AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿನ ವಿದ್ಯಮಾನ ಒಳ್ಳೆಯದಲ್ಲ: ಶಾಲಾ ಕಾಲೇಜುಗಳಲ್ಲಿ ಜಾತಿ ಮತ ಇರುವುದಿಲ್ಲ, ಎಲ್ಲರೂ ಒಂದೇ- ಸರ್ಜಾಪುರದಲ್ಲಿ ಉಪ ರಾಷ್ಟ್ರಪತಿ ನಾಯ್ಡು

ಪರಿಸರ ಕಾಳಜಿ, ಹವಾಮಾನ ವಿಚಾರದಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ- ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಧರ್ಮದ ಬಗ್ಗೆ ತಿಳಿಸಬೇಕು. ಎಲ್ಲಾ ಭಾಷೆಯನ್ನು ಕಲಿಯಬೇಕು, ಮಾತೃ ಭಾಷೆ ಮರೆಯಬಾರದು ಎಂದು ಬೆಂಗಳೂರಿನ ಸರ್ಜಾಪುರದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿನ ವಿದ್ಯಮಾನ ಒಳ್ಳೆಯದಲ್ಲ: ಶಾಲಾ ಕಾಲೇಜುಗಳಲ್ಲಿ ಜಾತಿ ಮತ ಇರುವುದಿಲ್ಲ, ಎಲ್ಲರೂ ಒಂದೇ- ಸರ್ಜಾಪುರದಲ್ಲಿ ಉಪ ರಾಷ್ಟ್ರಪತಿ ನಾಯ್ಡು
ವೆಂಕಯ್ಯ ನಾಯ್ಡು
TV9 Web
| Edited By: |

Updated on:Feb 26, 2022 | 12:26 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನ ಒಳ್ಳೆಯದಲ್ಲ. ಶಾಲಾ- ಕಾಲೇಜುಗಳಲ್ಲಿ(School-College) ಜಾತಿ ಮತ ಇರುವುದಿಲ್ಲ. ಎಲ್ಲರೂ ಒಂದೇ. ನಾವೆಲ್ಲರೂ ಭಾರತೀಯರು. ಭಾರತೀಯತೆ ನಮ್ಮದಾಗಬೇಕು. ಶಾಲಾ ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ನಡೆಸಬೇಕು. ಪರಿಸರ ಕಾಳಜಿ, ಹವಾಮಾನ ವಿಚಾರದಲ್ಲಿ ಜಾಗೃತಿ ಮೂಡಿಸಬೇಕು. ಇಡೀ ದೇಶದ ಶೈಕ್ಷಣಿಕ ಸಂಸ್ಥೆಗಳನ್ನು ಅಳವಡಿಸಬೇಕು. ಶಾಲಾ- ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ (Students) ಧರ್ಮದ ಬಗ್ಗೆ ತಿಳಿಸಬೇಕು. ಎಲ್ಲಾ ಭಾಷೆಯನ್ನು ಕಲಿಯಬೇಕು, ಮಾತೃ ಭಾಷೆ ಮರೆಯಬಾರದು ಎಂದು ಬೆಂಗಳೂರಿನ ಸರ್ಜಾಪುರದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು(Venkaiah naidu) ಹೇಳಿಕೆ ನೀಡಿದ್ದಾರೆ.

ಶಾಲಾ- ಕಾಲೇಜುಗಳಲ್ಲಿ ಯಾವುದೇ ವಿವಾದ ಬೇಡ. ಶಾಲೆಗಳು ಮಾಡಿರುವ ಕ್ರಮವನ್ನು ವಿದ್ಯಾರ್ಥಿ ಅಳವಡಿಸಕೊಳ್ಳಬೇಕು. ಇರುವೆಗಳಿಗೆ ಸಕ್ಕರೆ ಹಾಕಿ, ಹಾವಿಗೆ ಹಾಲೆರದು, ಪಶುಗಳಿಗೆ ಮೇವು ಹಾಕಿ, ತಿಲಕವಿಟ್ಟು ಗೌರವಿಸುವ ಸಂಸ್ಕಾರ ನಮ್ಮದು. ಎಲ್ಲಾ ಭಾಷೆಯನ್ನು ಕಲಿಯಬೇಕು ಆದರೆ ಮೊದಲು ನಿಮ್ಮ ಮಾತೃ ಭಾಷೆ ಕಲೀರಿ. ಮೊದಲು ಕನ್ನಡ ಕಲೀರಿ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಮಾತೃ ಭಾಷೆ ಕಣ್ಣು ಇದ್ದಂತೆ. ಇತರೆ ಭಾಷೆ ಕನ್ನಡಕ ಇದ್ದಂತೆ. ಕಣ್ಣೆ ಇಲ್ಲದಿದ್ದರೆ ರಿಬಾನ್ ಗ್ಲಾಸ್ ಹಾಕಿದ್ರೂ ಪ್ರಯೋಜನ ಇರಲ್ಲ ಎಂದು ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಸರ್ಜಾಪುರಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಾಥ್ ನೀಡಿದ್ದಾರೆ. ಖಾಸಗೀ ಶಾಲೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಭಾಗಿಯಾಗಿದ್ದಾರೆ.

ಇದನ್ನೂ ಓದಿ:

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ಮಾಡಿದ ಶಿವರಾಜ್​​ಕುಮಾರ್​; ಇಲ್ಲಿವೆ ಫೋಟೋಗಳು

Karnataka Hijab Hearing Highlights: ಹಿಜಾಬ್​ ವಿವಾದ! ವಾದಮಂಡನೆ ಮುಕ್ತಾಯ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Published On - 12:13 pm, Sat, 26 February 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ