AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ದಿನದ ಹಿಂದಷ್ಟೆ ತಂದೆಯಾಗಿದ್ದ ಆತ, ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ: ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ಸಾವು

Snake Bite: ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ಪೂರೈಕೆ‌ ಮಾಡಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ. ಇನ್ನಾದರೂ ಆರೋಗ್ಯ ಇಲಾಖೆಯವರು ಎಚ್ಚೆತ್ತು ಹಾವು ಕಡಿತಕ್ಕೆ ಗ್ರಾಮೀಣ ಭಾಗದಲ್ಲಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸುತ್ತಾ? ಕಾದು ನೋಡಬೇಕಿದೆ.

40 ದಿನದ ಹಿಂದಷ್ಟೆ ತಂದೆಯಾಗಿದ್ದ ಆತ, ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ: ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ಸಾವು
ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ಸಾವು
TV9 Web
| Edited By: |

Updated on:Feb 27, 2023 | 4:24 PM

Share

ನೆಲಮಂಗಲ: ಆತ ಉತ್ತಮ ಆರೋಗ್ಯಕ್ಕಾಗಿ ಲೇಔಟ್ ಒಂದರಲ್ಲಿ ಸಂಜೆ ವೇಳೆ ವಾಕ್ ಮಾಡ್ತಿದ್ದ. ಆದ್ರೆ ನಾಗರ ಹಾವೊಂದು ಆತನಿಗೆ ಕಚ್ಚಿ ಬಿಡ್ತು (Snake Bite). ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸುವ ವೇಳೆ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾನೆ (death). ಮೇಲಿನ ಫೋಟೋದಲ್ಲಿರುವ ವ್ಯಕ್ತಿ 38 ವರ್ಷದ ಸೈಯದ್ ಸಮೀವುಲ್ಲಾ, ನೆಲಮಂಗಲ (nelamangala) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಲೂರು (solur) ಗ್ರಾಮದ ನಿವಾಸಿ. ನಿನ್ನೆ ರಾತ್ರಿ ವೇಳೆ ವಾಕ್ ಮಾಡುತ್ತಿದ್ದ ಈತ ಹಾವು ಕಡಿತಕ್ಕೊಳಗಾಗಿ ದಾರುಣ ಸಾವನ್ನಪಿದ್ದಾನೆ. 40 ದಿನದ ಹಿಂದಷ್ಟೆ ಮಗುವಿಗೆ ತಂದೆಯಾಗಿದ್ದ ಈತ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದು, ತನ್ನ ಕುಟುಂಬವನ್ನ ತೊರೆದು ಇಹಲೋಕ ತ್ಯಜಿಸಿ, ಪರಲೋಕ ವಾಸಿಯಾಗಿದ್ದಾನೆ. ಇನ್ನು ಸರಿಯಾದ ಸಮಯಕ್ಕೆ 1೦8 ಆಂಬುಲೆನ್ಸ್ ಸಿಗದಿದ್ದ ಕಾರಣ ಸಾವನ್ನಪ್ಪಿದ್ದಾರೆ ಎಂದು ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಅಲಭ್ಯತೆ ಒಂದು ಕಾರಣ ಆದ್ರೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದಿರುವುದು ಮತ್ತೊಂದು ಕಾರಣ. ಮೃತನಿಗೆ ಹಾವು ಕಚ್ಚಿದ ತಕ್ಷಣ ಸೋಲೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ ಎಂದು ಆರೋಪಿಸಲಾಗಿದೆ. ಅಷ್ಟೆ ಅಲ್ಲ ಹಾವು ಕಚ್ಚಿದಾಗ ಚಿಕಿತ್ಸೆ ನೀಡುವ ಚುಚ್ಚುಮದ್ದು ಇಲ್ಲದ ಕಾರಣ ಬೇರೆ ಆಸ್ಪತ್ರೆಗೆ ವರ್ಗಾವಣೆ ಮಾಡಲು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವಾಹ ಬಂದಾಗ ಕರ್ನಾಟಕದತ್ತ ತಿರುಗಿಯೂ ನೋಡದ ಮೋದಿ ಈಗ ರಾಜ್ಯದ ಪ್ರವಾಸಿ; ಕಾಂಗ್ರೆಸ್ ವ್ಯಂಗ್ಯ

ಈ ವೇಳೆ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸೋಲೂರು ಆಸ್ಪತ್ರೆಯಲ್ಲಿ ಹಾವು ಕಚ್ಚಿದ್ದಕ್ಕೆ ಚುಚ್ಚು ಮದ್ದು ಇದ್ದಿದ್ದರೆ ಈ ಸಾವು ಆಗುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ದ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ಪೂರೈಕೆ‌ ಮಾಡಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ. ಇನ್ನಾದರೂ ಆರೋಗ್ಯ ಇಲಾಖೆಯವರು ಎಚ್ಚೆತ್ತು ಹಾವು ಕಡಿತಕ್ಕೆ ಗ್ರಾಮೀಣ ಭಾಗದಲ್ಲಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸುತ್ತಾ? ಕಾದು ನೋಡಬೇಕಿದೆ.

ವರದಿ: ವಿನಾಯಕ್ ಗುರವ್, ಟಿವಿ9, ನೆಲಮಂಗಲ

Published On - 4:20 pm, Mon, 27 February 23

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ