AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ

ಮಗಳ ಮೇಲೆ ಮಲತಾಯಿ ಕ್ರೌರ್ಯ ಮೆರೆದ ಪ್ರಕರಣ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಬೆಳಕಿಗೆ ಬಂದಿದೆ. ಕಬ್ಬಿಣ ಕಾಸಿ ಬರೆ ಎಳೆದು ಮಲತಾಯಿ ಚಿತ್ರಹಿಂಸೆ ನೀಡುತ್ತಿದ್ದಾಳೆ. ತನಗೆ ಯಾಕೆ ಚಿತ್ರಹಿಂಸೆ ನೀಡುತ್ತಿದ್ದಾಳೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಂದೆಗೆ ತಾಯಿ ಹೇಳುತ್ತಿದ್ದಾಳೆ ಎಂದು ಬಾಲಕಿ ಹೇಳಿಕೊಂಡಿದ್ದಾಳೆ.

ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ  ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ
ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಗಳ ಮೇಲೆ ಕ್ರೌರ್ಯ ಮೆರೆದ ಮಲತಾಯಿಯನ್ನು ಬಂಧಿಸಿದ ಮದನಾಯಕನಹಳ್ಳಿ ಠಾಣಾ ಪೊಲೀಸರು
ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on:Feb 25, 2024 | 11:56 AM

Share

ನೆಲಮಂಗಲ, ಫೆ.25: ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಗಳಿಗೆ ಮೇಲೆ ಮಲತಾಯಿಯೊಬ್ಬಳು ಕ್ರೌರ್ಯ ಮೆರೆದ ಪ್ರಕರಣ ಬೆಂಗಳೂರು (Bengaluru) ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಪತಿ ಕೆಲಸಕ್ಕೆ ತೆರಳಿದ ಬಳಿಕ ಮಹಿಳೆ ಏನೇನೋ ನೆಪವೊಡ್ಡಿ ಬಾಲಕಿಗೆ ಚಿತ್ರಹಿಂಸೆ ನೀಡುತ್ತಿದ್ದಳು.

ಶ್ರೀನಿವಾಸ್​ ಪವಿತ್ರಾ ಎಂಬಾಕೆಯನ್ನು ವಿವಾಹವಾಗಿದ್ದರು. ದಂಪತಿಗೆ ಒಬ್ಬಳು ಹೆಣ್ಣು ಮಗು ಕೂಡ ಜನಿಸಿದೆ. ಐದು ವರ್ಷಗಳ ಹಿಂದೆ ಪವಿತಾಳಿಗೆ ಶ್ರೀನಿವಾಸ್ ವಿಚ್ಛೇದನವನ್ನೂ ನೀಡಿದ್ದರು. ಬಳಿಕ ಮಮತಾ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದರು. ಆದರೆ, ಏನೇನೋ ನೆಪವೊಡ್ಡಿ ನಾಲ್ಕನೇ ತರಗತಿ ಓದುತ್ತಿರುವ ಬಾಲಕಿಗೆ ಮಮತಾ ಚಿತ್ರಹಿಂಸೆ ನೀಡಲು ಆರಂಭಿಸಿದ್ದಾಳೆ. ಬಾಲಕಿ ತುಂಬ ಹಠ ಮಾಡುತ್ತಾಳೆ ಎಂದು ಗಂಡನಿಗೆ ದೂರು ನೀಡುವ ಆಕೆ, ಪತಿ ಕೆಲಸಕ್ಕೆ ತೆರಳಿದ ನಂತರ ಮಗು ಎಂಬುದನ್ನು ಮರೆದು ಕಬ್ಬಿಣ ಕಾಯಿಸಿ ಬಾಲಕಿ ಮೈಮೇಲೆ ಬರೆ ಎಳೆದು ಅಮಾನವೀಯವಾಗಿ ವರ್ತಿಸುತ್ತಿದ್ದಾಳೆ.

ಇದನ್ನೂ ಓದಿ: ಧಾರವಾಡ: ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ

ಹಲ್ಲೆ ನಡೆಸಿ ಪತಿಗೆ ಸುಳ್ಳು ಹೇಳುವ ಮಲತಾಯಿ

ಮಲತಾಯಿಯ ಚಿತ್ರಹಿಂಸೆ ಬಗ್ಗೆ ಮಾತನಾಡಿದ ಬಾಲಕಿ, ನನ್ನ ಮೇಲೆ ತಾಯಿ ಯಾಕೆ ಹಲ್ಲೆ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಾಯಿ ತಂದೆಗೆ ಸುಳ್ಳು ಹೇಳುತ್ತಿದ್ದಾಳೆ. ಅಜ್ಜಿ ಮನೆಯಲ್ಲಿ ಇದ್ದಾಗಲೂ ಗಲಾಟೆ ಮಾಡಿ ಕಡೆದುಕೊಂಡು ಬರಲು ತಾಯಿ ಹೇಳಿದ್ದಳು ಎಂದು ಹೇಳಿದ್ದಾಳೆ.

ಮಲತಾಯಿ ಮಗಳ ಮೇಲೆ ಕ್ರೌರ್ಯ ಮೆರೆದ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ನಿನ್ನೆ ರಾತ್ರಿ ನೆಲಮಂಗಲದ ದತ್ತು ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ವಿಚಾರಣೆಗೆಂದು ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sun, 25 February 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು