AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಗಲಾಟೆ, ವಿದ್ಯಾರ್ಥಿಗೆ ಚಾಕು ಇರಿತ

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿನ ಮೆಟಲ್ ವಿಷಯವಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆಯೂ ನಡೆದಿದೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಗಲಾಟೆ, ವಿದ್ಯಾರ್ಥಿಗೆ ಚಾಕು ಇರಿತ
ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ವಿದ್ಯಾರ್ಥಿಗೆ ಚಾಕು ಇರಿತ
Follow us
ಬಿ ಮೂರ್ತಿ, ನೆಲಮಂಗಲ
| Updated By: Rakesh Nayak Manchi

Updated on:Sep 04, 2023 | 7:19 PM

ನೆಲಮಂಗಲ, ಸೆ.4: ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿನ ಮೆಟಲ್ ವಿಷಯವಾಗಿ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ವೇಳೆ ಒಬ್ಬನಿಗೆ ಚಾಕು ಇರಿದ ಘಟನೆ ಬೆಂಗಳೂರಿನ (Bengaluru)  ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಆಗಸ್ಟ್ 28 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿ ಮೆಟಲ್ ವಿಷಯವಾಗಿ ಗಲಾಟೆ ನಡೆದಿದೆ. ನಂತರ ಕಾಲೇಜಿನಿಂದ ಹೊರಬರುತ್ತಿದ್ದಂತೆ ಮತ್ತೆ ಗಲಾಟೆ ನಡೆದಿದೆ. ಈ ವೇಳೆ ವಿದ್ಯಾರ್ಥಿ ಪಾಸಿ ಮೊಹಮ್ಮದ್‌ (21) ಎಂಬಾತನಿಗೆ ವಿದ್ಯಾರ್ಥಿ ಬಾಲಕೃಷ್ಣಾರೆಡ್ಡಿ (21) ಸೇರಿದಂತೆ ಇಬ್ಬರು ಚಾಕುವಿನಿಂದ ಇರಿದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಯುವಕನ ಮೇಲೆ ಹಲ್ಲೆ ಮಾಡಿ ಬೆನ್ನಿಗೆ ಚಾಕುನಿಂದ ಇರಿದ ದುಷ್ಕರ್ಮಿಗಳು

ಕೂಡಲೇ ಗಾಯಾಳು ವಿದ್ಯಾರ್ಥಿ ಪಾಸಿ ಮೊಹಮ್ಮದ್​ನನ್ನು ರಾಜಲಕ್ಷ್ಮಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಲಾಟೆ ಸಂಬಂಧ ಇಬ್ಬರನ್ನು ಗಂಗಮ್ಮಗುಡಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು, ಎಸಿಪಿ ಮೇರಿ ಶೈಲಜಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಕಂಟೈನರ್​ ಡಿಕ್ಕಿ, ಬೈಕ್ ಸವಾರ ಸಾವು

ನೆಲಮಂಗಲ: ಕಂಟೈನರ್​ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಟಿ.ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ದೊರೆಸ್ವಾಮಿ (24) ಮೃತ ದುರ್ದೈವಿ. ಶಿವಗಂಗೆಯಲ್ಲಿ ಸ್ನೇಹಿತರನ್ನ ಬೇಟಿಯಾಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಮಾದನಾಯಕನಹಳ್ಳಿ ಗ್ರಾಮದ ನರಸಿಂಹಮೂರ್ತಿ (30) ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕಂಟೇನರ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು, ಕ್ಯಾಂಟರ್ ಹಾಗೂ ಚಾಲಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Mon, 4 September 23

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ