Sign In

By signing in or creating an account, you agree with Associated Broadcasting Company's Terms & Conditions and Privacy Policy.

Dabaspet: ದಾಬಸ್ ಪೇಟೆಯ ವನಕಲ್ಲು ಮಠದಲ್ಲಿ 6ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಈ ಪ್ರಕರಣದಲ್ಲಿ ಪ್ರತಿಕ್ರಿಯಿಸಿದ ಮಠದ ಸ್ವಾಮೀಜಿಗಳಾದ ಬಸವ ರಮಾನಂದ ಸ್ವಾಮೀಜಿ ಅವರು ಎಲ್ಲಾ ಮಕ್ಕಳು ಮಠಗಳಲ್ಲಿ ಶ್ರಮದಾನ ಮಾಡೋದು ಸಾಮಾನ್ಯ. ಅಜಯ್ ಒಳ್ಳೆಯ ವಿದ್ಯಾರ್ಥಿ, ಆತನ ಸಾವಿಗೆ ನಿಖರ ಕಾರಣ ತಿಳಿದಿಲ್ಲ, ಆತನ ಸಾವು ನಮಗೂ ನೋವು ತಂದಿದೆ ಎಂದಿದ್ದಾರೆ.

Dabaspet: ದಾಬಸ್ ಪೇಟೆಯ ವನಕಲ್ಲು ಮಠದಲ್ಲಿ 6ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ದಾಬಸ್ ಪೇಟೆಯ ವನಕಲ್ಲು ಮಠದಲ್ಲಿ 6ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಸಾಧು ಶ್ರೀನಾಥ್​

Updated on:Nov 04, 2023 | 2:38 PM

ಆತ ಬಾಲ್ಯದಿಂದಲೂ ಮಠದಲ್ಲೇ ಓದುತ್ತಿದ್ದ, ಆತನ ಅಣ್ಣ ಸಹ ಇದೇ ಮಠದಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದ.‌ ಆದ್ರೆ ಆತ ಮೊನ್ನೆ ಗುರುವಾರ ಶಾಲೆಗೆ ಹೋಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಫೋಟೋದಲ್ಲಿರುವ ಈ ಬಾಲಕನ ಹೆಸರು ಅಜಯ್ ಕುಮಾರ್, 12 ವರ್ಷ ವಯಸ್ಸಿನ ಅಜಯ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ( nelamangala) ತಾಲ್ಲೂಕಿನ ದಾಬಸ್ ಪೇಟೆಯ ವನಕಲ್ಲು ಮಲ್ಲೇಶ್ವರ ಮಠದಲ್ಲಿ (Vanakallu mata) 6ನೇ ತರಗತಿಯಲ್ಲಿ (student) ಓದುತ್ತಿದ್ದ ಅಜಯ್ ಮಠದ ಹಿಂಭಾಗದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ.

ನನ್ನ ಮಗನಿಗೆ ನವೆಂಬರ್ ಒಂದರಂದು ರಜೆ ನೀಡಿ ಮನೆಗೆ ಕಳಿಸಿರಲಿಲ್ಲ, ಮಠದಲ್ಲಿ ಹಸು ಮೇಯಿಸಲು ಕಳಿಸಿದ್ದಾರೆ. ಹೀಗಾಗಿ ನನ್ನ ಮಗ ಮನನೊಂದಿದ್ದ, ಅಷ್ಟೆ ಅಲ್ಲ ನನ್ನ ಮಗನನ್ನ ಯಾರೋ ಹೊಡೆದು ಸಾಯಿಸಿದ್ದಾರೆ ಎಂದು ಅಜಯ್ ತಾಯಿ ಆರೋಪಿಸಿದ್ದಾರೆ. ಆದ್ರೆ ಅದೇ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಜಯ್ ನ ಅಣ್ಣ ಮಂಜುನಾಥ್ ಆತನ ಬಗ್ಗೆ ಒಳ್ಳೆ ಮಾತುಗಳನ್ನ ಆಡಿದ್ದಾನೆ. ಎಂದಿನಂತೆ ಚೆನ್ನಾಗಿ ಓದುತ್ತಿದ್ದ, ಈ ಘಟನೆ ಹಿಂದೆ ಯಾವ್ದು ಕೈವಾಡ ಇಲ್ಲ, ಆದ್ರೆ ಆತ ಏನಕ್ಕೆ ಹೀಗೆ ಮಾಡ್ಕೊಂಡಿದ್ದಾನೆ ಅನ್ನೋದು ಗೊತ್ತಿಲ್ಲ ಎಂದಿದ್ದಾನೆ.

Also Read: ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ, ದಂಗಾದ ರೈತ, ಮುಂದೇನಾಯ್ತು?

ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನ ಮಠದ ಬಳಿಗೆ ತೆಗೆದುಕೊಂಡು ಹೋಗಲು ಒತ್ತಾಯಿಸಿದ್ದಾರೆ, ಆದ್ರೆ ಈ ವೇಳೆ ಮಠದ ಬಳಿ ಕಾನೂನು ಸುವ್ಯವಸ್ಥೆಗೆ ದಕ್ಕೆ ಆಗುವ ನೆಪವೊಡ್ಡಿ ಡಾಬಸ್‌ಪೇಟೆ ಪೊಲೀಸರು ಮಠದ ಬಳಿಗೆ ಶವವನ್ನು ತೆಗೆದುಕೊಂಡು ಹೋಗದಂತೆ ತಡೆಹಿಡಿದಿದ್ದಾರೆ. ಈ ಪ್ರಕರಣದಲ್ಲಿ ಪ್ರತಿಕ್ರಿಯಿಸಿದ ಮಠದ ಸ್ವಾಮೀಜಿಗಳಾದ ಬಸವ ರಮಾನಂದ ಸ್ವಾಮೀಜಿ ಅವರು ಎಲ್ಲಾ ಮಕ್ಕಳು ಮಠಗಳಲ್ಲಿ ಶ್ರಮದಾನ ಮಾಡೋದು ಸಾಮಾನ್ಯ. ಅಜಯ್ ಒಳ್ಳೆಯ ವಿದ್ಯಾರ್ಥಿ, ಆತನ ಸಾವಿಗೆ ನಿಖರ ಕಾರಣ ತಿಳಿದಿಲ್ಲ, ಆತನ ಸಾವು ನಮಗೂ ನೋವು ತಂದಿದೆ ಎಂದಿದ್ದಾರೆ.

ಅಜಯನ ತಾಯಿಯು ಆತನ ತಂದೆ ಸತ್ತ ಮೇಲೆ ಬೇರೊಬ್ಬರ ಜೊತೆ ಇದಾರಂತೆ. ಇತ್ತ ಮಠದಲ್ಲಿ ಓದಿನ ಜೊತೆಯಲ್ಲಿ ಮಠದಲ್ಲಿ ಮೈಮುರಿಯೋ ಕೆಲಸ. ಹಾಗಾಗಿ ಬಾಲಕ ಖಿನ್ನತೆಗೊಳಗಾಗಿ ಸಾವನ್ನಪ್ಪಿರಬಹುದೆಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದರು. ಸದ್ಯ ಘಟನೆಗೆ ಸಂಬಂಧಿಸಿದಂತೆ ಡಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅದೇನೆ ಇರಲಿ ಮಠದಲ್ಲಿ ನಡೆದ ಸಾವಿನ ಬಗ್ಗೆ ಅನುಮಾನಗಳು ಸೃಷ್ಟಿಯಾಗಿದ್ದು, ಪೊಲೀಸರ ನೈಜ ತನಿಖೆಯಿಂದ ಪ್ರಕರಣದ ಸತ್ಯಾಸತ್ಯತೆ ಹೊರಬೀಳಬೇಕಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:36 pm, Sat, 4 November 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ