AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಆಟವಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಹೊಂಡಕ್ಕೆ ಬೇಲಿ ಅಳವಡಿಸದ ಹಿನ್ನೆಲೆಯಲ್ಲಿ ರೈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆ ಮುಂದುವರಿದೆ. ಪುಟ್ಟ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವುImage Credit source: Tv9 Kannada
ನವೀನ್ ಕುಮಾರ್ ಟಿ
| Edited By: |

Updated on:Jun 14, 2026 | 12:33 PM

Share

ದೊಡ್ಡಬಳ್ಳಾಪುರ, ಜೂನ್​​ 14: ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವವರ ಸರಣಿ ರಾಜ್ಯದಲ್ಲಿ ಮುಂದುರಿದಿದೆ. ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಆಟ ಆಡಲು ಹೋಗಿದ್ದ ದಕ್ಷಾ(11), ಧನುಷ್(4) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮುಖ್ಯಾಂಶಗಳು

  • ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು
  • ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟದಲ್ಲಿ ಘಟನೆ
  • ಪೋಷಕರಿಲ್ಲದ ವೇಳೆ ಆಡಲು ಹೋಗಿ ಭಾರಿ ದುರಂತ

ಕೃಷಿ ಹೊಂಡಕ್ಕಿರಲಿಲ್ಲ ಬೇಲಿ!

ಇನ್ನು ಮಕ್ಕಳು ಮೃತಪಟ್ಟಿರುವ ಕೃಷಿ ಹೊಂಡ ರೈತ ಗುರುಮೂರ್ತಿ ಎಂಬುವವರಿಗೆ ಸೇರಿದ್ದು, ಇದಕ್ಕೆ ಕನಿಷ್ಠ ಬೇಲಿಯನ್ನೂ ಹಾಕಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಫೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಘಟನೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಕಸ್ಟಮ್ಸ್​​ ಅಧಿಕಾರಿಗಳ ಭರ್ಜರಿ ಬೇಟೆ; ಬೆಂಗಳೂರು ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ

ಮೇಲಿಂದ ಮೇಲೆ ದುರಂತ

ಕೃಷಿ ಹೊಂಡ, ಕೆರೆ, ಸಂಪ್​​ ಮುಂತಾದವುಗಳಿಗೆ ಬಿದ್ದು ಮಕ್ಕಳೇ ಬಲಿಯಾಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿವೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರದಲ್ಲಿ ಮನೆ ಮುಂದಿನ ನೀರಿನ ಸಂಪ್​ಗೆ ಬಿದ್ದು 2 ವರ್ಷದ ಮಗು ಮೃತಪಟ್ಟಿರುವ ಘಟನೆ ನಿನ್ನೆ (ಜೂನ್​​ 13) ವರದಿಯಾಗಿತ್ತು. ಅತ್ತ ಬಾಗಲಕೋಟೆಯಲ್ಲಿಯೂ ನೀರಿನ ಟ್ಯಾಂಕ್​ನಲ್ಲಿ ಮುಳುಗಿ 18 ತಿಂಗಳ ಹೆಣ್ಣು ಮಗು ದಾರುಣ ಅಂತ್ಯ ಕಂಡ ಘಟನೆ ಜೂನ್​​ 8ರಂದು ನಡೆದಿತ್ತು. ಈ ಘಟನೆಗಳು ಮಾಸುವ ಮುನ್ನವೇ ಮತ್ತೊಂದು ದುರಂತವೀಗ ರಾಜ್ಯದಲ್ಲಿ ನಡೆದಿರೋದು ಆತಂಕ ಹೆಚ್ಚಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:47 am, Sun, 14 June 26

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ