AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು

ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ. 30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ ಘಟನೆ ನಡೆದಿದೆ.

ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು
ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Aug 24, 2023 | 11:16 AM

Share

ನೆಲಮಂಗಲ, ಆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ(Theft). ಗೋಡಾನ್ ರೋಲಿಂಗ್ ಶೆಟರ್ ತೆಗೆದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಾಪರ್ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ  30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಗೂಡ್ಸ್ ವಾಹನದಲ್ಲಿ ಮಾಲು ಸಾಗಿಸಿರುವ ಶಂಕೆ ವ್ಯಕ್ತವಾಗಿದೆ. ಕಂಪನಿಯ ಮ್ಯಾನೇಜರ್ ಲೋಕೇಶ್ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಟೋ ಕದಿಯುತ್ತಿದ್ದ ಖದೀಮ ಅರೆಸ್ಟ್

ನಂಬಿಕೆ ಗಳಿಸಿ ಅಟೋಗಳನ್ನ ಕದ್ದಿಯುತ್ತಿದ್ದ ಆರೋಪಿಯನ್ನು ಪೀಣ್ಯಾ ಪೊಲೀಸರು ಬಂಧಿಸಿದ್ದಾರೆ. ಹಾಸನದ ವಿಷ್ಣು(24) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 2 ಆಟೋ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆಗಸ್ಟ್ 17 ರಂದು ವಿಜಯಕುಮಾರ್ ಎಂಬುವವರಿಗೆ ಸರಾಯಿ ಕೊಡಿಸಿ ಹಳೆಯ ಆಟೋದಲ್ಲಿ ಮಲಗಿಸಿ ಹೊಸ ಅಟೋ ಕದ್ದಿದ್ದ ವಿಷ್ಣುವಿನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಸಿಸಿ ಟಿವಿ ಹಾಗೂ ಮೊಬೈಲ್ ಟವರ್ ಅಧಾರದ ಮೇಲೆ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Karnataka Breaking Kannada News Live: ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ-ಹಣ್ಣು ದರ ಏರಿಕೆ

ಖರ್ಚಿಗೆ ಹಣ ಇಲ್ಲ ಅಂದರೆ ಕಳ್ಳತನಕ್ಕೆ ಇಳಿಯುತ್ತಿದ್ದ ವಿಷ್ಣು, ಉಳಿದಂತೆ ಕೆಂಗೇರಿ ಅಂಬೂರ್ ಬಿರಿಯಾನಿ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿದ್ದ. ಮಾದನಾಯಕನಹಳ್ಳಿ, ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಹಾಗೂ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದಾನೆ. ಅತಿಯಾದ ಕಳವು ಪ್ರಕರಣಗಳಲ್ಲಿ ಭಾಗಿ ಹಿನ್ನೆಲೆ ಪೋಷಕಎಉ ಈತನನ್ನು ಮನೆಯಿಂದ ಹೊರ ಹಾಕಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​