AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಡಿ ರೌಡಿಗಳ ಹಾವಳಿ: ಠಾಣೆಗೆ ಕರೆಸಿ ವಾರ್ನ್​​ ಮಾಡಿದ ಹೆಚ್ಚುವರಿ ಎಸ್​ಪಿ ಪುರುಷೋತ್ತಮ್

ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ 102 ರೌಡಿಶೀಟರ್​ಗಳ ಪೈಕಿ 46 ರೌಡಿಶೀಟರ್​​ಗಳನ್ನು ಪೊಲೀಸ್ ಠಾಣೆಗೆ ಕರೆಸಿ ಅಡಿಷನಲ್ SP ಪುರುಷೋತ್ತಮ್ ಫುಲ್ ಗ್ರಿಲ್​ ಮಾಡಿದ್ದಾರೆ. ಏರಿಯಾದಲ್ಲಿ ಲಾಂಗು, ಮಚ್ಚು ಹಿಡಿದು ಓಡಾಡದಂತೆ ರೌಡಿಶೀಟರ್​​ಗಳಿಗೆ ವಾರ್ನ್​​ ಮಾಡಿದ್ದಾರೆ.

ರಾಮು, ಆನೇಕಲ್​
| Edited By: |

Updated on:Jul 23, 2023 | 3:28 PM

Share

ಬೆಂಗಳೂರು ಗ್ರಾಮಾಂತರ, ಜುಲೈ 23: ಏರಿಯಾದಲ್ಲಿ ಹವಾ ಮೆಂಟೇನ್ ಮಾಡಲು ಲಾಂಗು, ಮಚ್ಚುಗಳನ್ನು ಹಿಡಿದು ಓಡಾಡುತ್ತಿದ್ದ ರೌಡಿಶೀಟರ್​(Rowdysheeter) ಗಳನ್ನು ಆನೇಕಲ್​ ಠಾಣೆಗೆ ಕರೆಸಿದ ಅಡಿಷನಲ್ SP ಪುರುಷೋತ್ತಮ್ ಎಚ್ಚರಿಕೆ ನೀಡಿದ್ದಾರೆ. ಆನೇಕಲ್ ಉಪವಿಭಾಗದಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಕಳೆದೊಂದು ತಿಂಗಳಿಂದ ಪೊಲೀಸರ ನಿದ್ದೆಗೆಡಿಸಿದ್ದರು.

ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ 102 ರೌಡಿಶೀಟರ್​ಗಳ ಪೈಕಿ 46 ರೌಡಿಶೀಟರ್​​ಗಳನ್ನು ಪೊಲೀಸ್ ಠಾಣೆಗೆ ಕರೆಸಿ ಫುಲ್ ಗ್ರಿಲ್​ ಮಾಡಲಾಗಿದೆ. ಭೂಮಾಫಿಯಾ, ಹಫ್ತಾ ವಸೂಲಿ, ಗಲಾಟೆ, ಬೆದರಿಕೆ ಹಾಕದಂತೆ ಎಚ್ಚರಿಕೆ ನಿಡಿದ್ದಾರೆ. ಜೊತೆಗೆ ಠಾಣಾ ಪೊಲೀಸರಿಗೂ ಹೆಚ್ಚುವರಿ SP ಪುರುಷೋತ್ತಮ್ ವಾರ್ನ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಕೇಸ್: ಪ್ರಮುಖ ಆರೋಪಿ ಪತ್ತೆಗೆ ಲುಕ್​​ಔಟ್​ ನೋಟಿಸ್​​ ಜಾರಿಗೆ ಸಿದ್ಧತೆ

ತಿಂದ ಮನೆಗೆ ಕನ್ನ ಹಾಕಿದ ಖದೀಮರ ಬಂಧನ

ಆನೇಕಲ್: ತಿಂದ ಮನೆಗೆ ಖದೀಮರು ಕನ್ನ ಹಾಕಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್​ನಲ್ಲಿ ನಡೆದಿದೆ. ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೋಲೀಸರ ಯಶಸ್ವಿ ಕಾರ್ಯಾಚರಣೆ ನಡೆಸುವ ಮೂಲಕ ಮಹೇಂದ್ರ ಸಿಂಗ್, ಜಗಮಲ್ ಸಿಂಗ್​ನನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ರಾಜಸ್ಥಾನ ಮೂಲದವರು ಎನ್ನಲಾಗಿದೆ.

ಬೊಮ್ಮಸಂದ್ರ ಸಮೀಪದ ಯಾರಂಡಹಳ್ಳಿಯ ಕನ್ನಿಕಾ ನಗರದ ಮನೆಯ ಬಾಗಿಲು ಮುರಿದು ಆಸಾಮಿಗಳು ಕೈಚಳಕ ತೋರಿದ್ದಾರೆ. ಗುಟ್ಕಾ ವ್ಯಾಪಾರಿ ಸರ್ವಣ್ ಭಾರತಿ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದು, 25 ಲಕ್ಷ ಹಣವನ್ನ ಕದ್ದು ಎಸ್ಕೇಪ್ ಆಗಿದ್ದಾರೆ. ಆದರೆ ಪ್ರಮುಖ ಸಂಗತಿ ಅಂದರೆ ಆರೋಪಿಗಳಿಬ್ಬರು ಸರ್ವಣ್ ಭಾರತಿ ಬಳಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ದುಬಾರಿ ದುನಿಯಾ; ಆಗಸ್ಟ್​ನಿಂದ ಹೋಟೆಲ್‌ ತಿಂಡಿ ಊಟದ ದರ ಶೇ 10ರಷ್ಟು ಹೆಚ್ಚಳಕ್ಕೆ ತೀರ್ಮಾನ

ಗುಟ್ಕಾ ಮಾರಾಟದಿಂದ ಹಣ ಬಂದ ವಿಷಯನ್ನು ತಿಳಿದಿದ್ದ ಮಹೇಂದ್ರ ಸಿಂಗ್​ ಚೆನೈನಲ್ಲಿದ್ದ ಸ್ನೇಹಿತ ಜಗಮಲ್ ಸಿಂಗ್ ಜೊತೆ ಸೇರಿ ಸ್ಕೇಚ್ ಹಾಕಿದ್ದ. ಅದರಂತೆಯೇ ಕಳೆದ 19 ರಂದು ಲೋಡ್ ಇಳಿಸಿ ಬರಲು ಸರ್ವಣ್​ ಹೋಗಿದ್ದಾರೆ. ಈ ವೇಳೆ 25 ಲಕ್ಷ ಹಣ ಕದ್ದಿದ್ದಾರೆ. ಮನೆಯಲ್ಲಿದ್ದ ಹಣ ಕಳ್ಳತನವಾಗಿರುವ ಬಗ್ಗೆ ಹೆಬ್ಬಗೋಡಿ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹೇಂದ್ರ ಸಿಂಗ್​ನನ್ನು ಕರೆತಂದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Sun, 23 July 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ