AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿದೆದ್ದ ತಿಗಳ ಸಮುದಾಯದ ನಾಯಕರು: ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡದಿದ್ದರೆ ಬಿಜೆಪಿಗೆ ಮತ ಹಾಕಲ್ಲ ಎಂದು ಎಚ್ಚರಿಕೆ

ಈ ಬಾರಿಯ ಮಾಲೂರು ಬಿಜೆಪಿ ಟಿಕೆಟನ್ನು ಹೂಡಿ ವಿಜಯ್ ಕುಮಾರ್ ಗೆ ನೀಡುವಂತೆ ದ್ರೌಪದಮ್ಮ ದೇವಾಲಯದಲ್ಲಿ ಕರ್ಪೂರ ಹಚ್ಚಿ ಘೋಷಣೆ ಕೂಗಿ ಒತ್ತಾಯಿಸಿದ್ದಾರೆ.

ಸಿಡಿದೆದ್ದ ತಿಗಳ ಸಮುದಾಯದ ನಾಯಕರು: ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡದಿದ್ದರೆ ಬಿಜೆಪಿಗೆ ಮತ ಹಾಕಲ್ಲ ಎಂದು ಎಚ್ಚರಿಕೆ
ಹೂಡಿ ವಿಜಯ್ ಕುಮಾರ್, ಬಿಜೆಪಿ ವಿರುದ್ಧ ತಿರುಗಿಬಿದ್ದ ನಾಯಕರು
ಆಯೇಷಾ ಬಾನು
|

Updated on: Apr 02, 2023 | 1:43 PM

Share

ದೇವನಹಳ್ಳಿ: ಬಿಜೆಪಿ ವಿರುದ್ಧ ವಹ್ನಿಕುಲ ತಿಗಳ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಈ ಬಾರಿಯ ಮಾಲೂರು ಟಿಕೆಟನ್ನು ಹೂಡಿ ವಿಜಯ್ ಕುಮಾರ್ ಗೆ ನೀಡುವಂತೆ ದ್ರೌಪದಮ್ಮ ದೇವಾಲಯದಲ್ಲಿ ಕರ್ಪೂರ ಹಚ್ಚಿ ಘೋಷಣೆ ಕೂಗಿ ಒತ್ತಾಯಿಸಿದ್ದಾರೆ. ಟಿಕೆಟ್ ನೀಡದಿದ್ದರೆ ತಿಗಳ ಸಮುದಾಯ ಬಿಜೆಪಿ ವಿರುದ್ಧ ನಿಲ್ಲುವುದಾಗಿ ಹೊಸಕೋಟೆಯಲ್ಲಿ ವಹ್ನಿಕುಲ ತಿಗಳ ಸಮುದಾಯದ ರಾಜ್ಯಾಧ್ಯಕ್ಷ ಜಯರಾಜ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಿದ ತಿಗಳ ಸಮುದಾಯದ ಮುಖಂಡ ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ದ್ರೌಪದಮ್ಮ ದೇವಾಲದಯಲ್ಲಿ ಸಭೆ ಸೇರಿದ ತಿಗಳ ಸಮುದಾಯದ ಮುಖಂಡರು ನಮ್ಮ ಸಮುದಾಯದಲ್ಲಿ ಪ್ರಬಲ ರಾಜಕೀಯ ನಾಯಕರಿಲ್ಲ. ಆದ್ರೆ ಈ ಬಾರಿ ಪ್ರಬಲ ನಾಯಕರಾಗಿ ಹೂಡಿ ವಿಜಯ್ ಕುಮಾರ್ ಬಂದಿದ್ದು ಮಾಲೂರಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಹೀಗಾಗಿ ಹೂಡಿ ವಿಜಯ್ ಕುಮಾರ್ ಗೆ ಮಾಲೂರು ಟಿಕೆಟ್ ನೀಡಿ ಆ ಮೂಲಕ ಸಮುದಾಯಕ್ಕೆ ಓರ್ವ ನಾಯಕನನ್ನ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ತೆಲೆ ಚೆಚ್ಚಿಕೊಂಡ ಸಂಡೂರು ಶಾಸಕ

ಜೊತೆಗೆ ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ರು ಹೊಸಕೋಟೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುವ ಮಾಜಿ ಶಾಸಕ ಮಂಜುನಾಥಗೌಡಗೆ ಯಾವುದೇ ಕಾರಣಕ್ಕೂ ಈ ಬಾರಿ ಟಿಕೆಟ್ ನೀಡಬಾರದು ಅಂತ ಒತ್ತಾಯಿಸಿದ್ದಾರೆ. ಇನ್ನೂ ಒಂದು ವೇಳೆ ಹೂಡಿ ವಿಜಯಕುಮಾರ್ ಗೆ ಹೊರತು ಪಡಿಸಿ ಬೇರೆಯವರಿಗೆ ಮಾಲೂರಿನ ಬಿಜೆಪಿ ಟಿಕೆಟ್ ನೀಡಿದಲ್ಲಿ ಅವರ ವಿರುದ್ಧ ರಾಜ್ಯಾದ್ಯಂತ ತಿಗಳ ಸಮುದಾಯ ತಿರುಗಿಬೀಳಲಿದ್ದು ಬಿಜೆಪಿ ವಿರುದ್ದವಾಗಿ ಮತ ಚಲಾಯಿಸುವುದಾಗಿ ತಿಗಳ ಸಮುದಾಯದ ರಾಜ್ಯಾಧ್ಯಕ್ಷ ಜಯರಾಜ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ