AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karaga: ಕರಗ ಹೊರಲು ಮೂರು ಗುಂಪುಗಳ ಕಿತ್ತಾಟ, ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ ರದ್ದು

ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ಪ್ರತಿ ವರ್ಷ ಕಾಮನ ಹುಣ್ಣಿಮೆಯಂದು ದ್ರೌಪದಿ ದೇವಿ ಕರಗ ಮಹೋತ್ಸವ ನಡೆಯುತ್ತಿತ್ತು. ಆದರೆ, ಈ ಬಾರಿ ಕರಗ ಹೊರುವ ವಿಚಾರವಾಗಿ ತಿಗಳ ಜನಾಂಗದ ಮೂರು ಗುಂಪುಗಳ ನಡುವೆ ಕಿತ್ತಾಟ ಹಿನ್ನೆಲೆ ಕರಗ ಮಹೋತ್ಸವ ರದ್ದಾಗಿದೆ.

Karaga: ಕರಗ ಹೊರಲು ಮೂರು ಗುಂಪುಗಳ ಕಿತ್ತಾಟ, ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ ರದ್ದು
ಶ್ರೀ ಧರ್ಮರಾಯ ಸ್ವಾಮಿ ದೇವಾಲಯ
ನವೀನ್ ಕುಮಾರ್ ಟಿ
| Edited By: |

Updated on: Mar 24, 2024 | 11:29 AM

Share

ದೇವನಹಳ್ಳಿ, ಮಾರ್ಚ್​.24: ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ (Droupadamma Karaga) ಕ್ಯಾನ್ಸಲ್ ಆಗಿದೆ. ಕರಗ ಹೊರುವ ವಿಚಾರವಾಗಿ ಮೂರು ಗುಂಪುಗಳ ನಡುವೆ ವಾದ-ವಿವಾದ ಉಂಟಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೂದಿಗೆರೆಯಲ್ಲಿ (Budigere) ನಾಳೆ (ಮಾ.25) ನಡೆಯಬೇಕಿದ್ದ ಇತಿಹಾಸ ಪ್ರಸಿದ್ಧ ಬೂದಿಗೆರೆ ಶ್ರೀ ದ್ರೌಪದಮ್ಮ ದೇವಿ ಕರಗ ಮಹೋತ್ಸವ ರದ್ದಾಗಿದೆ. ಇದೀಗ ದ್ರೌಪಮ್ಮ ದೇಗುಲದ ಮುಂದೆ ಪೊಲೀಸರ ವ್ಯಾನ್​ಗಳು ನಿಂತಿದ್ದು ಭಾರೀ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ಪ್ರತಿ ವರ್ಷ ಕಾಮನ ಹುಣ್ಣಿಮೆಯಂದು ದ್ರೌಪದಿ ದೇವಿ ಕರಗ ಮಹೋತ್ಸವ ನಡೆಯುತ್ತಿತ್ತು. ಆದರೆ, ಈ ಬಾರಿ ಕರಗ ಹೊರುವ ವಿಚಾರವಾಗಿ ತಿಗಳ ಜನಾಂಗದ ಮೂರು ಗುಂಪುಗಳ ನಡುವೆ ಕಿತ್ತಾಟ ಹಿನ್ನೆಲೆ ಕರಗ ಮಹೋತ್ಸವ ರದ್ದಾಗಿದೆ. ಕರಗ ಹೊರಲು ಜಿದ್ದಾಜಿದ್ದಿಗೆ ಬಿದ್ದ ಮೂರು ಗುಂಪುಗಳ ನಡುವೆ ಕಿತ್ತಾಟವಾದ ಹಿನ್ನೆಲೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಕರಗ ರದ್ದು ಮಾಡಲಾಗಿದೆ.

ಇನ್ನು ಮತ್ತೊಂದೆಡೆ ಕರಗ ವಿಚಾರ ಕೋರ್ಟ್​ ಮೆಟ್ಟಿಲೇರಿದ್ದು, ಹೈಕೋರ್ಟ್​ನಲ್ಲಿ ಕರಗ ಕಿತ್ತಾಟ ಪ್ರಕರಣ ಇತ್ಯಾರ್ಥವಾಗಿಲ್ಲ. ಮೇ 27ಕ್ಕೆ ವಿಚಾರಣೆಯನ್ನು ಹೈ ಕೋರ್ಟ್ ಮುಂದೂಡಿದೆ. ಆದರೆ ಕರಗ ಮಾರ್ಚ್ 25ರಂದು ನಡೆಯಬೇಕಿತ್ತು. ಪ್ರಕರಣ ಇತ್ಯರ್ಥಗೊಳ್ಳದ ಕಾರಣ ಕರಗ ಆಚರಣೆಯೇ ರದ್ದಾಗಿದೆ. ಶ್ರೀ ಧರ್ಮರಾಯ ಸ್ವಾಮಿ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Bengaluru Karaga 2024: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್

ಏಪ್ರಿಲ್​ನಲ್ಲಿ ಬೆಂಗಳೂರು ಕರಗ ಆರಂಭ

ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದೆ. ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್