AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಡೇ ಪಾರ್ಟಿಯಲ್ಲಿ ಯುವಕನಿಗೆ ಚಾಕು ಇರಿತ; ಆರೋಪಿಗಳು ಪರಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ಮುಂಜುನಾಥ್ ಎಂಬುವವನಿಗೆ ಮೂವರು ಸ್ನೇಹಿತರು ಚಾಕು ಇರಿದಿದ್ದಾರೆ.

ಬರ್ತಡೇ ಪಾರ್ಟಿಯಲ್ಲಿ ಯುವಕನಿಗೆ ಚಾಕು ಇರಿತ; ಆರೋಪಿಗಳು ಪರಾರಿ
ಹಲ್ಲೆಗೊಳಗಾದ ಯುವಕ ಮುಂಜುನಾಥ್
TV9 Web
| Updated By: sandhya thejappa|

Updated on: Sep 04, 2021 | 1:58 PM

Share

ನೆಲಮಂಗಲ: ಹುಟ್ಟು ಹಬ್ಬದ ಪಾರ್ಟಿಯಲ್ಲಿ ಯುವಕನಿಗೆ ಚಾಕು ಹಾಕಿರುವ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಚಾಕು ಹಾಕಿರುವ ಘಟನೆ ನೆಲಮಂಗಲದ ಜಕ್ಕಸಂದ್ರದಲ್ಲಿ ತಡರಾತ್ರಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ಮುಂಜುನಾಥ್ ಎಂಬುವವನಿಗೆ ಮೂವರು ಸ್ನೇಹಿತರು ಚಾಕು ಇರಿದಿದ್ದಾರೆ. ಗಂಭೀರ ಗಾಯಗೊಂಡ ಮಂಜುನಾಥ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ರಘು, ಶಂಕರ, ಗಿರೀಶ್ ಎಂಬ ಮೂವರು ಸೇರಿ ಚಾಕು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಅರೋಪಿಗಳು ತಲೆಮರೆಸಿಕೊಂಡಿದ್ದಾರೆ.

ತಂದೆಯನ್ನು ಥಳಿಸಿದ ಮಕ್ಕಳು ಹಾವೇರಿ: ಮದ್ಯ ಸೇವಿಸಿ ಕಳ್ಳತನ ಮಾಡುತ್ತಿದ್ದ ಹಿನ್ನೆಲೆ 70 ವರ್ಷದ ತಂದೆಯನ್ನು ಮಕ್ಕಳು ಥಳಿಸಿದ್ದಾರೆ. ತಂದೆ ಯಲ್ಲಪ್ಪನನ್ನು ಮಕ್ಕಳಾದ ಆನಂದ್ ಮತ್ತು ಜಗದೀಶ್ ಥಳಿಸಿದ್ದಾರೆ. ಈ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಜಿಲ್ಲೆ ಬ್ಯಾಡಗಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಗ್ರಾಮದಲ್ಲಿ ಸಣ್ಣಪುಟ್ಟ ಕಳ್ಳತನ ಮಾಡಿಕೊಂಡು ಕುಡಿದು ಅಡ್ಡಾಡುತ್ತಿದ್ದ. ಹೀಗಾಗಿ ತಂದೆ ಅನ್ನೋದನ್ನ ಮರೆತು ಇಬ್ಬರು ಮಕ್ಕಳು ಹಲ್ಲೆ ಮಾಡಿದ್ದಾರೆ. ಸದ್ಯ ಗಾಯಗೊಂಡಿರುವ ಯಲ್ಲಪ್ಪನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ಕು ತಿಂಗಳ ನಂತರ ಆರೋಪಿ ಬಂಧನ ಕೋಲಾರ: ಮಹಿಳೆಯ ರುಂಡವಿಲ್ಲದ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ 4 ತಿಂಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಪ್ಪ ಬಂಧಿತ ಆರೋಪಿ. ಮೇ 2ರಂದು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಪಾಪೇನಹಳ್ಳಿಯ ಮಹಿಳೆಯ ಕೊಲೆ ನಡೆದಿತ್ತು. ವೈಯಕ್ತಿಕ ದ್ವೇಷಕ್ಕೆ ರತ್ನಪ್ಪ ಮಹಿಳೆಯನ್ನು ಹತ್ಯೆಗೈದಿದ್ದು, ಬೇತಮಂಗಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ಬೆಳಗಾವಿಯಲ್ಲಿ ಬಿಜೆಪಿ ಶಾಸಕನ ಹುಟ್ಟು ಹಬ್ಬದ ವಿಡಿಯೋ ವೈರಲ್; ಹೂವಿನ ಮಳೆ ಸುರಿಸಿದ ಪೊಲೀಸರು

ಕುಡಿದ ಮತ್ತಿನಲ್ಲಿ ರೈಲಿನಲ್ಲಿ ಅರೆ ನಗ್ನವಾಗಿ ಓಡಾಡಿದ ಜೆಡಿಯು ಶಾಸಕ ನನ್ನ ಚಿನ್ನದ ಉಂಗುರ ಕಿತ್ತುಕೊಂಡರು; ಸಹ ಪ್ರಯಾಣಿಕ ದೂರು

(Three friends Knife attack on young man in birthday party at nelamangala)

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?