AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯಲ್ಲಿ ದೇವಸ್ಥಾನ‌ ವಿಚಾರದಲ್ಲಿ ಪಾಲಿಟಿಕ್ಸ್: ಸಚಿವರ ಪುತ್ರ ಹೋಗ್ತಾನೆಂದು ದೇವಸ್ಥಾನಕ್ಕೆ ಬೀಗ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ‌ ಗ್ರಾಮದ ದೇವಸ್ಥಾನಕ್ಕೆ ಸಚಿವ ಎಂಟಿಬಿ ನಾಗರಾಜ್ ಪುತ್ರ ರಾಜೇಶ್ ಭೇಟಿ ನೀಡುತ್ತಾರೆಂದು ಶಾಸಕ ಶರತ್ ಬಚ್ಚೇಗೌಡ ಕಡೆಯವರು ದೇವಸ್ಥಾನಕ್ಕೆ ಬೀಗ ಹಾಕಿಸಿದ್ದಾರೆ.

ಹೊಸಕೋಟೆಯಲ್ಲಿ ದೇವಸ್ಥಾನ‌ ವಿಚಾರದಲ್ಲಿ ಪಾಲಿಟಿಕ್ಸ್: ಸಚಿವರ ಪುತ್ರ ಹೋಗ್ತಾನೆಂದು ದೇವಸ್ಥಾನಕ್ಕೆ ಬೀಗ
ಸಚಿವರ ಪುತ್ರ ಹೋಗ್ತಾನೆಂದು ದೇವಸ್ಥಾನಕ್ಕೆ ಬೀಗ
TV9 Web
| Updated By: ಆಯೇಷಾ ಬಾನು|

Updated on: Dec 16, 2022 | 1:01 PM

Share

ದೇವನಹಳ್ಳಿ: ಪದೇ ಪದೇ ಪ್ರೋಟೋಕಾಲ್ ವಿಚಾರಕ್ಕೆ ಸುದ್ದಿಯಾಗ್ತಿದ್ದ ಹೊಸಕೋಟೆಯಲ್ಲಿ ಇದೀಗ ದೇವಸ್ಥಾನ ವಿಚಾರಕ್ಕೆ ರಾಜಕೀಯ ಶುರುವಾಗಿದೆ(Temple Politics in Hoskote). ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ‌ ಗ್ರಾಮದಲ್ಲಿ ದೇವಾಲಯಕ್ಕೆ ಸಚಿವರ ಪುತ್ರ ಹೋಗ್ತಾನೆ ಎಂದು ಶಾಸಕ ಶರತ್ ಬಚ್ಚೇಗೌಡ(Sharath Bachegowda) ಕಡೆಯವರು ದೇವಸ್ಥಾನಕ್ಕೆ ಬೀಗ ಹಾಕಿಸಿರುವ ಆರೋಪ ಕೇಳಿ ಬಂದಿದೆ.

ಪರಸ್ಪರ ಶಾಸಕ ಮತ್ತು ಸಚಿವರ ಬೆಂಬಲಿಗರ ನಡುವೆ ಶೀತಲ‌ ಸಮರ ಶುರುವಾಗಿದೆ. ಶಾಸಕ ಶರತ್ ಬಚ್ಚೇಗೌಡ ತವರೂರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ನೆನ್ನೆ(ಡಿ.15) ಸಂಜೆ ಸಚಿವ ಎಂಟಿಬಿ ನಾಗರಾಜ್ ಪುತ್ರ ರಾಜೇಶ್ ಭೇಟಿ ನೀಡುವುದಾಗಿ ತಿಳಿಸಿದ್ರಂತೆ. ಆದ್ರೆ ಈ ವೇಳೆ ಸಚಿವರ ಪುತ್ರ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ ಅಂತ ತಿಳಿದು ದೇವಸ್ಥಾನಕ್ಕೆ ಬೀಗ ಹಾಕಿಸಿದ್ದಾರೆ‌ ಅಂತ ಸಚಿವ ಎಂಟಿಬಿ ನಾಗರಾಜ್ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ‌.

ಇದನ್ನೂ ಓದಿ: ಮಂಗಳೂರಿನಲ್ಲಿ ಹೆಚ್ಚಾದ ನೈತಿಕ ಪೊಲೀಸ್ ಗಿರಿ: ಹಿಂದೂ ಯುವತಿ- ಮುಸ್ಲಿಂ ಯುವಕ ಪ್ರಯಾಣಿಸುತ್ತಿದ್ದ ಬಸ್ ತಡೆದು ಭಜರಂಗದಳ ಕಾರ್ಯಕರ್ತರ ಗಲಾಟೆ

ಗ್ರಾಮದ ದೇವಸ್ಥಾನಕ್ಕೆ‌ ಬೀಗ ಹಾಕಿರುವ ಪೊಟೋಗಳನ್ನ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿರುವ ಎಂಟಿಬಿ ಬೆಂಬಲಿಗರು ಶಾಸಕ ಶರತ್ ಬಚ್ಚೆಗೌಡ ಕಡೆಯವರು ದೇವಸ್ಥಾನದ ವಿಚಾರದಲ್ಲೂ ರಾಜಕೀಯ ಮಾಡಲು ಹೊರಟಿದ್ದಾರೆ ದೇವಸ್ಥಾನಕ್ಕೆ ಬರುವುದನ್ನ ತಡೆಯಬಹುದು. ಆದ್ರೆ ಮತದಾರರ ಮನಸ್ಸಿಗೆ ಬರೂದನ್ನ ತಡೆಯಲು ಸಾಧ್ಯವಿಲ್ಲ ಅಂತ ಶಾಸಕ ಶರತ್ ಬಚ್ಚೇಗೌಡ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ