AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿದೆದ್ದ ತಿಗಳ ಸಮುದಾಯದ ನಾಯಕರು: ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡದಿದ್ದರೆ ಬಿಜೆಪಿಗೆ ಮತ ಹಾಕಲ್ಲ ಎಂದು ಎಚ್ಚರಿಕೆ

ಈ ಬಾರಿಯ ಮಾಲೂರು ಬಿಜೆಪಿ ಟಿಕೆಟನ್ನು ಹೂಡಿ ವಿಜಯ್ ಕುಮಾರ್ ಗೆ ನೀಡುವಂತೆ ದ್ರೌಪದಮ್ಮ ದೇವಾಲಯದಲ್ಲಿ ಕರ್ಪೂರ ಹಚ್ಚಿ ಘೋಷಣೆ ಕೂಗಿ ಒತ್ತಾಯಿಸಿದ್ದಾರೆ.

ಸಿಡಿದೆದ್ದ ತಿಗಳ ಸಮುದಾಯದ ನಾಯಕರು: ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡದಿದ್ದರೆ ಬಿಜೆಪಿಗೆ ಮತ ಹಾಕಲ್ಲ ಎಂದು ಎಚ್ಚರಿಕೆ
ಹೂಡಿ ವಿಜಯ್ ಕುಮಾರ್, ಬಿಜೆಪಿ ವಿರುದ್ಧ ತಿರುಗಿಬಿದ್ದ ನಾಯಕರು
ಆಯೇಷಾ ಬಾನು
|

Updated on: Apr 02, 2023 | 1:43 PM

Share

ದೇವನಹಳ್ಳಿ: ಬಿಜೆಪಿ ವಿರುದ್ಧ ವಹ್ನಿಕುಲ ತಿಗಳ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಈ ಬಾರಿಯ ಮಾಲೂರು ಟಿಕೆಟನ್ನು ಹೂಡಿ ವಿಜಯ್ ಕುಮಾರ್ ಗೆ ನೀಡುವಂತೆ ದ್ರೌಪದಮ್ಮ ದೇವಾಲಯದಲ್ಲಿ ಕರ್ಪೂರ ಹಚ್ಚಿ ಘೋಷಣೆ ಕೂಗಿ ಒತ್ತಾಯಿಸಿದ್ದಾರೆ. ಟಿಕೆಟ್ ನೀಡದಿದ್ದರೆ ತಿಗಳ ಸಮುದಾಯ ಬಿಜೆಪಿ ವಿರುದ್ಧ ನಿಲ್ಲುವುದಾಗಿ ಹೊಸಕೋಟೆಯಲ್ಲಿ ವಹ್ನಿಕುಲ ತಿಗಳ ಸಮುದಾಯದ ರಾಜ್ಯಾಧ್ಯಕ್ಷ ಜಯರಾಜ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಿದ ತಿಗಳ ಸಮುದಾಯದ ಮುಖಂಡ ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ದ್ರೌಪದಮ್ಮ ದೇವಾಲದಯಲ್ಲಿ ಸಭೆ ಸೇರಿದ ತಿಗಳ ಸಮುದಾಯದ ಮುಖಂಡರು ನಮ್ಮ ಸಮುದಾಯದಲ್ಲಿ ಪ್ರಬಲ ರಾಜಕೀಯ ನಾಯಕರಿಲ್ಲ. ಆದ್ರೆ ಈ ಬಾರಿ ಪ್ರಬಲ ನಾಯಕರಾಗಿ ಹೂಡಿ ವಿಜಯ್ ಕುಮಾರ್ ಬಂದಿದ್ದು ಮಾಲೂರಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಹೀಗಾಗಿ ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡಿ ಆ ಮೂಲಕ ಸಮುದಾಯಕ್ಕೆ ಓರ್ವ ನಾಯಕನನ್ನ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ತೆಲೆ ಚೆಚ್ಚಿಕೊಂಡ ಸಂಡೂರು ಶಾಸಕ

ಜೊತೆಗೆ ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ರು ಹೊಸಕೋಟೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುವ ಮಾಜಿ ಶಾಸಕ ಮಂಜುನಾಥಗೌಡಗೆ ಯಾವುದೇ ಕಾರಣಕ್ಕೂ ಈ ಬಾರಿ ಟಿಕೆಟ್ ನೀಡಬಾರದು ಅಂತ ಒತ್ತಾಯಿಸಿದ್ದಾರೆ. ಇನ್ನೂ ಒಂದು ವೇಳೆ ಹೂಡಿ ವಿಜಯಕುಮಾರ್ ಗೆ ಹೊರತು ಪಡಿಸಿ ಬೇರೆಯವರಿಗೆ ಮಾಲೂರಿನ ಬಿಜೆಪಿ ಟಿಕೆಟ್ ನೀಡಿದಲ್ಲಿ ಅವರ ವಿರುದ್ಧ ರಾಜ್ಯಾದ್ಯಂತ ತಿಗಳ ಸಮುದಾಯ ತಿರುಗಿಬೀಳಲಿದ್ದು ಬಿಜೆಪಿ ವಿರುದ್ದವಾಗಿ ಮತ ಚಲಾಯಿಸುವುದಾಗಿ ತಿಗಳ ಸಮುದಾಯದ ರಾಜ್ಯಾಧ್ಯಕ್ಷ ಜಯರಾಜ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ