AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಟ್ರಿಪ್​ಗೆ ಹೋದ ಪತ್ನಿ ಇನ್ನೂ ಬಂದಿಲ್ಲ, ಬಸ್​​ ಟೈರ್​​ ಕೆಳಗೆ ತಲೆಕೊಟ್ಟು ಕುಡುಕ ಪತಿ ಆಕ್ರಂದನ

ಪ್ರವಾಸಕ್ಕೆ ಹೋದ ಪತ್ನಿ ಮನೆಗೆ ಬಂದಿಲ್ಲ ಎಂದು ಮಧ್ಯಪ್ರಿಯ ಪತಿರಾಯ ಅವಾಂತರ ಸೃಷ್ಠಿಸಿದ್ದಾನೆ. ನನ್ನ ಹೆಂಡತಿ ಪ್ರವಾಸಕ್ಕೆ ಹೋದವಳು ಇನ್ನು ವಾಪಸ್ ಬಂದಿಲ್ಲವೆಂದು ಸರ್ಕಾರಿ ಬಸ್​ ಕೆಳಗೆ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

Bengaluru: ಟ್ರಿಪ್​ಗೆ ಹೋದ ಪತ್ನಿ ಇನ್ನೂ ಬಂದಿಲ್ಲ, ಬಸ್​​ ಟೈರ್​​ ಕೆಳಗೆ ತಲೆಕೊಟ್ಟು ಕುಡುಕ ಪತಿ ಆಕ್ರಂದನ
ಕುಡುಕ ಪತಿಯ ಅವಾಂತರ
TV9 Web
| Updated By: ವಿವೇಕ ಬಿರಾದಾರ|

Updated on:Jun 29, 2023 | 5:12 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ, (Congress Government) ಸರ್ಕಾರಿ ಬಸ್​​​​ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ (Free Bus Travel for Women) ಅವಕಾಶ ನೀಡಿದೆ. ಈ ಹಿನ್ನೆಲೆ ಮಹಿಳೆಯರು ಪುಣ್ಯಕ್ಷೇತ್ರ ಹಾಗೂ ಸಮಾರಂಭಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಹೀಗೆ ಪ್ರವಾಸಕ್ಕೆ ಹೋದ ಪತ್ನಿ ಮನೆಗೆ ಬಂದಿಲ್ಲ ಎಂದು ಮಧ್ಯಪ್ರಿಯ ಪತಿರಾಯ ಅವಾಂತರ ಸೃಷ್ಠಿಸಿದ್ದಾನೆ. ನನ್ನ ಹೆಂಡತಿ ಪ್ರವಾಸಕ್ಕೆ ಹೋದವಳು ಇನ್ನು ವಾಪಸ್ ಬಂದಿಲ್ಲವೆಂದು ಸರ್ಕಾರಿ ಬಸ್​ ಕೆಳಗೆ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್​; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ 2 ಕೋಟಿಗೂ ಹೆಚ್ಚು ಮಹಿಳೆಯರ ಪ್ರಯಾಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಸ್ ನಿಲ್ದಾಣದಲ್ಲಿ ಕುಡಕ ಪತಿರಾಯ ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನು ಬಂದಿಲ್ಲವೆಂದು ಬಿಎಂಟಿಸಿ ಬಸ್ ಟೈರ್ ಕೆಳಗಡೆ ಮಲಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಅರ್ದಗಂಟೆಗೂ ಹೆಚ್ಚು ಕಾಲ ಕಿರಿಕ್ ಮಾಡಿದ್ದಾನೆ. ಈತನ ಅವಾಂತರದಿಂದ ಬಸ್​ನಲ್ಲಿ‌ ಕುಳಿತ ಪ್ರಯಾಣಿಕರ ಪರದಾಡುವಂತಾಯಿತು.

ಸಿದ್ದರಾಮಯ್ಯ ಸರಿಯಿಲ್ಲ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ. ಉಚಿತ ಬಸ್ ಪ್ರಯಾಣವನ್ನು ತೆಗೆದು ಹಾಕಬೇಕು ಎಂದು ಅಂತ ಪತಿರಾಯ ವಾಗ್ದಾಳಿ ಮಾಡಿದನು. ಕೊನೆಗೆ ಸ್ಥಳೀಯರು ಈತನನ್ನು ಬಸ್​ ಕೆಳಗಡೆಯಿಂದ ಹೊರಗೆ ಎಳೆದರು. ನಂತರ ಹೊಸಕೋಟೆ ಪೊಲೀಸರಿಗೆ ‌ಒಪ್ಪಿಸಿದರು. ಈತನ ಅವಾಂತರವನ್ನು ಸಾರ್ವಜನಿಕರು ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:50 pm, Thu, 29 June 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?