AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಡೆ ಕಳ್ಳತನ, ಆನೇಕಲ್​ನಲ್ಲಿ ಕಾರಿನ ಗಾಜು ಒಡೆದು ಹಣ ಕದ್ದ ಖದೀಮರು

ಏರ್ಪೋರ್ಟ್ ರಸ್ತೆಯಲ್ಲಿ ‌ಕಳ್ಳರ ಹಾವಳಿ ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಮೂರು‌ ಕಡೆ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಖತರ್ನಾಕ್ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ.

ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಡೆ ಕಳ್ಳತನ, ಆನೇಕಲ್​ನಲ್ಲಿ ಕಾರಿನ ಗಾಜು ಒಡೆದು ಹಣ ಕದ್ದ ಖದೀಮರು
ಕಾರಿನ ಗಾಜು ಒಡೆದು ಕಳ್ಳತನ
Follow us
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು

Updated on: Oct 17, 2023 | 11:50 AM

ಬೆಂಗಳೂರು, ಅ.17: ಬೆಂಗಳೂರು ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ (Theft). ಏರ್ಪೋರ್ಟ್ ರಸ್ತೆ, ಆನೇಕಲ್ ಭಾಗದಲ್ಲಿ ಕಳ್ಳತನಗಳು ನಡೆದಿವೆ. ಕೆಂಪೇಗೌಡ ಏರ್ಪೋರ್ಟ್ (Bengaluru Airport Road) ರಸ್ತೆಯಲ್ಲಿ ‌ಕಳ್ಳರ ಹಾವಳಿ ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಮೂರು‌ ಕಡೆ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ. ವಾರದ ಹಿಂದೆ ಚಿಕ್ಕಜಾಲ ಪೊಲೀಸ್ ಠಾಣೆಗೆ ಹೊಂದಿಕೊಂಡಿದ್ದ ಬೀದಿ ಬದಿ ಅಂಗಡಿಯಲ್ಲಿ ಕಳ್ಳತನ ನಡೆದಿತ್ತು. ಬಳಿಕ ಯಲಹಂಕ ‌ಪೊಲೀಸ್ ಠಾಣೆ ವ್ಯಾಪ್ತಿಯ ರೈತರ ಸಂತೆ ಜಂಕ್ಷನ್ ಬಳಿ ಕಳ್ಳತನ ನಡೆದಿದೆ. ಬ್ಯಾಕ್ ಟು ಬ್ಯಾಕ್ ಕೃತ್ಯ ಎಸಗುವ ಕದೀಮರ ಕರಾಮತ್ತು‌ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಖದೀಮರು ಮೊದಲೇ ಪ್ಲಾನ್ ಮಾಡಿ ಸ್ಕೆಚ್ ಹಾಕಿ ಕಳ್ಳತನ ‌ಮಾಡಿದ್ದಾರೆ. ಅಂಗಡಿಯಲ್ಲಿಟ್ಟಿದ್ದ 50 ಸಾವಿರ ನಗದು, ಎರಡು ಹುಂಡಿ ಹೊತ್ತೊಯ್ದದ್ದಾರೆ. ನಿರ್ಜನ ಪ್ರದೇಶಗಳ ಬದಲಿಗೆ ಕಳ್ಳರು ಹೆದ್ದಾರಿ ಪಕ್ಕದ ಅಂಗಡಿಗಳನ್ನು ಟಾರ್ಗೆಟ್ ಮಾಡ್ತಿದ್ದಾರೆ. ಘಟನೆ ಸಂಬಂಧ ಚಿಕ್ಕಜಾಲ ಮತ್ತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶಾನ್ಯ ವಿಭಾಗದ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಲೈಂಗಿಕ ಬಯಕೆ ಇಲ್ಲದೆ ನಾಡಿಮಿಡಿತವನ್ನು ಪರಿಶೀಲಿಸುವುದು ಅಪರಾಧವಲ್ಲ: ಬ್ರಿಜ್ ಭೂಷಣ್ ಪರ ವಕೀಲರ ವಾದ

ಕಾರಿನ ಗ್ಲಾಸ್ ಒಡೆದು ಹಣ ದೋಚಿದ ಖದೀಮರು

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಖತರ್ನಾಕ್ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಆನೇಕಲ್ ತಾಲೂಕಿನ ಬಿದರಗುಪ್ಪೆಯ ಅರೆನೂರು ಗ್ರಾಮದ ಸುಬ್ರಮಣಿ ಎಂಬುವವರು ಅತ್ತಿಬೆಲೆ ಯೂನಿಯನ್ ಬ್ಯಾಂಕಿನಿಂದ ಹಣ ಡ್ರಾ ಮಾಡಿ ತಂದು ಕಾರಿನಲ್ಲಿಟ್ಟಿದ್ದರು. ಕಾರನ್ನ ಅತ್ತಿಬೆಲೆಯ ವಿ.ಎಸ್.ಎಸ್.ಎನ್ ಬ್ಯಾಂಕ್ ಮುಂಭಾಗದಲ್ಲಿ ‌ನಿಲ್ಲಿಸಿ ಎದುರಿಗಿದ್ದ ರೇಷನ್ ಅಂಗಡಿಗೆ ದಿನಸಿ ಖರೀದಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಹೊಂಚು ಹಾಕಿ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಲಾಗಿದೆ.

ಕಾರಿನಲ್ಲಿದ್ದ ಒಂದು ಲಕ್ಷ ಹಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನೇಕಲ್ ಸುತ್ತಮುತ್ತ ದಿನನಿತ್ಯ ಕಳ್ಳತನ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳ್ಳರ ಹಾವಳಿಯಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ