Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿದೆದ್ದ ತಿಗಳ ಸಮುದಾಯದ ನಾಯಕರು: ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡದಿದ್ದರೆ ಬಿಜೆಪಿಗೆ ಮತ ಹಾಕಲ್ಲ ಎಂದು ಎಚ್ಚರಿಕೆ

ಈ ಬಾರಿಯ ಮಾಲೂರು ಬಿಜೆಪಿ ಟಿಕೆಟನ್ನು ಹೂಡಿ ವಿಜಯ್ ಕುಮಾರ್ ಗೆ ನೀಡುವಂತೆ ದ್ರೌಪದಮ್ಮ ದೇವಾಲಯದಲ್ಲಿ ಕರ್ಪೂರ ಹಚ್ಚಿ ಘೋಷಣೆ ಕೂಗಿ ಒತ್ತಾಯಿಸಿದ್ದಾರೆ.

ಸಿಡಿದೆದ್ದ ತಿಗಳ ಸಮುದಾಯದ ನಾಯಕರು: ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡದಿದ್ದರೆ ಬಿಜೆಪಿಗೆ ಮತ ಹಾಕಲ್ಲ ಎಂದು ಎಚ್ಚರಿಕೆ
ಹೂಡಿ ವಿಜಯ್ ಕುಮಾರ್, ಬಿಜೆಪಿ ವಿರುದ್ಧ ತಿರುಗಿಬಿದ್ದ ನಾಯಕರು
Follow us
ಆಯೇಷಾ ಬಾನು
|

Updated on: Apr 02, 2023 | 1:43 PM

ದೇವನಹಳ್ಳಿ: ಬಿಜೆಪಿ ವಿರುದ್ಧ ವಹ್ನಿಕುಲ ತಿಗಳ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಈ ಬಾರಿಯ ಮಾಲೂರು ಟಿಕೆಟನ್ನು ಹೂಡಿ ವಿಜಯ್ ಕುಮಾರ್ ಗೆ ನೀಡುವಂತೆ ದ್ರೌಪದಮ್ಮ ದೇವಾಲಯದಲ್ಲಿ ಕರ್ಪೂರ ಹಚ್ಚಿ ಘೋಷಣೆ ಕೂಗಿ ಒತ್ತಾಯಿಸಿದ್ದಾರೆ. ಟಿಕೆಟ್ ನೀಡದಿದ್ದರೆ ತಿಗಳ ಸಮುದಾಯ ಬಿಜೆಪಿ ವಿರುದ್ಧ ನಿಲ್ಲುವುದಾಗಿ ಹೊಸಕೋಟೆಯಲ್ಲಿ ವಹ್ನಿಕುಲ ತಿಗಳ ಸಮುದಾಯದ ರಾಜ್ಯಾಧ್ಯಕ್ಷ ಜಯರಾಜ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಿದ ತಿಗಳ ಸಮುದಾಯದ ಮುಖಂಡ ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ದ್ರೌಪದಮ್ಮ ದೇವಾಲದಯಲ್ಲಿ ಸಭೆ ಸೇರಿದ ತಿಗಳ ಸಮುದಾಯದ ಮುಖಂಡರು ನಮ್ಮ ಸಮುದಾಯದಲ್ಲಿ ಪ್ರಬಲ ರಾಜಕೀಯ ನಾಯಕರಿಲ್ಲ. ಆದ್ರೆ ಈ ಬಾರಿ ಪ್ರಬಲ ನಾಯಕರಾಗಿ ಹೂಡಿ ವಿಜಯ್ ಕುಮಾರ್ ಬಂದಿದ್ದು ಮಾಲೂರಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಹೀಗಾಗಿ ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡಿ ಆ ಮೂಲಕ ಸಮುದಾಯಕ್ಕೆ ಓರ್ವ ನಾಯಕನನ್ನ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ತೆಲೆ ಚೆಚ್ಚಿಕೊಂಡ ಸಂಡೂರು ಶಾಸಕ

ಜೊತೆಗೆ ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ರು ಹೊಸಕೋಟೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುವ ಮಾಜಿ ಶಾಸಕ ಮಂಜುನಾಥಗೌಡಗೆ ಯಾವುದೇ ಕಾರಣಕ್ಕೂ ಈ ಬಾರಿ ಟಿಕೆಟ್ ನೀಡಬಾರದು ಅಂತ ಒತ್ತಾಯಿಸಿದ್ದಾರೆ. ಇನ್ನೂ ಒಂದು ವೇಳೆ ಹೂಡಿ ವಿಜಯಕುಮಾರ್ ಗೆ ಹೊರತು ಪಡಿಸಿ ಬೇರೆಯವರಿಗೆ ಮಾಲೂರಿನ ಬಿಜೆಪಿ ಟಿಕೆಟ್ ನೀಡಿದಲ್ಲಿ ಅವರ ವಿರುದ್ಧ ರಾಜ್ಯಾದ್ಯಂತ ತಿಗಳ ಸಮುದಾಯ ತಿರುಗಿಬೀಳಲಿದ್ದು ಬಿಜೆಪಿ ವಿರುದ್ದವಾಗಿ ಮತ ಚಲಾಯಿಸುವುದಾಗಿ ತಿಗಳ ಸಮುದಾಯದ ರಾಜ್ಯಾಧ್ಯಕ್ಷ ಜಯರಾಜ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್