AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್​: ಒಳ ರೋಗಿಗಳಿಗೆ ಊಟ ಕೊಟ್ಟು ಹಸಿವು ನೀಗಿಸಿದ ನೆಲಮಂಗಲ ತಾಲೂಕು ಆಸ್ಪತ್ರೆ

ಬಡ ರೋಗಿಗಳಿಗೆ ಸಂಜೀವಿನಿ ಆಗಬೇಕಾಗಿದ್ದ ನೆಲಮಂಗಲ ತಾಲೂಕು ಆಸ್ಪತ್ರೆಗೆ ರೋಗ ಹಿಡಿದಿತ್ತು. ಅಧಿಕಾರಿಗಳು ನಿಷ್ಕ್ರಿಯವಾಗಿದ್ದು, ಬಡ ರೋಗಿಗಳು ಊಟವಿಲ್ಲದೆ ಪರದಾಡುತ್ತಿದ್ದರು. ಈ ಕುರಿತು ಟಿವಿ9 ನಲ್ಲಿ ಸುದ್ದಿ ಬಂದಿದ್ದೆ ತಡ, ಕೂಡಲೇ ಒಳ ರೋಗಿಗಳಿಗೆ ಊಟ ಕೊಟ್ಟು ಹಸಿವು ನೀಗಿಸಿದ್ದಾರೆ.

ಟಿವಿ9 ಇಂಪ್ಯಾಕ್ಟ್​: ಒಳ ರೋಗಿಗಳಿಗೆ ಊಟ ಕೊಟ್ಟು ಹಸಿವು ನೀಗಿಸಿದ ನೆಲಮಂಗಲ ತಾಲೂಕು ಆಸ್ಪತ್ರೆ
ನೆಲಮಂಗಲ ತಾಲೂಕು ಆಸ್ಪತ್ರೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Mar 03, 2024 | 8:45 PM

Share

ಬೆಂಗಳೂರು ಗ್ರಾಮಾಂತರ, ಮಾ.03: ಕಳೆದ ಮೂರು ದಿನದಿಂದ ಒಳರೋಗಿಗಳಿಗೆ ಊಟ ಕೊಡದೆ ಟೆಂಡರ್ ಅವಧಿ ಮುಗಿದಿದೆ ಎಂದು ನೆಪ ಹೇಳಿಕೊಂಡು ರೋಗಿಗಳಿಗೆ ಊಟ ಕೂಡದೆ ಆಸ್ಪತ್ರೆಯ ಆಡಳಿತ ಮಂಡಳಿ, ಉದ್ದಡತನ ಮೆರೆದಿದ್ದರು. ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಆಸ್ಪತ್ರೆ(Nelamangala Taluk Hospital)ಯ ರೋಗಿಗಳು, ಊಟವಿಲ್ಲದೆ ಅಸಹಾಯಕರಾಗಿದ್ದರು. ಯಾವಾಗ ಈ ಕುರಿತು ಟಿವಿ9 ವರದಿ ಬಿತ್ತರಿಸಿತೋ, ತಕ್ಷಣ ಆಸ್ಪತ್ರೆಯ ಚಿತ್ರಣವೇ ಬದಲಾಗಿದೆ. ಈಗ ರೋಗಿಗಳಿಗೆ ಮೊಟ್ಟೆ,ಬಾಳೆಹಣ್ಣು,ಅನ್ನ-ಸಾಂಬಾರ್ ನೀಡಿ ರೋಗಿಗಳ ಹಸಿವನ್ನ ನೀಗಿಸಿದ್ದಾರೆ.

ಟಿವಿ9 ನಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಒಂದೇ ದಿನದಲ್ಲಿ ಆಸ್ಪತ್ರೆ ಚಿತ್ರಣವೇ ಬದಲಾಗಿ ಹೋಗಿದೆ. ಇನ್ನು ಆಸ್ಪತ್ರೆಗೆ ಅಂಟಿದ್ದ ಜಿಡ್ಡನ್ನ ತೊಳೆದು ಹಾಕೋಕೆ ಡಿಎಚ್ಒ ಸುನಿಲ್ ಕುಮಾರ್, ಟಿಎಚ್​ಒ ಆಗಿರುವ ಹೇಮಾವತಿ ಅವರು ಬಂದಿದ್ದರು. ಸೋಮಾರಿಯಾಗಿದ್ದ ಎಎಂಓ ಸೋನಿಯಾ ಎಂಬುವವರಿಗೆ ಬಿಸಿ ಮುಟ್ಟಿಸಿ, ಸರಿಯಾಗಿ ಕೆಲಸ ಮಾಡುವಂತೆ ಆದೇಶ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಊಟದಲ್ಲಿ ಏನೇ ಸಮಸ್ಯೆ ಆದರೂ ಕ್ಯಾಂಟೀನ್ ನಿರ್ವಾಹಕ ಹಾಗೂ ಆಸ್ಪತ್ರೆ ಆಡಳಿತದ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಮತ್ತು ರೋಗಿಗಳಿಗೆ ಚಿಕಿತ್ಸೆಗೂ ತೊಂದರೆ ಆಗದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.

ಇದನ್ನೂ ಓದಿ:ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆ

ಇನ್ನು ಆಸ್ಪತ್ರೆ ವಾತಾವರಣ ದಿಢೀರ್ ಎಂದು ಚೇಂಜ್ ಆಗಿದ್ದಕ್ಕೆ ಮಾತನಾಡಿದ ರೋಗಿಗಳು, ‘ಸಂತಸ ವ್ಯಕ್ತಪಡಿಸಿದ್ದು, ಟಿವಿ9 ಕಾರ್ಯವನ್ನ ಸ್ಲಾಗಿಸಿದ್ದಾರೆ.  ಸುದ್ದಿ ಪ್ರಸಾರಗೊಂಡ ಕಾರಣ ಆಸ್ಪತ್ರೆಯ ಊಟದ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಮತ್ತೆ ಏನಾದರೂ ಊಟದ ಸಮಸ್ಯೆ ಜೊತೆ ಇನ್ನೇನಾದರೂ ಸಮಸ್ಯೆ ಬಂದರೆ, ಟಿವಿ9 ಗೆ ಕರೆ ಮಾಡುವುದಾಗಿ ತಿಳಿಸಿದ್ದಾರೆ. ಏನೇ ಹೇಳಿ ಒಂದೇ ದಿನದಲ್ಲಿ ಆಸ್ಪತ್ರೆ ವಾತಾವರಣವೇ ಬದಲಾಗಿ ಹೋಗಿದ್ದು, ಆಸ್ಪತ್ರೆ ಸಿಬ್ಬಂದಿ ಇನ್ನು ಮುಂದೆ ಆದರೂ ನಿರ್ಲಕ್ಷ್ಯ ವಹಿಸದೆ ರೋಗಿಗಳ ಹಿತ ಕಾಪಾಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು