ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಗಲಾಟೆ, ವಿದ್ಯಾರ್ಥಿಗೆ ಚಾಕು ಇರಿತ

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿನ ಮೆಟಲ್ ವಿಷಯವಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆಯೂ ನಡೆದಿದೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಗಲಾಟೆ, ವಿದ್ಯಾರ್ಥಿಗೆ ಚಾಕು ಇರಿತ
ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ವಿದ್ಯಾರ್ಥಿಗೆ ಚಾಕು ಇರಿತ
Edited By: Rakesh Nayak Manchi

Updated on: Sep 04, 2023 | 7:19 PM

ನೆಲಮಂಗಲ, ಸೆ.4: ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿನ ಮೆಟಲ್ ವಿಷಯವಾಗಿ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ವೇಳೆ ಒಬ್ಬನಿಗೆ ಚಾಕು ಇರಿದ ಘಟನೆ ಬೆಂಗಳೂರಿನ (Bengaluru)  ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಆಗಸ್ಟ್ 28 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಅಬ್ಬಿಗೆರೆಯ ಅಶೋಕ್‌ ಐಟಿಐ ಕಾಲೇಜು ಬಳಿ ಪ್ರಾಕ್ಟಿಕಲ್‌ ಕ್ಲಾಸ್‌ನಲ್ಲಿ ಮೆಟಲ್ ವಿಷಯವಾಗಿ ಗಲಾಟೆ ನಡೆದಿದೆ. ನಂತರ ಕಾಲೇಜಿನಿಂದ ಹೊರಬರುತ್ತಿದ್ದಂತೆ ಮತ್ತೆ ಗಲಾಟೆ ನಡೆದಿದೆ. ಈ ವೇಳೆ ವಿದ್ಯಾರ್ಥಿ ಪಾಸಿ ಮೊಹಮ್ಮದ್‌ (21) ಎಂಬಾತನಿಗೆ ವಿದ್ಯಾರ್ಥಿ ಬಾಲಕೃಷ್ಣಾರೆಡ್ಡಿ (21) ಸೇರಿದಂತೆ ಇಬ್ಬರು ಚಾಕುವಿನಿಂದ ಇರಿದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಯುವಕನ ಮೇಲೆ ಹಲ್ಲೆ ಮಾಡಿ ಬೆನ್ನಿಗೆ ಚಾಕುನಿಂದ ಇರಿದ ದುಷ್ಕರ್ಮಿಗಳು

ಕೂಡಲೇ ಗಾಯಾಳು ವಿದ್ಯಾರ್ಥಿ ಪಾಸಿ ಮೊಹಮ್ಮದ್​ನನ್ನು ರಾಜಲಕ್ಷ್ಮಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಲಾಟೆ ಸಂಬಂಧ ಇಬ್ಬರನ್ನು ಗಂಗಮ್ಮಗುಡಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು, ಎಸಿಪಿ ಮೇರಿ ಶೈಲಜಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಕಂಟೈನರ್​ ಡಿಕ್ಕಿ, ಬೈಕ್ ಸವಾರ ಸಾವು

ನೆಲಮಂಗಲ: ಕಂಟೈನರ್​ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಟಿ.ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ದೊರೆಸ್ವಾಮಿ (24) ಮೃತ ದುರ್ದೈವಿ. ಶಿವಗಂಗೆಯಲ್ಲಿ ಸ್ನೇಹಿತರನ್ನ ಬೇಟಿಯಾಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಮಾದನಾಯಕನಹಳ್ಳಿ ಗ್ರಾಮದ ನರಸಿಂಹಮೂರ್ತಿ (30) ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕಂಟೇನರ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು, ಕ್ಯಾಂಟರ್ ಹಾಗೂ ಚಾಲಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Mon, 4 September 23

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us