಯಾಣಿಕರ ಬಳಿ ಒಟ್ಟು 3.9 ಕೋಟಿ ರೂ. ಮೌಲ್ಯದ 5 ಕೆಜಿ 135 ಗ್ರಾಂ ಚಿನ್ನ ಸಿಕ್ಕಿದೆ.

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ಕಿಬಿತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ
TV9 Web
| Edited By: |

Updated on:Nov 10, 2023 | 10:45 AM

Share

ಬೆಂಗಳುರು, (ನವೆಂಬರ್ 10): ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Bengaluru Airport) ವಶಕ್ಕೆ ಪಡೆಯಲಾಗಿದೆ. ಕೆಂಪೇಗೌಡ ಏರ್​ಪೋರ್ಟ್​​ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 3.9 ಕೋಟಿ ರೂ. ಮೌಲ್ಯದ 5 ಕೆಜಿ 135 ಗ್ರಾಂ ಚಿನ್ನ ಸಿಕ್ಕಿದೆ. ಇನ್ನು ಈ ಸಂಬಂಧ 7 ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡು ತ‌ನಿಖೆ ನಡೆಸಿದ್ದಾರೆ.

ಕುವೈತ್, ದುಬೈ, ಅಬುದಾಬಿ, ಬ್ಯಾಂಕಾಕ್​ನಿಂದ 7 ಜನ ಪ್ರಯಾಣಿಕರು ಒಳ ಉಡುಪು, ಮಹಿಳೆಯರ ಪರ್ಸ್, ಹ್ಯಾಂಡ್​ಬ್ಯಾಗ್​ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. ಅನುಮಾನಗೊಂಡ ಕೆಂಪೇಗೌಡ ಏರ್​ಪೋರ್ಟ್​​ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ಚಿನ್ನ ಪತ್ತೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ದರೋಡೆಕೋರರ ಬಂಧನ

ಬೆಂಗಳೂರು: ಹೆದ್ದಾರಿಯಲ್ಲಿ ದರೋಡೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಕಿರಣ್​(24), ಮೋಟಗಾನಹಳ್ಳಿ ಮಹದೇವ್​(23), ಬೆಂಗಳೂರಿನ ಮಾಳಗಾಳ ನಿವಾಸಿ ರಕ್ಷಿತ್(23) ಬಂಧಿತರು. ಇನ್ನು ಪರಾರಿಯಾದ ನವೀನ್, ಪರ್ವೇಜ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬಂಧತ ಆರೋಪಿಗಳು ಹೆದ್ದಾರಿಯಲ್ಲಿ ಜನರನ್ನು ಹೆದರಿಸಿ, ಬೆದರಿಸಿ ದರೋಡೆ ಮಾಡುತ್ತಿದ್ದರು. ಇನ್ನು ಬಂಧಿತರಿಂದ ಮಚ್ಚು,ಚಾಕು, ರಾಡು, ಖಾರದಪುಡಿ ಸೇರಿದಂತೆ 2 ಬೈಕ್ ಜಪ್ತಿ ಮಾಡಿದ್ದಾರೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 am, Fri, 10 November 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ