AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು (ಆ.08) ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಮನಕಲಕುವಂತೆ ಮಾಡಿದೆ. ಗರ್ಭಣಿ ಮೇಲೆ ಟಿಪ್ಪರ್​ ಹರಿದ ಪರಿಣಾಮ ಹೊಟ್ಟೆಯಿಂದ ಹೊರ ಬಂದ 8 ತಿಂಗಳ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ.

ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು
ಮೃತ ಸಿಂಚನಾ, ಪತ್ನಿ ದೇಹದ ಮುಂದೆ ಕುಳಿತು ಪತಿಯ ಗೋಳಾಟ
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ|

Updated on:Aug 07, 2024 | 11:11 AM

Share

ನೆಲಮಂಗಲ, ಆಗಸ್ಟ್​​ 07: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ (NH 4) ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಹಿಂಬದಿ ಕುಳಿತಿದ್ದ ಗರ್ಭಿಣಿ (Pregnant) ಮೃತಪಟ್ಟಿದ್ದಾರೆ. ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಗಡೆ ಬಂದು ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ​ಪಾರಾಗಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್​ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಬೈಕ್​ನಿಂದ ಕೆಳೆಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ​ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ. ಮನಕಲಕುವ ಘಟನೆ ಕಂಡು ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ.

ಮೃತ ದೇಹದ ಮುಂದೆ ಪತಿ ಮಂಜುನಾಥ್​​ ಹಾಗೂ ಅತ್ತೆಯ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹದ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ನರ್ಸಿಂಗ್​ ವಿದ್ಯಾರ್ಥಿನಿ ಆತ್ಮಹತ್ಯೆ: ಸಾಯುವ ಮುನ್ನ ತಾಯಿಗೆ ಕರೆ ಮಾಡಿ ಹೇಳಿದ್ದೇನು ಗೊತ್ತಾ?

ಘಟನೆ ಸಂಬಂಧ ಮೃತ ಸಿಂಚನಾ ಪತಿ ಮಂಜುನಾಥ ಮಾತನಾಡಿ, ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ದಾಬಸ್​ಪೇಟೆ ಮುಖಾಂತರ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎಡೆಹಳ್ಳಿ ಮುಖಾಂತರವಾಗಿ ತೋಟನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದೇವು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಲಾರಿ ನಾವಿದ್ದ ಬೈಕಿಗೆ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ಸಿಂಚನಾ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೊಟ್ಟೆಯಿಂದ ಮಗು ಆಚೆ ಬಂದಿದೆ ಈ ದೃಶ್ಯ ನೋಡಲು ನನ್ನಿಂದ ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ.

ಕಳೆದ ಆರು ತಿಂಗಳಲ್ಲಿ ನೆಲಮಂಗಲ ಸಾಂಚಾರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 7 August 24

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ