AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು

Bus Accident: ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ.

ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
TV9 Web
| Edited By: |

Updated on: Mar 16, 2022 | 3:57 PM

Share

ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್‌ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರದಲ್ಲಿ ಕಿರುಕುಳಕ್ಕೆ ಬೇಸತ್ತು ಪಿಡಿಒ ಪತ್ನಿ ಆತ್ಮಹತ್ಯೆ? ಚಾಮರಾಜನಗರ: ಕಿರುಕುಳಕ್ಕೆ ಬೇಸತ್ತು ಪಿಡಿಒ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಆದ್ರೆ ಮೃತಳ ಪೋಷಕರು ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆರೋಪಿಸಿದ್ದಾರೆ. ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಅಳಿಯನೇ ಮಗಳ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾ. ಬಾಗಲಕೋಟೆ ಜಿಲ್ಲೆ ಜಮಖಂಡಿ‌ ನಿವಾಸಿ. ಇವರಿಗೆ 3 ವರ್ಷದ ಹಿಂದೆ ಆನಂದ್ ಕಾಂಬ್ಳೆ ಜೊತೆ ವಿವಾಹವಾಗಿತ್ತು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ನಿವಾಸಿಯಾಗಿರುವ ಆನಂದ್, ಪಿಡಿಒ ಆಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸ್ತಿದ್ದಾರೆ. ಇತ್ತೀಚೆಗೆ ಆನಂದ್ ತಮ್ಮ ಪತ್ನಿಗೆ ಕಿರುಕುಳ ನೀಡ್ತಿದ್ರಂತೆ. ಆಗಾಗ ಕುಡಿದು ಬಂದು ಕಿರುಕುಳ ನೀಡ್ತಿದ್ರಂತೆ. ಈ ವಿಚಾರವನ್ನ ವಿದ್ಯಾ ತಮ್ಮ ಮನೆಯವರಿಗೂ ಹೇಳಿದ್ದರಂತೆ. ಎರಡೂ ಮನೆಯವರು ಇಬ್ಬರಿಗೂ ಬುದ್ಧಿ ಹೇಳ್ತಿದ್ರೂ ಸಮಸ್ಯೆ ಬಗೆಹರಿದಿರಲಿಲ್ಲ. ಆದ್ರೆ, ಅದೇನಾಯ್ತೋ ಏನೋ ವಿದ್ಯಾ ಇದ್ದಕ್ಕಿದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆ ಅಂತಾ ವಿದ್ಯಾ ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಬಾಲಿವುಡ್​ನ​ ಹಳೆಯ ತಲೆಮಾರು ಕುಸಿಯುತ್ತಿದೆ’; ‘ದಿ ಕಾಶ್ಮೀರ್​ ಫೈಲ್ಸ್​’ ಕುರಿತು ಮೌನ ತಾಳಿದವರಿಗೆ ನಿರ್ದೇಶಕನ​ ತಿರುಗೇಟು

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ