AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ತಡರಾತ್ರಿ ಲಾಂಗ್​ ಡ್ರೈವ್​ ಹೋಗಿದ್ದ ಮೂವರು ವಿದ್ಯಾರ್ಥಿಗಳು ಹಿಟ್​ ಆ್ಯಂಡ್ ರನ್​ಗೆ ಬಲಿ

ಬೆಂಗಳೂರು ಏರ್ಪೋಟ್ ರಸ್ತೆಯಲ್ಲಿ ತಡರಾತ್ರಿ ಹಿಟ್ ಆ್ಯಂಡ್ ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ತಡರಾತ್ರಿ ಮೂವರು ವಿದ್ಯಾರ್ಥಿಗಳು ಬೈಕ್​ನಲ್ಲಿ ಲಾಂಗ್ ಡ್ರೈವ್ ಹೊರಟಿದ್ದರು. ಈ ವೇಳೆ ಅಪರಿಚಿತ ವಾಹನ ಗುದ್ದಿದ್ದು ಸ್ಥಳದಲ್ಲೇ ಮೂವರು ಪ್ರಾಣಬಿಟ್ಟಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ನಜ್ಜುಗುಜ್ಜಾಗಿವೆ.

ಬೆಂಗಳೂರು; ತಡರಾತ್ರಿ ಲಾಂಗ್​ ಡ್ರೈವ್​ ಹೋಗಿದ್ದ ಮೂವರು ವಿದ್ಯಾರ್ಥಿಗಳು ಹಿಟ್​ ಆ್ಯಂಡ್ ರನ್​ಗೆ ಬಲಿ
ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
ನವೀನ್ ಕುಮಾರ್ ಟಿ
| Edited By: ಆಯೇಷಾ ಬಾನು|

Updated on:Sep 12, 2024 | 9:09 AM

Share

ಬೆಂಗಳೂರು, ಸೆ.12: ಬೆಂಗಳೂರಲ್ಲಿ ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು (Students) ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ (Death). ರೋಹಿತ್​​(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು.

ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್​​​ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಟಾಕಿ ಹಚ್ಚಿದ್ದಕ್ಕೆ ಚಾಕು ಇರಿತ

ಗಣೇಶ ವಿಸರ್ಜನೆ ಬಳಿಕ ಪಟಾಕಿ ಹಚ್ಚಿದ ವಿಚಾರಕ್ಕೆ ಗಲಾಟೆ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ಮೇಕೆಬಂಡೆ ಬಳಿ ಮಧು ಎಂಬುವನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಗಲಾಟೆ ತೆಗೆದು ಚಾಕು ಇರಿಯಲಾಗಿದೆ ಎನ್ನಲಾಗಿದೆ. ಮಧು ಹೊಟ್ಟೆ ಭಾಗಕ್ಕೆ ಇರಿತವಾಗಿದ್ದು, ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಇದನ್ನೂ ಓದಿ: ಅತ್ತೆ-ಮಾವ ಇರಬಾರ್ದು, ವರ್ಷಕ್ಕೆ 30 ಲಕ್ಷ ರೂ. ಸಂಬಳವಿರಬೇಕು ಇಂಥಾ ಪತಿಯೇ ಬೇಕು, ಚರ್ಚೆ ಹುಟ್ಟುಹಾಕಿದ ಪೋಸ್ಟ್​

BMTC ಬಸ್ ಬ್ರೇಕ್ ಫೇಲ್.. ಮರಕ್ಕೆ ಡಿಕ್ಕಿ

ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ನಂದಿನ ಲೇಔಟ್​ನ APMC ಕ್ವಾರ್ಟರ್ಸ್ ಬಳಿ ಘಟನೆ ನಡೆದಿದ್ದು, ಜೈಮಾರುತಿ ನಗರದಿಂದ ಮೆಜೆಸ್ಟಿಕ್​ ಕಡೆ ತೆರಳುತ್ತಿದ್ದ BMTC ಬಸ್, ಬ್ರೇಕ್ ಫೇಲಾಗಿದ್ದರಿಂದ ಮರಕ್ಕೆ ಗುದ್ದಿಸಿ ಚಾಲಕ ಗಂಗಾಧರ ಅನಾಹುತ ತಪ್ಪಿಸಿದ್ದಾರೆ. ಪದೇ ಪದೇ ಅನಾಹುತಗಳು ಸಂಭವಿಸ್ತಿದ್ರು ಬಿಎಂಟಿಸಿ ಮಾತ್ರ ಎಚ್ಚೆತ್ತುಕೊಳ್ತಿಲ್ಲ ಅಂತಾ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:08 am, Thu, 12 September 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More