ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ; 12 ಗಂಟೆಗಳಿಂದ ವಿಮಾನದಲ್ಲಿ ಲಾಕ್ ಆಗಿರುವ ಪ್ರಯಾಣಿಕರು

ದೆಹಲಿಯಿಂದ ಬೆಂಗಳೂರಿಗೆ ನಿನ್ನೆ ಸಂಜೆ ಹಾರಬೇಕಿದ್ದ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು ಇದುವರೆಗೂ ವಿಮಾನ ಟೇಕಾಫ್ ಆಗಿಲ್ಲ. ಆದರೆ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ಸಿಬ್ಬಂದಿ ಪ್ರಯಾಣಿಕರನ್ನ ಫ್ಲೈಟ್ ಹತ್ತಿಸಿ ಕೆಳಗಡೆ ಇಳಿಯದಂತೆ ಏರೋಬ್ರಿಡ್ಜ್ ಲಾಕ್ ಮಾಡಿದ್ದಾರೆ. ಇದರಿಂದ ಪ್ರಯಾಣಿಕರು 12 ಗಂಟೆಗಳಿಂದ ಪರದಾಡುವಂತಾಗಿದೆ.

ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ; 12 ಗಂಟೆಗಳಿಂದ ವಿಮಾನದಲ್ಲಿ ಲಾಕ್ ಆಗಿರುವ ಪ್ರಯಾಣಿಕರು
Spice Jet Airlines: 12 ಗಂಟೆಗಳಿಂದ ವಿಮಾನದಲ್ಲಿ ಪ್ರಯಾಣಿಕರು ಲಾಕ್
Edited By: ಆಯೇಷಾ ಬಾನು

Updated on: Jul 06, 2024 | 7:27 AM

ದೇವನಹಳ್ಳಿ, ಜುಲೈ.06: ದೆಹಲಿಯಿಂದ ಬೆಂಗಳೂರಿಗೆ ಹಾರಬೇಕಿದ್ದ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ (Spice Jet Airlines) ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರು ಹತ್ತು ಗಂಟೆಗಳ ಕಾಲ ವಿಮಾನದಲ್ಲೇ ಲಾಕ್ ಆಗಿ ಪರದಾಡುವಂತಹ ಪರಿಸ್ಥಿತಿ ನಡೆದಿದೆ. ನಿನ್ನೆ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೋಗುವ SG 8151ನ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನವನ್ನು ಏರಿದ ಸುಮಾರು 60 ಪ್ರಯಾಣಿಕರು ಸತತ 12 ಗಂಟೆಗಳಿಗೂ ಅಧಿಕ ಕಾಲ ವಿಮಾನದೊಳಗೆ ಲಾಕ್ ಆಗಿ ಪರದಾಡಿದ್ದಾರೆ. ತಾಂತ್ರಿಕ ದೋಷ ಎಂದು ನಿನ್ನೆ ಸಂಜೆಯಿಂದ ಬೆಳಗ್ಗೆ ವರೆಗೂ ದೆಹಲಿ ಏರ್ಪೋಟ್​ನಲ್ಲೆ ಫ್ಲೈಟ್ ನಿಲ್ಲಿಸಲಾಗಿದ್ದು ಪ್ರಯಾಣಿಕರನ್ನು ಹೊರಗೆ ಬಿಡದೆ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಅಲ್ಲದೆ ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆಯೂ ಮಾಡದೆ ಫ್ಲೈಟ್​ನಲ್ಲೇ ಕೂರಿಸಿದ್ದಾರೆ. ಆಚೆಯೂ ಹೋಗಲಾಗದೆ ಒಳಗೂ ಇರಲಾಗದೆ ಪರದಾಡುತ್ತಿರುವ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.

ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನ ನಿನ್ನೆ ರಾತ್ರಿ 7.40ಕ್ಕೆ ದೆಹಲಿಯ ಟರ್ಮಿನಲ್ 3 ಯಿಂದ ಟೇಕಾಫ್ ಆಗಬೇಕಿತ್ತು. ಆದರೆ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಟೇಕಾಫ್ ಆಗಿಲ್ಲ. ಬೆಳಗಿನ ಜಾವ 7 ಗಂಟೆಯಾದರೂ ವಿಮಾನ ದೆಹಲಿಯಿಂದ ಹೊರಡಿಲ್ಲ. ಆದಷ್ಟು ಬೇಗ ಟೇಕಾಫ್ ಮಾಡ್ತೀವಿ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ಏಕೆ? ಸಿದ್ದರಾಮಯ್ಯ ರಾಜಕೀಯ ತಂತ್ರವೇನು?

ವಿಮಾನ ಹೈಜಾಕ್ ಮಾಡಿದ್ದೀರಾ ಅಂದು ಗಲಾಟೆ

ಇನ್ನು ಯಾವುದೇ ಮಾಹಿತಿ ಸಿಗದೆ ವಿಮಾನದಲ್ಲಿ ಕೂತು ಬೇಸತ್ತ ಪ್ರಯಾಣಿಕರು ವಿಮಾನದಲ್ಲಿ ಗಲಾಟೆ ಮಾಡಿದ್ದಾರೆ. ವಿಮಾನ ಹೈಜಾಕ್ ಮಾಡಿದ್ದೀರಾ ಅಂತ‌ ಪ್ರಶ್ನೆಮಾಡಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರಿಂದ ಗದ್ದಲ ಗಲಾಟೆಯಾಗಿದೆ. ಇನ್ನು ಏಳೆಂಟು ಬಾರಿ ಬೋರ್ಡಿಂಗ್ ಪಾಸ್ ಬದಲಾಯಿಸಿರುವ ಆರೋಪ ಕೇಳಿ ಬಂದಿದೆ. ಹೊರಗಡೆಯೂ ಬಿಡುತ್ತಿಲ್ಲ, ಏನಾಗ್ತಿದೆ ಅಂತನೂ ಹೇಳುತ್ತಿಲ್ಲ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕ ಮಕ್ಕಳಿದ್ದಾರೆ, ವೃದ್ಧರಿದ್ದಾರೆ ನಾವು ನಮ್ಮ ಊರಿಗೆ ತೆರಳಬೇಕಿತ್ತು ಅಂತ ಗಲಾಟೆ ಮಾಡಿದ್ದಾರೆ.

ಪ್ರಯಾಣಿಕರ ಬೋರ್ಡಿಂಗ್ ಪಾಸ್​ಗಳನ್ನ ಬದಲಾವಣೆ ಮಾಡಿ ಫ್ಲೈಟ್​ನಲ್ಲೇ ಕೂರಿಸಲಾಗಿದೆ. ಸೂಕ್ತ ಮಾಹಿತಿ ನೀಡದೆ ಫ್ಲೈಟ್​ನಲ್ಲೇ ಕೂರಿಸಿರುವುದಕ್ಕೆ ಏರ್ಲೈನ್ಸ್ ವಿರುದ್ದ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಸಾವಿರಾರು ರೂಪಾಯಿ ಹಣ ನೀಡಿ ಟಿಕೆಟ್ ಖರೀದಿಸಿದ್ರು ಸಮರ್ಪಕ ಸೇವೆ ನೀಡಿಲ್ಲ ಅಂತ ಗರಂ ಆಗಿದ್ದಾರೆ. ದೆಹಲಿ ಜೊತೆಗೆ ವಿದೇಶದಿಂದ ಬಂದಿರುವ ಪ್ರಯಾಣಿಕರು, ಮಹಿಳೆಯರು, ಪುರುಷರು, ಹಿರಿಯರು ಸೇರಿದಂತೆ 60 ಜನ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಪ್ರಯಾಣಿಕರನ್ನ ಫ್ಲೈಟ್ ಹತ್ತಿಸಿ ಕೆಳಗಡೆ ಇಳಿಯದಂತೆ ಏರೋಬ್ರಿಡ್ಜ್ ಲಾಕ್ ಮಾಡಲಾಗಿದೆ. ಹೀಗಾಗಿ ಏರೋಬ್ರಿಡ್ಜ್ ನಲ್ಲೆ ಕೂತು, ಮಲಗಿ ಪ್ರಯಾಣಿಕರು ಕಷ್ಟಪಡುತ್ತಿದ್ದಾರೆ. ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us