AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರ: ಟೀ ಕುಡಿಯುವ ನೆಪದಲ್ಲಿ ಬಂದು ವೃದ್ದೆಯ ಮಾಂಗಲ್ಯ ಸರ ಎಗರಿಸಿದ ಖದೀಮರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆ.ಜಿ ಶ್ರೀನಿವಾಸಪುರ ಬಳಿ ಟೀ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ವೃದ್ಧೆಯ ಬಳಿ ಟೀ ಕುಡಿಯುವ ನೆಪದಲ್ಲಿ ಬಂದು ಅವರ ಬಳಿಯಿದ್ದ 35 ಗ್ರಾಂನ ಮಾಂಗಲ್ಯ ಸರವನ್ನು ಕಳ್ಳತನ ಮಾಡು ಎಸ್ಕೇಪ್​ ಆಗಿದ್ದಾರೆ.

ಬೆಂಗಳೂರು ಗ್ರಾಮಾಂತರ: ಟೀ ಕುಡಿಯುವ ನೆಪದಲ್ಲಿ ಬಂದು ವೃದ್ದೆಯ ಮಾಂಗಲ್ಯ ಸರ ಎಗರಿಸಿದ ಖದೀಮರು
ವೃದ್ಧೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Aug 23, 2023 | 7:36 PM

Share

ಬೆಂಗಳೂರು ಗ್ರಾಮಾಂತರ, ಆ.23: ಇತ್ತೀಚೆಗೆ ಕಳ್ಳತನ(Theft) ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು, ಖದೀಮರಿಗೆ ಬ್ರೇಕ್​ ಹಾಕಲಾಗುತ್ತಿಲ್ಲ. ಹೌದು, ಮಹಾನಗರದಲ್ಲಿ ದಿನವೂ ಒಂದಿಲ್ಲೊಂದು ಇಂತಹ ಘಟನೆಗಳು ಬೆಳಕಿಗೆ ಬರುತ್ತಿರುತ್ತದೆ. ಅದರಂತೆ ಇದೀಗ ಟೀ ಕುಡಿಯುವ ನೆಪದಲ್ಲಿ ಬಂದು ವೃದ್ದೆಯೊಬ್ಬರ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಎಗರಿಸಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ಕೆ.ಜಿ ಶ್ರೀನಿವಾಸಪುರ ಬಳಿ ನಡೆದಿದೆ.

ಟೀ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ವೃದ್ಧೆ

ಹೌದು, ವೃದ್ಧೆ ಜಯಮ್ಮ ಅವರು ಹೆದ್ದಾರಿ ಬಳಿ ಟೀ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಈ ಈ ವೇಳೆ ರೆಡ್ ಕಲರ್ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು. ಜಯಮ್ಮ ಅವರ 35ಗ್ರಾಂ ಮಾಂಗಲ್ಯ ಸರವನ್ನು ಕಣ್ಣುಮುಚ್ಚಿ ತೆಗೆಯುವಷ್ಟರಲ್ಲಿ ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ದಾಬಸ್ ಪೇಟೆ ಪೊಲೀಸರು ಆಗಮಿಸಿ, ಘಟನೆಯ ವಿವರವನ್ನು ಪಡೆದು, ತನಿಖಾ ಕಾರ್ಯ ಮುಂದುವರೆಸಿದ್ದಾರೆ. ಜೊತೆಗೆ ಸರಗಳ್ಳರ ಪತ್ತೆಗಾಗಿ ನಾಕಬಂದಿ ರಚಿಸಿ ತೀವ್ರ ಶೋಧ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಹಳೇ ದ್ವೇಷ, ಎರಡು ಗುಂಪುಗಳ ನಡುವೆ ಘರ್ಷಣೆ; ಓರ್ವನಿಗೆ ಗಂಭೀರ ಗಾಯ

ಕೋಲಾರ: ಜಿಲ್ಲೆಯ ಕೆಜಿಎಫ್ ನಗರದಲ್ಲಿ ಹಳೇ ದ್ವೇಷದ ಹಿನ್ನಲೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಆ ಪೈಕಿ ಓರ್ವ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು, ಲಾಂಗು ಹಾಗೂ ಮಚ್ಚುಗಳಿಂದ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಈ ವೇಳೆ ವಿಶಾಲ್ ಎಂಬಾತನಿಗೆ ಮಚ್ವಿನಿಂದ ಹಲ್ಲೆ ಮಾಡಲಾಗಿದ್ದು ಗಾಯಾಳು ವಿಶಾಲ್​ಗೆ ಕೈ ಬೆರಳುಗಳು ತುಂಡಾಗಿ ಹೋಗಿದೆ. ಕಾಲು, ಹೊಟ್ಟೆ ಬಾಗಕ್ಕೆ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆರೋಪಿಗಳ ಬಂಧನ

ಇನ್ನು ಘಟನೆ ಸಂಬಂಧ ಮಾರ್ಟಿನ್, ಸುಜಯ್, ಅರುಳ್, ದರ್ಶನ್ ಎಂಬುವರನ್ನು ಬಂಧಿಸಲಾಗಿದೆ. ವಿಶಾಲ್​ ಹಾಗೂ ಆತನ ಗ್ಯಾಂಗ್​ ಮತ್ತು ಮಾರ್ಟಿನ್​ ಗ್ಯಾಂಗ್ ನಡುವೆ ಹಲವು ದಿನಗಳ ಹಿಂದೆಯೂ ಗಲಾಟೆ ನಡೆದಿದ್ದು, ಅದರ ಮುಂದುವರೆದ ಭಾಗವಾಗಿ ನಿನ್ನೆ(ಆ.21) ತಡರಾತ್ರಿ ಹೊಡೆದಾಡಿಕೊಂಡಿದ್ದಾರೆ. ಈ ಸಂಬಂಧ ಕೆಜಿಎಫ್​ ನಗರದ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​