AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಗಲಾಟೆ, ವಿದ್ಯಾರ್ಥಿಗೆ ಚಾಕು ಇರಿತ

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿನ ಮೆಟಲ್ ವಿಷಯವಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆಯೂ ನಡೆದಿದೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಗಲಾಟೆ, ವಿದ್ಯಾರ್ಥಿಗೆ ಚಾಕು ಇರಿತ
ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ವಿದ್ಯಾರ್ಥಿಗೆ ಚಾಕು ಇರಿತ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Sep 04, 2023 | 7:19 PM

Share

ನೆಲಮಂಗಲ, ಸೆ.4: ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿನ ಮೆಟಲ್ ವಿಷಯವಾಗಿ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ವೇಳೆ ಒಬ್ಬನಿಗೆ ಚಾಕು ಇರಿದ ಘಟನೆ ಬೆಂಗಳೂರಿನ (Bengaluru)  ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಆಗಸ್ಟ್ 28 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿ ಮೆಟಲ್ ವಿಷಯವಾಗಿ ಗಲಾಟೆ ನಡೆದಿದೆ. ನಂತರ ಕಾಲೇಜಿನಿಂದ ಹೊರಬರುತ್ತಿದ್ದಂತೆ ಮತ್ತೆ ಗಲಾಟೆ ನಡೆದಿದೆ. ಈ ವೇಳೆ ವಿದ್ಯಾರ್ಥಿ ಪಾಸಿ ಮೊಹಮ್ಮದ್‌ (21) ಎಂಬಾತನಿಗೆ ವಿದ್ಯಾರ್ಥಿ ಬಾಲಕೃಷ್ಣಾರೆಡ್ಡಿ (21) ಸೇರಿದಂತೆ ಇಬ್ಬರು ಚಾಕುವಿನಿಂದ ಇರಿದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಯುವಕನ ಮೇಲೆ ಹಲ್ಲೆ ಮಾಡಿ ಬೆನ್ನಿಗೆ ಚಾಕುನಿಂದ ಇರಿದ ದುಷ್ಕರ್ಮಿಗಳು

ಕೂಡಲೇ ಗಾಯಾಳು ವಿದ್ಯಾರ್ಥಿ ಪಾಸಿ ಮೊಹಮ್ಮದ್​ನನ್ನು ರಾಜಲಕ್ಷ್ಮಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಲಾಟೆ ಸಂಬಂಧ ಇಬ್ಬರನ್ನು ಗಂಗಮ್ಮಗುಡಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು, ಎಸಿಪಿ ಮೇರಿ ಶೈಲಜಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಕಂಟೈನರ್​ ಡಿಕ್ಕಿ, ಬೈಕ್ ಸವಾರ ಸಾವು

ನೆಲಮಂಗಲ: ಕಂಟೈನರ್​ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಟಿ.ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ದೊರೆಸ್ವಾಮಿ (24) ಮೃತ ದುರ್ದೈವಿ. ಶಿವಗಂಗೆಯಲ್ಲಿ ಸ್ನೇಹಿತರನ್ನ ಬೇಟಿಯಾಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಮಾದನಾಯಕನಹಳ್ಳಿ ಗ್ರಾಮದ ನರಸಿಂಹಮೂರ್ತಿ (30) ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕಂಟೇನರ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು, ಕ್ಯಾಂಟರ್ ಹಾಗೂ ಚಾಲಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Mon, 4 September 23

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ