ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ

ಮಗಳ ಮೇಲೆ ಮಲತಾಯಿ ಕ್ರೌರ್ಯ ಮೆರೆದ ಪ್ರಕರಣ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಬೆಳಕಿಗೆ ಬಂದಿದೆ. ಕಬ್ಬಿಣ ಕಾಸಿ ಬರೆ ಎಳೆದು ಮಲತಾಯಿ ಚಿತ್ರಹಿಂಸೆ ನೀಡುತ್ತಿದ್ದಾಳೆ. ತನಗೆ ಯಾಕೆ ಚಿತ್ರಹಿಂಸೆ ನೀಡುತ್ತಿದ್ದಾಳೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಂದೆಗೆ ತಾಯಿ ಹೇಳುತ್ತಿದ್ದಾಳೆ ಎಂದು ಬಾಲಕಿ ಹೇಳಿಕೊಂಡಿದ್ದಾಳೆ.

ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ  ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ
ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಗಳ ಮೇಲೆ ಕ್ರೌರ್ಯ ಮೆರೆದ ಮಲತಾಯಿಯನ್ನು ಬಂಧಿಸಿದ ಮದನಾಯಕನಹಳ್ಳಿ ಠಾಣಾ ಪೊಲೀಸರು
Edited By: Rakesh Nayak Manchi

Updated on: Feb 25, 2024 | 11:56 AM

ನೆಲಮಂಗಲ, ಫೆ.25: ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಗಳಿಗೆ ಮೇಲೆ ಮಲತಾಯಿಯೊಬ್ಬಳು ಕ್ರೌರ್ಯ ಮೆರೆದ ಪ್ರಕರಣ ಬೆಂಗಳೂರು (Bengaluru) ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಪತಿ ಕೆಲಸಕ್ಕೆ ತೆರಳಿದ ಬಳಿಕ ಮಹಿಳೆ ಏನೇನೋ ನೆಪವೊಡ್ಡಿ ಬಾಲಕಿಗೆ ಚಿತ್ರಹಿಂಸೆ ನೀಡುತ್ತಿದ್ದಳು.

ಶ್ರೀನಿವಾಸ್​ ಪವಿತ್ರಾ ಎಂಬಾಕೆಯನ್ನು ವಿವಾಹವಾಗಿದ್ದರು. ದಂಪತಿಗೆ ಒಬ್ಬಳು ಹೆಣ್ಣು ಮಗು ಕೂಡ ಜನಿಸಿದೆ. ಐದು ವರ್ಷಗಳ ಹಿಂದೆ ಪವಿತಾಳಿಗೆ ಶ್ರೀನಿವಾಸ್ ವಿಚ್ಛೇದನವನ್ನೂ ನೀಡಿದ್ದರು. ಬಳಿಕ ಮಮತಾ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದರು. ಆದರೆ, ಏನೇನೋ ನೆಪವೊಡ್ಡಿ ನಾಲ್ಕನೇ ತರಗತಿ ಓದುತ್ತಿರುವ ಬಾಲಕಿಗೆ ಮಮತಾ ಚಿತ್ರಹಿಂಸೆ ನೀಡಲು ಆರಂಭಿಸಿದ್ದಾಳೆ. ಬಾಲಕಿ ತುಂಬ ಹಠ ಮಾಡುತ್ತಾಳೆ ಎಂದು ಗಂಡನಿಗೆ ದೂರು ನೀಡುವ ಆಕೆ, ಪತಿ ಕೆಲಸಕ್ಕೆ ತೆರಳಿದ ನಂತರ ಮಗು ಎಂಬುದನ್ನು ಮರೆದು ಕಬ್ಬಿಣ ಕಾಯಿಸಿ ಬಾಲಕಿ ಮೈಮೇಲೆ ಬರೆ ಎಳೆದು ಅಮಾನವೀಯವಾಗಿ ವರ್ತಿಸುತ್ತಿದ್ದಾಳೆ.

ಇದನ್ನೂ ಓದಿ: ಧಾರವಾಡ: ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ

ಹಲ್ಲೆ ನಡೆಸಿ ಪತಿಗೆ ಸುಳ್ಳು ಹೇಳುವ ಮಲತಾಯಿ

ಮಲತಾಯಿಯ ಚಿತ್ರಹಿಂಸೆ ಬಗ್ಗೆ ಮಾತನಾಡಿದ ಬಾಲಕಿ, ನನ್ನ ಮೇಲೆ ತಾಯಿ ಯಾಕೆ ಹಲ್ಲೆ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಾಯಿ ತಂದೆಗೆ ಸುಳ್ಳು ಹೇಳುತ್ತಿದ್ದಾಳೆ. ಅಜ್ಜಿ ಮನೆಯಲ್ಲಿ ಇದ್ದಾಗಲೂ ಗಲಾಟೆ ಮಾಡಿ ಕಡೆದುಕೊಂಡು ಬರಲು ತಾಯಿ ಹೇಳಿದ್ದಳು ಎಂದು ಹೇಳಿದ್ದಾಳೆ.

ಮಲತಾಯಿ ಮಗಳ ಮೇಲೆ ಕ್ರೌರ್ಯ ಮೆರೆದ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ನಿನ್ನೆ ರಾತ್ರಿ ನೆಲಮಂಗಲದ ದತ್ತು ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ವಿಚಾರಣೆಗೆಂದು ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sun, 25 February 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us