AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ಸುಳ್ಳು ವರದಿ ಆರೋಪ; ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ(Doddaballapura) ತಾಲೂಕಿನ ವಡ್ಡರಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ತಹಶೀಲ್ದಾರ್‌ ಹಾಗೂ ಆರ್‌ಐ ಸುಳ್ಳು ವರದಿ ನೀಡಿದ ಆರೋಪದ ಹಿನ್ನಲೆ ವಡ್ಡರಹಳ್ಳಿ ಬಳಿ ಒತ್ತುವರಿಯಾಗಿರುವ ಜಮೀನು ಬಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ಸುಳ್ಳು ವರದಿ ಆರೋಪ; ಗ್ರಾಮಸ್ಥರ ಪ್ರತಿಭಟನೆ
ವಡ್ಡರಹಳ್ಳಿ ಜನರ ಪ್ರತಿಭಟನೆ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 04, 2024 | 4:22 PM

Share

ಬೆಂಗಳೂರು ಗ್ರಾಮಾಂತರ, ಜ.04: ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ವಡ್ಡರಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ತಹಶೀಲ್ದಾರ್‌ ಹಾಗೂ ಆರ್‌ಐ ಸುಳ್ಳು ವರದಿ ನೀಡಿದ ಆರೋಪದ ಹಿನ್ನಲೆ ವಡ್ಡರಹಳ್ಳಿ ಬಳಿ ಒತ್ತುವರಿಯಾಗಿರುವ ಜಮೀನು ಬಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಲೋಕಾಯುಕ್ತಕ್ಕೆ ಸಲ್ಲಿಸಲಾಗಿದ್ದ ಸುಳ್ಳು ವರದಿಯ ಪ್ರತಿಯನ್ನು ಹಿಡಿದು ಹೋರಾಟಕ್ಕೆ ಇಳಿದಿದ್ದಾರೆ.

ಈ ಹಿಂದೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿದ್ದ ಮೋಹನ್ ಕುಮಾರಿ ಹಾಗೂ ಆರ್‌ಐ ಶಿವಪ್ರಸಾದ್‌ ಎನ್ನುವವರು ಲೋಕಾಯುಕ್ತಕ್ಕೆ ಸುಳ್ಳು ವರದಿ ನೀಡಿರುವ ಆರೋಪ ಕೇಳಿಬಂದಿದ್ದು, ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಸುಳ್ಳು ವರದಿ ಸಲ್ಲಿಕೆಯ ಬಗ್ಗೆಯೋ ಕೂಡ ಲೋಕಾಯುಕ್ತಕ್ಕೂ ದೂರು ನೀಡಿದ್ದಾರೆ. ಜೊತೆಗೆ ಒತ್ತುವರಿ ತೆರವು ಮಾಡಿ ಗ್ರಾಮಸ್ಥರಿಗೆ ಸೈಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮೈಸೂರು: ಆಶ್ರಯ ಯೋಜನೆಗೆ ಮಂಜೂರಾಗಿದ್ದ ಜಮೀನು ಒತ್ತುವರಿ, ತಹಶೀಲ್ದಾರ್ ನೇತೃತ್ವದಲ್ಲಿ ತೆರವು

ಏನಿದು ಘಟನೆ

ವಡ್ಡರಹಳ್ಳಿಯ ಸರ್ವೆ ನಂಬರ್ 162ರಲ್ಲಿ 7ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಲೋಕಾಯುಕ್ತಕ್ಕೆ ದೂರು ‌ನೀಡಿದ್ದರು. ದೂರಿನನ್ವಯ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ಗೆ ಸೂಚಿಸಲಾಗಿತ್ತು. ಈ ವೇಳೆ ಒತ್ತುವರಿ ತೆರವು ಮಾಡಿ ಬೋರ್ಡ್ ಹಾಕಿರುವುದಾಗಿ ತಹಶೀಲ್ದಾರ್‌ ಮತ್ತು ಆರ್​ಐ ಲೋಕಾಯುಕ್ತಕ್ಕೆ ಸುಳ್ಳು ವರದಿ ಸಲ್ಲಿಸಿದ್ದಾರೆಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಈ ಹಿನ್ನಲೆಯೇ ಇಂದು ಪ್ರತಿಭಟನೆಗೆ ಇಳಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ