AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು

ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ. 30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ ಘಟನೆ ನಡೆದಿದೆ.

ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು
ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ
ಬಿ ಮೂರ್ತಿ, ನೆಲಮಂಗಲ
| Edited By: ಆಯೇಷಾ ಬಾನು|

Updated on: Aug 24, 2023 | 11:16 AM

Share

ನೆಲಮಂಗಲ, ಆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ(Theft). ಗೋಡಾನ್ ರೋಲಿಂಗ್ ಶೆಟರ್ ತೆಗೆದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಾಪರ್ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ  30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಗೂಡ್ಸ್ ವಾಹನದಲ್ಲಿ ಮಾಲು ಸಾಗಿಸಿರುವ ಶಂಕೆ ವ್ಯಕ್ತವಾಗಿದೆ. ಕಂಪನಿಯ ಮ್ಯಾನೇಜರ್ ಲೋಕೇಶ್ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಟೋ ಕದಿಯುತ್ತಿದ್ದ ಖದೀಮ ಅರೆಸ್ಟ್

ನಂಬಿಕೆ ಗಳಿಸಿ ಅಟೋಗಳನ್ನ ಕದ್ದಿಯುತ್ತಿದ್ದ ಆರೋಪಿಯನ್ನು ಪೀಣ್ಯಾ ಪೊಲೀಸರು ಬಂಧಿಸಿದ್ದಾರೆ. ಹಾಸನದ ವಿಷ್ಣು(24) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 2 ಆಟೋ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆಗಸ್ಟ್ 17 ರಂದು ವಿಜಯಕುಮಾರ್ ಎಂಬುವವರಿಗೆ ಸರಾಯಿ ಕೊಡಿಸಿ ಹಳೆಯ ಆಟೋದಲ್ಲಿ ಮಲಗಿಸಿ ಹೊಸ ಅಟೋ ಕದ್ದಿದ್ದ ವಿಷ್ಣುವಿನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಸಿಸಿ ಟಿವಿ ಹಾಗೂ ಮೊಬೈಲ್ ಟವರ್ ಅಧಾರದ ಮೇಲೆ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Karnataka Breaking Kannada News Live: ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ-ಹಣ್ಣು ದರ ಏರಿಕೆ

ಖರ್ಚಿಗೆ ಹಣ ಇಲ್ಲ ಅಂದರೆ ಕಳ್ಳತನಕ್ಕೆ ಇಳಿಯುತ್ತಿದ್ದ ವಿಷ್ಣು, ಉಳಿದಂತೆ ಕೆಂಗೇರಿ ಅಂಬೂರ್ ಬಿರಿಯಾನಿ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿದ್ದ. ಮಾದನಾಯಕನಹಳ್ಳಿ, ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಹಾಗೂ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದಾನೆ. ಅತಿಯಾದ ಕಳವು ಪ್ರಕರಣಗಳಲ್ಲಿ ಭಾಗಿ ಹಿನ್ನೆಲೆ ಪೋಷಕಎಉ ಈತನನ್ನು ಮನೆಯಿಂದ ಹೊರ ಹಾಕಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?