AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿ ಮನೆಯನ್ನೇ ಟಾರ್ಗೆಟ್​ ಮಾಡಿ ಲೂಟಿ ಮಾಡ್ತಿದ್ದವರ ಬಂಧನ; 50 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಒಬ್ಬಂಟಿಯಾಗಿ ಬರುತ್ತಿದ್ದ ಇವರು, ರಾತ್ರಿ ವೇಳೆ ಲೈಟ್ ಆಫ್​ ಆಗಿರುವ ಅಥವಾ ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಆರೋಪಿ ಸೈಯದ್ ಮೊದಲಿಗೆ ಮನೆಯ ಕಾಲಿಂಗ್ ಬೆಲ್ ಹೊಡೆದು ಪರಿಶೀಲನೆ ಮಾಡುತ್ತಿದ್ದನಂತೆ. ಈ ವೇಳೆ ಯಾರು ಇಲ್ಲದನ್ನು ಖಚಿತ ಪಡಿಸಿಕೊಂಡು ಬಳಿಕ ಕನ್ನ ಹಾಕುತ್ತಿದ್ದ.

ಒಂಟಿ ಮನೆಯನ್ನೇ ಟಾರ್ಗೆಟ್​ ಮಾಡಿ ಲೂಟಿ ಮಾಡ್ತಿದ್ದವರ ಬಂಧನ; 50 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
ಬಂಧಿತ ಆರೋಪಿ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 18, 2023 | 4:57 PM

Share

ಬೆಂಗಳೂರು ಗ್ರಾಮಾಂತರ, ಅ.18: ಮಾಹಾನಗರದಲ್ಲಿ ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಕಳ್ಳರ ಕಾಟಕ್ಕೆ ಮಾತ್ರ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಒಂಟಿ ಮನೆ ಹಾಗೂ ಒಂಟಿ ಮಹಿಳೆಯರನ್ನೇ ಲೂಟಿ ಮಾಡುತ್ತಿದ್ದ ಖದೀಮರನ್ನು (Thieves) ಇದೀಗ ಹೊಸಕೋಟೆ (Hosakote) ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ ಬರೊಬ್ಬರಿ 50 ಲಕ್ಷ ಮೌಲ್ಯದ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಸೈಯದ್ ಮತ್ತು ತಬಸುಮ್ ಬಂಧಿತ ಆರೋಪಿಗಳು.

ಇನ್ನು ಒಬ್ಬಂಟಿಯಾಗಿ ಬರುತ್ತಿದ್ದ ಇವರು, ರಾತ್ರಿ ವೇಳೆ ಲೈಟ್ ಆಫ್​ ಆಗಿರುವ ಅಥವಾ ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಆರೋಪಿ ಸೈಯದ್ ಮೊದಲಿಗೆ ಮನೆಯ ಕಾಲಿಂಗ್ ಬೆಲ್ ಹೊಡೆದು ಪರಿಶೀಲನೆ ಮಾಡುತ್ತಿದ್ದನಂತೆ. ಈ ವೇಳೆ ಯಾರು ಇಲ್ಲದನ್ನು ಖಚಿತ ಪಡಿಸಿಕೊಂಡು ಬಳಿಕ ಕನ್ನ ಹಾಕುತ್ತಿದ್ದ. ಅದೇ ರೀತಿ ಬಸ್ ನಿಲ್ದಾಣಗಳಲ್ಲಿ ಒಂಟಿಯಾಗಿ ಬಂದು ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡುತ್ತಿದ್ದ ಆರೋಪಿ ತಬಸುಮ್, ಮಹಿಳೆಯರನ್ನು ಯಾಮಾರಿಸಿ ಮೊಬೈಲ್ ಚಿನ್ನ ಹಾಗೂ ಹಣ ಖದ್ದು ಎಸ್ಕೇಪ್ ಆಗುತ್ತಿದ್ದ. ಇದೇ ರೀತಿ ಹೊಸಕೋಟೆ ಕೆಆರ್​ ಪುರ ಸೇರಿದಂತೆ ಹಲವೆಡೆ ಕೈಚಳಕ ತೋರಿಸಿದ ಇಬ್ಬರು, ಮೊಬೈಲ್ ಬಳಸಿದ್ರೆ, ಸಿಕ್ಕಾಕ್ಕೋಳ್ತಿವಿ ಎಂದು ಮೊಬೈಲ್ ಬಳಸದೆ ಕಳ್ಳತನಕ್ಕೆ ಬರುತ್ತಿದ್ದರು. ಇಂತಹ ಖತರ್ನಾಕ್​ ಆಸಾಮಿಗಳನ್ನ ಇದೀಗ ಬಂಧಿಸಿ 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಮೊಬೈಲ್ ಪೋನ್​ನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಚಿಕ್ಕಜಾಲ ಬಳಿಯ ಡೆಕಾಥ್ಲಾನ್ ಪಾರ್ಕಿಂಗ್​ ಲಾಟ್​ನಲ್ಲಿ ಕಳ್ಳತನ; ಕಾರಿನ‌ ಗ್ಲಾಸ್ ಒಡೆದು ಹಣ, ಬೆಲೆ ಬಾಳುವ ವಸ್ತು ಕದ್ದ ಖದೀಮರು

ಬ್ಯಾಂಕ್‌‌‌ ಕ್ಯಾಷ್ ಕೌಂಟರ್‌ಗೆ ನುಸುಳಿ ಹಣ ಎಗರಿಸಿಕೊಂಡು ಹೋದ ಖದೀಮ

ಚಾಮರಾಜನಗರ: ಹಾಡುಹಗಲೇ ಖದೀಮನೊಬ್ಬ ಕೆನರಾ ಬ್ಯಾಂಕ್‌‌‌ ಕ್ಯಾಷ್ ಕೌಂಟರ್‌ಗೆ ನುಸುಳಿ ಬರೊಬ್ಬರಿ 5 ಲಕ್ಷ ಹಣ ಎಗರಿಸಿಕೊಂಡು ಹೋದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ನಗರದ ಜೋಡಿ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಬ್ಯಾಂಕ್ ಕ್ಯಾಷ್ ಕೌಂಟರ್​ಗೆ ಸಿಬ್ಬಂದಿ ರೀತಿ ಪ್ರವೇಶ ಮಾಡಿದ್ದ ಆಸಾಮಿ, ಈ ವೇಳೆ  ಬ್ಯಾಂಕ್ ಒಳಗೆ ಹಾಗೂ ಹೊರಗೆ ನಿಂತು ಸನ್ನೆ ನೀಡುತ್ತಾ ಮೂವರು ಸಾತ್ ನೀಡಿದ್ದಾರೆ. ಇನ್ನು ಬ್ಯಾಂಕ್ ಸಿಬ್ಬಂದಿ ರೀತಿಯಲ್ಲೇ ಖದೀಮ ವರ್ತಿಸಿದ್ದರಿಂದ ಇತರರಿಗೆ ಅನುಮಾನ ಬಂದಿಲ್ಲ. ಸಂಶಯ ಬಂದು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಚಾಲಾಕಿ ಕಳ್ಳರ ಕರಾಮತ್ತು ಬಯಲಾಗಿದ್ದು, ಕಳ್ಳರ ಕರಾಮತ್ತು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿದ್ದು, ಚಾಮರಾಜನಗರದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ