AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿ ಮಹಿಳೆ ಕೊಲೆ ಕೇಸ್​: ಸುಪಾರಿ ಕೊಟ್ಟಿದ್ದ ಸಂಬಂಧಿ ಸೇರಿ ಇಬ್ಬರು ಸೆರೆ

ದೇವನಹಳ್ಳಿ: ಡಿಸೆಂಬರ್ 24ರಂದು ದೇವನಹಳ್ಳಿ ತಾಲೂಕಿನ ಕಗ್ಗಲಹಳ್ಳಿಯಲ್ಲಿ ಒಂಟಿ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಗ್ಗಲಹಳ್ಳಿಯ ನಾಗೇಶ್, ಲಕ್ಷ್ಮೀಶ್ ಬಂಧಿತ ಆರೋಪಿಗಳು ಜಮೀನು ವಿವಾದ ಹಿನ್ನೆಲೆಯಲ್ಲಿ ರತ್ನಮ್ಮರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ರತ್ನಮ್ಮಳ ಸಂಬಂಧಿಯಾಗಿರುವ ನಾಗೇಶ್, ಮಹಿಳೆ ಹತ್ಯೆಗೆ ಲಕ್ಷ್ಮೀಶಗೆ 2 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದ. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ಪ್ರಕರಣವನ್ನು ತಿರುಚಲು, ಮಹಿಳೆಯ ಚೈನ್ ಕಿತ್ತುಕೊಂಡು ಹೋಗಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ರತ್ನಮ್ಮರನ್ನು ಕೊಲೆ […]

ಒಂಟಿ ಮಹಿಳೆ ಕೊಲೆ ಕೇಸ್​: ಸುಪಾರಿ ಕೊಟ್ಟಿದ್ದ ಸಂಬಂಧಿ ಸೇರಿ ಇಬ್ಬರು ಸೆರೆ
ಸಾಧು ಶ್ರೀನಾಥ್​
|

Updated on:Jan 04, 2020 | 1:08 PM

Share

ದೇವನಹಳ್ಳಿ: ಡಿಸೆಂಬರ್ 24ರಂದು ದೇವನಹಳ್ಳಿ ತಾಲೂಕಿನ ಕಗ್ಗಲಹಳ್ಳಿಯಲ್ಲಿ ಒಂಟಿ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಗ್ಗಲಹಳ್ಳಿಯ ನಾಗೇಶ್, ಲಕ್ಷ್ಮೀಶ್ ಬಂಧಿತ ಆರೋಪಿಗಳು

ಜಮೀನು ವಿವಾದ ಹಿನ್ನೆಲೆಯಲ್ಲಿ ರತ್ನಮ್ಮರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ರತ್ನಮ್ಮಳ ಸಂಬಂಧಿಯಾಗಿರುವ ನಾಗೇಶ್, ಮಹಿಳೆ ಹತ್ಯೆಗೆ ಲಕ್ಷ್ಮೀಶಗೆ 2 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದ. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ಪ್ರಕರಣವನ್ನು ತಿರುಚಲು, ಮಹಿಳೆಯ ಚೈನ್ ಕಿತ್ತುಕೊಂಡು ಹೋಗಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ರತ್ನಮ್ಮರನ್ನು ಕೊಲೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

Published On - 12:34 pm, Sat, 4 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More