AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ಸುಳ್ಳು ವರದಿ ಆರೋಪ; ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ(Doddaballapura) ತಾಲೂಕಿನ ವಡ್ಡರಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ತಹಶೀಲ್ದಾರ್‌ ಹಾಗೂ ಆರ್‌ಐ ಸುಳ್ಳು ವರದಿ ನೀಡಿದ ಆರೋಪದ ಹಿನ್ನಲೆ ವಡ್ಡರಹಳ್ಳಿ ಬಳಿ ಒತ್ತುವರಿಯಾಗಿರುವ ಜಮೀನು ಬಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ಸುಳ್ಳು ವರದಿ ಆರೋಪ; ಗ್ರಾಮಸ್ಥರ ಪ್ರತಿಭಟನೆ
ವಡ್ಡರಹಳ್ಳಿ ಜನರ ಪ್ರತಿಭಟನೆ
ನವೀನ್ ಕುಮಾರ್ ಟಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 04, 2024 | 4:22 PM

Share

ಬೆಂಗಳೂರು ಗ್ರಾಮಾಂತರ, ಜ.04: ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ವಡ್ಡರಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ತಹಶೀಲ್ದಾರ್‌ ಹಾಗೂ ಆರ್‌ಐ ಸುಳ್ಳು ವರದಿ ನೀಡಿದ ಆರೋಪದ ಹಿನ್ನಲೆ ವಡ್ಡರಹಳ್ಳಿ ಬಳಿ ಒತ್ತುವರಿಯಾಗಿರುವ ಜಮೀನು ಬಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಲೋಕಾಯುಕ್ತಕ್ಕೆ ಸಲ್ಲಿಸಲಾಗಿದ್ದ ಸುಳ್ಳು ವರದಿಯ ಪ್ರತಿಯನ್ನು ಹಿಡಿದು ಹೋರಾಟಕ್ಕೆ ಇಳಿದಿದ್ದಾರೆ.

ಈ ಹಿಂದೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿದ್ದ ಮೋಹನ್ ಕುಮಾರಿ ಹಾಗೂ ಆರ್‌ಐ ಶಿವಪ್ರಸಾದ್‌ ಎನ್ನುವವರು ಲೋಕಾಯುಕ್ತಕ್ಕೆ ಸುಳ್ಳು ವರದಿ ನೀಡಿರುವ ಆರೋಪ ಕೇಳಿಬಂದಿದ್ದು, ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಸುಳ್ಳು ವರದಿ ಸಲ್ಲಿಕೆಯ ಬಗ್ಗೆಯೋ ಕೂಡ ಲೋಕಾಯುಕ್ತಕ್ಕೂ ದೂರು ನೀಡಿದ್ದಾರೆ. ಜೊತೆಗೆ ಒತ್ತುವರಿ ತೆರವು ಮಾಡಿ ಗ್ರಾಮಸ್ಥರಿಗೆ ಸೈಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮೈಸೂರು: ಆಶ್ರಯ ಯೋಜನೆಗೆ ಮಂಜೂರಾಗಿದ್ದ ಜಮೀನು ಒತ್ತುವರಿ, ತಹಶೀಲ್ದಾರ್ ನೇತೃತ್ವದಲ್ಲಿ ತೆರವು

ಏನಿದು ಘಟನೆ

ವಡ್ಡರಹಳ್ಳಿಯ ಸರ್ವೆ ನಂಬರ್ 162ರಲ್ಲಿ 7ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಲೋಕಾಯುಕ್ತಕ್ಕೆ ದೂರು ‌ನೀಡಿದ್ದರು. ದೂರಿನನ್ವಯ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ಗೆ ಸೂಚಿಸಲಾಗಿತ್ತು. ಈ ವೇಳೆ ಒತ್ತುವರಿ ತೆರವು ಮಾಡಿ ಬೋರ್ಡ್ ಹಾಕಿರುವುದಾಗಿ ತಹಶೀಲ್ದಾರ್‌ ಮತ್ತು ಆರ್​ಐ ಲೋಕಾಯುಕ್ತಕ್ಕೆ ಸುಳ್ಳು ವರದಿ ಸಲ್ಲಿಸಿದ್ದಾರೆಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಈ ಹಿನ್ನಲೆಯೇ ಇಂದು ಪ್ರತಿಭಟನೆಗೆ ಇಳಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ