AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟ ಆಡ್ತಾ ಆಡ್ತಾ ವಿಷ ಸೇವನೆ ಮಾಡಿಬಿಟ್ಟ ಪುಟ್ಟ ಕಂದಮ್ಮಗಳು, ತೀವ್ರ ಅಸ್ವಸ್ಥ

ರಸ್ತೆ ಬದಿಯಲ್ಲಿ ಪ್ಯಾಕೆಟ್ ನಲ್ಲಿ ತುಂಬಿದ್ದ ಡ್ರೈನೇಜ್ ಕ್ಲೀನರ್ (D-Klog) ಪಾಯಿಸನ್ ಅನ್ನು ಸಕ್ಕರೆಯೆಂದು ಭಾವಿಸಿ, ಮೂವರೂ ಮಕ್ಕಳು ತಿಂದುಬಿಟ್ಟಿವೆ. ಅದೃಷ್ಟವಶಾತ್ ಮೂರೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ದೇವನಹಳ್ಳಿಯ ಆಕಾಶ್ ಆಸ್ವತ್ರೆ ಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆಟ ಆಡ್ತಾ ಆಡ್ತಾ ವಿಷ ಸೇವನೆ ಮಾಡಿಬಿಟ್ಟ ಪುಟ್ಟ ಕಂದಮ್ಮಗಳು, ತೀವ್ರ ಅಸ್ವಸ್ಥ
ಆಟ ಆಡ್ತಾ ವಿಷ ಸೇವಿಸಿದ ಪುಟ್ಟ ಕಂದಮ್ಮಗಳು, ಅಸ್ವಸ್ಥ
Follow us
ನವೀನ್ ಕುಮಾರ್ ಟಿ
| Updated By: ಸಾಧು ಶ್ರೀನಾಥ್​

Updated on:Sep 02, 2023 | 1:06 PM

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) ಸೆಪ್ಟೆಂಬರ್​ 2: ಮನೆ ಮುಂದೆ ರಸ್ತೆಯಲ್ಲಿ ಆಟವಾಡುವ ವೇಳೆ ಮೂರು ಪುಟ್ಟ ಕಂದಮ್ಮಗಳು ವಿಷ (poison) ಸೇವಿಸಿದ್ದು, ತೀವ್ರ ಅಸ್ವಸ್ಥಗೊಂಡಿವೆ. ದೇವನಹಳ್ಳಿ (devanahalli) ಪಟ್ಟಣದ ವಿನಾಯಕ ನಗರದಲ್ಲಿ ಈ ಅಚಾತುರ್ಯ ಘಟನೆ ನಡೆದಿದೆ. ಸುಚಿತ್ರಾ ( 3 ) ಲೋಹಿತ್ಯಾ ( 4 ) ವೇದಾಂತ ( 3 ) ವಿಷ ಸೇವನೆಯಿಂದ ಅಸ್ವಸ್ಥರಾದ ಮಕ್ಕಳು (toddlers).

ರಸ್ತೆ ಬದಿಯಲ್ಲಿ ಪ್ಯಾಕೆಟ್ ನಲ್ಲಿ ತುಂಬಿದ್ದ ಡ್ರೈನೇಜ್ ಕ್ಲೀನರ್ (D-Klog) ಪಾಯಿಸನ್ ಅನ್ನು ಸಕ್ಕರೆಯೆಂದು ಭಾವಿಸಿ, ಮೂವರೂ ಮಕ್ಕಳು ತಿಂದುಬಿಟ್ಟಿವೆ. ಅದೃಷ್ಟವಶಾತ್ ಮೂರೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ ಹಸುಗೂಸನ್ನೇ ಕೊಂದ ಮಲತಾಯಿ!

ಪೋಷಕರು ತಮ್ಮ ಮಕ್ಕಳನ್ನು ಮನೆಯ ಬಳಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ದೇವನಹಳ್ಳಿಯ ಆಕಾಶ್ ಆಸ್ವತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಲಾರಿಗೆ ಕಾರು ಡಿಕ್ಕಿ, DySP ತಂದೆ ಸಾವು

ಕೋಲಾರ, ಸೆಪ್ಟೆಂಬರ್​ 2: ಆಂಧ್ರದ ಪಲಮನೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Palamaner on National Highway) ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಅಪಘಾತ (accident) ಸಂಭವಿಸಿದ್ದು, ಹುಣಸೂರು ಅಬಕಾರಿ DySP ತಂದೆ (Hunsur Excise DySp) ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗಿರಿಗೌಡ (80) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮೂವರಿಗೆ ಗಾಯಗಳಾಗಿವೆ. ಮೃತ ಗಿರಿಗೌಡ ಅವರು ಹುಣಸೂರು ಅಬಕಾರಿ DySP ವಿಜಯ್​ ಕುಮಾರ್ ಅವರ ತಂದೆ.

ಘಟನೆಯಲ್ಲಿ ಹುಣಸೂರು ಅಬಕಾರಿ DySP ವಿಜಯ್ ​ಕುಮಾರ್​​, ಅವರ ತಾಯಿ ಮತ್ತು ಅಬಕಾರಿ ಇನ್ಸ್​ಪೆಕ್ಟರ್​​ ಲೋಕೇಶ್​ ಅವರುಗಳು ಗಾಯಗೊಂಡಿದ್ದಾರೆ. ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯ್ ​ಕುಮಾರ್ ಅವರ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಶ್ರಾವಣ ಶನಿವಾರವಾದ ಇಂದು ಆಂಧ್ರದ ಪಲಮನೇರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Sat, 2 September 23

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ